ಗಿಣಗೇರಿ ಕೆರೆ ತಟದಲ್ಲಿ ಸೈನ್ಸ್ ಪಾರ್ಕ್‌ಗೆ ಚಿಂತನೆ


Team Udayavani, Mar 26, 2021, 7:33 PM IST

ಗಿಣಗೇರಿ ಕೆರೆ ತಟದಲ್ಲಿ ಸೈನ್ಸ್ ಪಾರ್ಕ್‌ಗೆ ಚಿಂತನೆ

ಕೊಪ್ಪಳ: ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿಗಳ ಸಂಕಲ್ಪದಂತೆ ತಾಲೂಕಿನ ಗಿಣಗೇರಿ ಕೆರೆ ಹೂಳೆತ್ತುವ ಕಾರ್ಯ ಭರದಿಂದ ಸಾಗಿದೆ. ಕೆರೆ ಹೂಳೆತ್ತಿದ ಬಳಿಕ ಅಂದಾಜು 12 ಎಕರೆ ಜಾಗದಲ್ಲಿ ಸೈನ್ಸ್‌ ಪಾರ್ಕ್‌ ಮಾಡುವ ಕುರಿತಂತೆ ಶ್ರೀಗಳು, ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಹೂಳೆತ್ತುವ ತಂಡದ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ. ಇದರಿಂದ ಜಿಲ್ಲೆಯಶಾಲಾ ಮಕ್ಕಳಿಗೆ ಪ್ರವಾಸ ತಾಣದ ಜೊತೆಗೆ ಅವರ ಶೈಕ್ಷಣಿಕ ಕಲಿಕೆಗೂ ಪೂರಕವಾಗಲಿದೆ.

ಹೌದು.. ಶ್ರೀ ಗವಿಸಿದ್ದೇಶ್ವರ ಸ್ವಾಮಿಗಳು ಯೋಚನಾ ಲಹರಿಯೇ ವಿಭಿನ್ನ ಹಾಗೂ ವಿಶಿಷ್ಠತೆಯಿಂದ ಕೂಡಿರುತ್ತದೆ ಎಂಬುದಕ್ಕೆ ಇಂತಹ ಆಲೋಚನೆಗಳೇ ಸಾಕ್ಷಿ. ಕೇವಲ ಕೆರೆ ಹೂಳೆತ್ತಿ, ನೀರು ನಿಲ್ಲಿಸಿ, ಪ್ರವಾಸಿ ತಾಣವನ್ನಾಗಿ ಮಾಡಿದರಷ್ಟೇ ಸಾಲದು.ಪ್ರವಾಸಿಗರಿಗೆ ಮುದ ನೀಡುವ ಜೊತೆಗೆ ಶಾಲಾಮಕ್ಕಳು ಇಲ್ಲಿಗೆ ಪ್ರವಾಸ ಕೈಗೊಂಡಾಗ ಅವರ ಕಲಿಕೆಗೆ ಉಪಯುಕ್ತವಾಗುವ ರೀತಿಯಲ್ಲಿ ಸೈನ್ಸ್‌ ಪಾರ್ಕ್‌ನಿರ್ಮಾಣ ಮಾಡಬೇಕೆಂಬ ಚಿಂತನೆ ನಡೆದಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.

ಜಿಲ್ಲೆಯ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಸೈನ್ಸ್‌ ಪಾರ್ಕ್‌ ಮುಂದಿನ ದಿನದಲ್ಲಿ ತುಂಬಾ ಉಪಯುಕ್ತವಾಗಲಿದೆ. ಇಲ್ಲಿ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಮಾನವನ ದೇಹದ ಆಕೃತಿ, ತಲೆ, ಮಿದುಳು, ಹೃದಯ, ಕೈ, ಕಾಲುಗಳು, ಗಣಿತ ವಿಷಯಕ್ಕೆ ಸಂಬಂಧಿಸಿ ಆಯತ, ತ್ರಿಭಜ, ಚೌಕ, ಸೊನ್ನೆಯಂತಆಕೃತಿಗಳನ್ನು ನಿರ್ಮಿಸಲಾಗುವುದು. ಮಕ್ಕಳು ಶಿಕ್ಷಣದತ್ತ ಒಲವು ತೋರುವಂತೆ ಮಾಡುವುದು ಇದರ ಉದ್ದೇಶವಾಗಿದೆ. ಪ್ರತಿವರ್ಷ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗಳ ವತಿಯಿಂದಲೇ ಶೈಕ್ಷಣಿಕ

ಪ್ರವಾಸ ನಡೆಯುತ್ತವೆ. ಅಂತಹ ಸಂದರ್ಭದಲ್ಲಿಗಿಣಗೇರಿ ಕೆರೆ ಸ್ಥಳಕ್ಕೆ ವಿದ್ಯಾರ್ಥಿಗಳನ್ನು ಕರೆ ತಂದು ಅವರಿಗೆ ಅಲ್ಲಿನ ವಿಜ್ಞಾನ, ಸಮಾಜ, ಗಣಿತ ವಿಷಯ ಸಂಬಂಧಿತ ವಸ್ತು, ಆಕೃತಿಗಳನ್ನು ತೋರಿಸುವ ಮೂಲಕ ಶಿಕ್ಷಕರು ಸ್ಥಳ ಪಾಠ ಮಾಡುವುದು, ಅದರ ಬಗ್ಗೆ ಸಂಕ್ಷಿಪ್ತ ವಿವರಣೆ ಕೊಡುವ ಕಾರ್ಯ ನಡೆಯಲಿದೆ. ಸೈನ್ಸ್‌ಪಾರ್ಕ್‌ಗೆ ಬೇಕಾದ ಸಾಮಗ್ರಿಗಳನ್ನು ಜನರು ನೀಡುವ ದೇಣಿಗೆ ಹಣದಲ್ಲಿ ಖರೀದಿ ಮಾಡುವುದು. ಇಲ್ಲವೇಸರ್ಕಾರ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಅನುದಾನದ ನೆರವಿನಿಂದ ಸಾಮಗ್ರಿ ಖರೀದಿಸಿ ಪಾರ್ಕ್‌ ನಿರ್ಮಿಸುವ ಚಿಂತನೆ ನಡೆದಿದೆ. ಈ ಕುರಿತಂತೆ

ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ, ಶಾಸಕ ರಾಘವೇಂದ್ರ ಹಿಟ್ನಾಳ, ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಅವರು ಕೆರೆಯ ತಟದಲ್ಲೇ ಸಮಾಲೋಚನೆ ನಡೆಸಿದ್ದಾರೆ.

ಅರಣ್ಯೀಕರಣಕ್ಕೆ ಒತ್ತು: ಕೆರೆ ಹೂಳೆತ್ತುವ ಜೊತೆಗೆ ಸುತ್ತಲೂ ಹಾಗೂ ಕೆರೆಯ ಖಾಲಿ ಜಾಗದಲ್ಲಿ ಅರಣ್ಯೀಕರಣ ಮಾಡಲು ಯೋಜನೆ ರೂಪಿಸಲಾಗಿದೆ.ಹೂಳೆತ್ತುವ ಕಾರ್ಯ ಮುಗಿದ ನಂತರ ಕೆರೆಯ ಸುತ್ತಲೂ ಬಗೆ ಬಗೆಯ ಗಿಡಗಳನ್ನು ನೆಡುವುದು,ಕೆಲವೊಂದು ಔಷ ಧಿಯ ಗಿಡಗಳನ್ನು ನೆಡುವುದು, ಇನ್ನು ಕೆಲವು ಹೂವಿನ ಗಿಡಗಳನ್ನು ನೆಟ್ಟುಇದನ್ನೊಂದು ಪ್ರವಾಸಿ ತಾಣವನ್ನಾಗಿ ಮಾರ್ಪಡಿಸಿ ಜನರನ್ನು ಆಕರ್ಷಿಲು ಚಿಂತನೆ ನಡೆದಿದೆ. ಇದಲ್ಲದೇಕೆರೆಯ ಮಧ್ಯದಲ್ಲಿ ನಡುಗಡ್ಡೆ ಮಾಡಿ ಅಲ್ಲಿ ಪಾರ್ಕ್‌ ನಿರ್ಮಿಸಿ ಜನರು ಬೋಟ್‌ ಮೂಲಕ ತೆರಳಲು ವ್ಯವಸ್ಥೆ ಕೈಗೊಳ್ಳುವಂತ ಯೋಜನೆ ಹಾಕಲಾಗಿದೆ.

ಗಿಣಗೇರಿ ಕೆರೆ ಹೂಳೆತ್ತುವ ಕಾರ್ಯ ಸಾಂಘವಾಗಿ ನಡೆದಿದೆ. ದಾನಿಗಳುಮುಂದೆ ಬಂದು ಹೂಳೆತ್ತುವ ಕಾರ್ಯಕ್ಕೆ ನೆರವುನೀಡುತ್ತಿದ್ದಾರೆ. ಆ ಗವಿಸಿದ್ದೇಶ್ವರ ಸ್ವಾಮಿಗಳಆಶೀರ್ವಾದದಿಂದ ಮುಂದಿನ ದಿನದಲ್ಲಿಕೆರೆಯ ಚಿತ್ರಣವೇ ಬದಲಾಗಲಿದೆ. ಅಲ್ಲದೇ,ಶಾಲಾ ಮಕ್ಕಳಿಗಾಗಿ ಕೆರೆಯ ಖಾಲಿ ಜಾಗದಲ್ಲಿ ಸೈನ್ಸ್‌ ಪಾರ್ಕ್‌ ನಿರ್ಮಿಸುವ ಕುರಿತಂತೆ ಶಾಸಕರು, ಶ್ರೀಗಳು, ಜಿಲ್ಲಾಧಿಕಾರಿ ಚಿಂತನೆ ನಡೆಸಿದ್ದಾರೆ. ಸೈನ್ಸ್‌ ಪಾರ್ಕ್‌ಗೆ ಬೇಕಾದ ಅಗತ್ಯ ಅನುದಾನದ ಕುರಿತು ಚರ್ಚಿಸಲಾಗಿದೆ. ಜೊತೆಗೆ ಕೆರೆಯ ಸುತ್ತಲು ಅರಣ್ಯೀಕರಣ, ನಡುಗಡ್ಡೆ ಮಾಡುವ ಕುರಿತಂತೆಯೂ ಚರ್ಚೆ ನಡೆದಿದೆ.  –ಗೂಳಪ್ಪ ಹಲಗೇರಿ, ಕರಿಯಪ್ಪ ಮೇಟಿ, ಗಿಣಗೇರಿ ಮುಖಂಡರು.

 

-ದತ್ತು ಕಮ್ಮಾರ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.