ಗ್ರಾಪಂನಿಂದ ಶಾಲೆ ಅಭಿವೃದ್ಧಿ


Team Udayavani, Feb 1, 2020, 3:01 PM IST

KOPALA-TDY-2

ಯಲಬುರ್ಗಾ: ತಾಲೂಕಿನ ಗ್ರಾಪಂಗಳಿಂದ ಗ್ರಾಪಂ ವ್ಯಾಪ್ತಿಯ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಮುಂದಾಗಲಿವೆ. ಈ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿದ್ದೇನೆ ಎಂದು ತಾಪಂ ಇಒ ಡಾ| ಜಯರಾಂ ಚವಾಣ ಹೇಳಿದರು.

ತಾಲೂಕಿನ ಸಂಗನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಗ್ರಾಪಂ ಹಾಗೂ ಶಿಕ್ಷಣ ಇಲಾಖೆ ವತಿಯಿಂದ

ನಡೆದ ಗ್ರಾಪಂ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧಾ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆಗಳಿಗೆ ಅವಶ್ಯಕವಾಗಿ ಬೇಕಾಗಿರುವ ಕಾಂಪೌಂಡ್‌, ಶಾಲಾ ಮೈದಾನ ನಿರ್ಮಾಣ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯ ಕಲ್ಪಿಸಿಕೊಡುವ ಕಾರ್ಯವನ್ನು ಗ್ರಾಪಂಗಳು ಕಡ್ಡಾಯವಾಗಿ ಮಾಡಲಿವೆ. ಪ್ರತಿಯೊಂದು ಶಾಲೆಯ ಮುಖ್ಯಶಿಕ್ಷಕರು ಹಾಗೂ ಎಸ್‌ ಡಿಎಂಸಿ ಸಮಿತಿ ಸದಸ್ಯರು ಗ್ರಾಪಂಗೆ ಸೌಲಭ್ಯಗಳ ಕುರಿತು ಅರ್ಜಿ ಸಲ್ಲಿಸಬೇಕು ಎಂದರು.

ಮಕ್ಕಳಿಗೆ ಕಬ್ಬಿಣದ ಕಡಲೆಯಾಗಿರುವ ಗಣಿತ ವಿಷಯದ ಬಗೆಗಿನ ಭಯ ಹೋಗಲಾಡಿಸಿ ಆತ್ಮಸ್ಥೈರ್ಯ ನೀಡಲು ಗಣಿತ ಸ್ಪರ್ಧೆ ಪೂರಕವಾಗಿದೆ ಎಂದು ತಿಳಿಸಿದರು. ಪಿಡಿಒ ರಾಮಣ್ಣ ದೊಡ್ಡಮನಿ ಮಾತನಾಡಿ, ಪರಿಕರಗಳ ಸಹಾಯದಿಂದ ಬೋಧಿ  ಸುವುದರಿಂದ ಗಣಿತವನ್ನು ಸರಳವಾಗಿ ಅರ್ಥಮಾಡಿಸಬಹುದಾಗಿದೆ. ಇದರ ಜತೆಗೆ ಸರಳ ಸೂತ್ರ ಅನುಸರಿಸಿದರೆ ಗಣಿತದಷ್ಟುಸುಲಭ ವಿಷಯ ಯಾವುದೂ ಇಲ್ಲ. ಕಷ್ಟ ಎನಿಸುವ ವಿಷಯಗಳ ಕಡೆ ಹೆಚ್ಚಿನ ಗಮನ ಹರಿಸಿದರೆ ಎಲ್ಲವೂ ಸಲೀಸಾಗುತ್ತದೆ ಎಂದು ಸಲಹೆ ನೀಡಿದರು.  ಮಕ್ಕಳಿಗೆ ಕ್ಲಿಷ್ಟವೆನಿಸುವಂತಹ ವಿಷಯಗಳನ್ನು ಸರಳ ವಿಧಾನಗಳ ಮೂಲಕ ಕಲಿಸುವ ಪ್ರಯತ್ನ ಶಿಕ್ಷಕರು ಮಾಡಬೇಕು. ವಿವಿಧ ಚಟುವಟಿಕೆ ಆಧಾರಿತ ಕಲಿಕೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಶಾಲೆಯ ಶಿಕ್ಷಕರು ಸರಿಯಾಗಿ ಮಕ್ಕಳ ವಿದ್ಯಾಭ್ಯಾಸದ ಅಭಿವೃದ್ಧಿ ಕಡೆ ವಿಶೇಷ ಗಮನ ಹರಿಸಬೇಕು. ಎಲ್ಲ ವಿಷಯಗಳಿಗಿಂತ ಮಕ್ಕಳಿಗೆ ಗಣಿತ ವಿಷಯ ಹೆಚ್ಚು ಅವಶ್ಯಕವಿದೆ. ಆದರಿಂದ ಮಕ್ಕಳಿಗೆ ಗಣಿತದ ಕುರಿತು ಸರಳ ವಿಧಾನ ಅನುಸರಿಸಿ ಪಾಠ ಬೋಧನೆ ಮಾಡಬೇಕು. ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಗುರುಗಳು ಹೇಳಿದ ಪಾಠವನ್ನು ಸರಿಯಾಗಿ ತಿಳಿದುಕೊಂಡು ಅಭ್ಯಾಸ ಮಾಡಬೇಕು ಎಂದರು.

ಬಸವರಾಜ ಹಳ್ಳಿ, ಲಕ್ಷ್ಮಣ್ಣ ಕೆರಳ್ಳಿ, ಎಸ್‌ ಡಿಎಂಸಿ ಪದಾಧಿಕಾರಿಗಳು, ಮುಖ್ಯಶಿಕ್ಷಕರು, ಗ್ರಾಪಂ ಸದಸ್ಯರು ಇತರರಿದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.