ಅ.1 ರಿಂದ ಪಂಚಮಸಾಲಿ ಸಮುದಾಯದಿಂದ ಸತ್ಯಾಗ್ರಹ: ಬಸವಜಯ ಮೃತ್ಯುಂಜಯ ಸ್ವಾಮೀಜಿ
Team Udayavani, Sep 19, 2021, 12:42 PM IST
ಕೊಪ್ಪಳ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿ ಪಾದಯಾತ್ರೆ ನಡೆಸಿ ಸರ್ಕಾರದ ಗಮನ ಸೆಳೆಯಲಾಗಿದೆ. ಈಗ ಅ.01 ರಿಂದ ಸತ್ಯಾಗ್ರಹ ಆರಂಭಿಸಲು ಸಮುದಾಯ ತೀರ್ಮಾನಿಸಿದೆ ಎಂದು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಹೇಳಿದರು.
ಕೊಪ್ಪಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಅ.01 ರ ಒಳಗೆ ಸಿಎಂ ಬೊಮ್ಮಾಯಿ ಅವರು ಮೀಸಲಾತಿ ಘೋಷಿಸಬೇಕು. ಇಲ್ಲವಾದರೆ ಬೆಂಗಳೂರಿನಲ್ಲೇ ಹೋರಾಟ ಆರಂಭಿಸಲಾಗುವುದು. ಪಂಚಮಸಾಲಿ ಪೀಠದಿಂದ ಮಾಡಿದ ಪ್ರತಿಭಟನೆಯಿಂದ ಇಡೀ ರಾಜ್ಯದ ಪಂಚಮಸಾಲಿ ಸಮುದಾಯ ಒಂದಾಗಿದೆ ಎಂದರು.
ಇದನ್ನೂ ಓದಿ:ಕೇಂದ್ರೀಯ ಸಂಸ್ಕೃತ ವಿಶ್ವ ವಿದ್ಯಾಲಯದ ಕ್ಯಾಂಪಸ್ ಗೆ ಶಂಕರಾಚಾರ್ಯರ ಹೆಸರು ಸೂಕ್ತ :ಕರಂದ್ಲಾಜೆ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ಮಾಡಲಾಗಿತ್ತು. ಆ ವೇಳೆ ರಾಜ್ಯ ಸರ್ಕಾರ 6 ತಿಂಗಳ ಸಮಯ ಕೇಳಿತ್ತು. ತಾವೇ ಕೇಳಿದ್ದ ಸಮಯ ಮೀರಿದ್ದು, ಬೇಡಿಕೆ ಈಡೇರಿಲ್ಲ. ಈ ಕಾರಣಕ್ಕೆ ಸರ್ಕಾರಕ್ಕೆ ನಮ್ಮ ಬೇಡಿಕೆ ನೆನಪಿಸಲು ಮತ್ತೇ ಅಭಿಯಾನ ಆರಂಭಿಸಲಾಗಿದೆ. ಪ್ರತಿಜ್ಞಾ ಪಂಚಾಯತ್ ಬೃಹತ್ ರಾಜ್ಯ ಅಭಿಯಾನ ಸಮಾವೇಶ ಆರಂಭಕ್ಕೂ ಮೊದಲು ಸರ್ಕಾರಕ್ಕೆ ಸ್ವಾಮೀಜಿ ಮತ್ತೆ ಗಡುವು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ