ಪರೀಕ್ಷಾರ್ಥಿಗಳ ಅಂಗಿ ತೋಳಿಗೆ ಕತ್ತರಿ !

ಕೊಪ್ಪಳದಲ್ಲಿ ನಡೆದ ಸಹಾಯಕ ಎಂಜಿನಿಯರ್‌ ಪರೀಕ್ಷೆ; ನವಚೇತನ ಪಪೂ ಕಾಲೇಜಿನಲ್ಲಿ ನಡೆದ ಅವಾಂತರ

Team Udayavani, Aug 8, 2022, 5:32 PM IST

19

ಕೊಪ್ಪಳ: ಪಿಎಸ್‌ಐ ಪರೀಕ್ಷೆಯ ಅಕ್ರಮ ಜಗಜ್ಜಾಹೀರಾದ ಬೆನ್ನೆಲ್ಲೆ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಪ್ರಸ್ತುತ ನಡೆಯುವ ಪ್ರತಿ ಪರೀಕ್ಷೆ ಮೇಲೆ ತೀವ್ರ ನಿಗಾ ಇರಿಸಿದೆ.

ಯಾವುದೇ ಅಕ್ರಮ ನಡೆಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದಂತೆ ಕಾಣುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ನಗರದಲ್ಲಿ ನಡೆದ ಕೆಪಿಟಿಸಿಎಲ್‌ ಸಹಾಯಕ ಎಂಜಿನಿಯರ್‌ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯುವ ಮುನ್ನಾ ಅವರ ಶರ್ಟ್‌ ತೋಳುಗಳಿಗೆ ಕತ್ತರಿ ಪ್ರಯೋಗ ಮಾಡಿ ಆಕ್ರೋಶಕ್ಕೆ ಕಾರಣವಾಗಿದೆ.

ಹೌದು.. ಕೊಪ್ಪಳ ಹಾಗೂ ಗಂಗಾವತಿ ನಗರದಲ್ಲಿ ರವಿವಾರ ಕೆಪಿಟಿಸಿಎಲ್‌ ಸಹಾಯಕ ಎಂಜನಿಯರ್‌ಗಳ ಪರೀಕ್ಷೆ ನಡೆದಿದ್ದವು. ಪರೀಕ್ಷೆಗೆ ತುಂಬ ತೋಳಿನ ಶರ್ಟ್‌ ತೊಟ್ಟು ಬಂದಿದ್ದ ಅಭ್ಯರ್ಥಿಗಳು ಸರ್ಕಾರದ ಕಠಿಣ ನಿಯಮಗಳಿಂದ ಪೇಚಿಗೆ ಸಿಲುಕುವಂತೆ ಮಾಡಿತು. ಇತ್ತೀಚೆಗೆ ಕಲಬುರ್ಗಿಯಲ್ಲಿ ನಡೆದ ಪಿಎಸ್‌ಐ ಪರೀಕ್ಷಾ ನೇಮಕಾತಿಯಲ್ಲಿ ಏರ್‌ಫೋನ್‌, ಬ್ಲೂ ಟೂತ್‌ಗಳ ಬಳಕೆ ನಡೆದಿರುವ ವಿಚಾರ ಎಲ್ಲೆಡೆ ಸದ್ದು ಮಾಡಿತ್ತು.

ಇಂತಹ ವಿಚಾರಗಳ ಮೇಲೆ ನಿಗಾ ಇರಿಸಲು ಸರ್ಕಾರ ಪರೀಕ್ಷೆಗೆ ಬರುವ ಅಭ್ಯರ್ಥಿಗಳ ಉಡುಪಿನ ಮೇಲೂ ನಿಗಾ ಇಡುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಭಾಗ್ಯನಗರದ ನವ ಚೇತನ ಪಪೂ ಕಾಲೇಜಿನಲ್ಲಿ ರವಿವಾರ ನಡೆದ ಕೆಪಿಟಿಸಿಎಲ್‌ ಸಹಾಯಕ ಎಂಜಿನಿಯರ್‌ಗಳ ಪರೀಕ್ಷೆಯಲ್ಲಿನ ಅವಾಂತರವೇ ಇದಕ್ಕೆ ಸಾಕ್ಷಿಯಾಗಿದೆ.

ಇಲ್ಲಿಗೆ ಅಭ್ಯರ್ಥಿಗಳು ಸಹಜವಾಗಿಯೇ ಪರೀಕ್ಷೆ ಬರೆಯಲು ಆಗಮಿಸಿದ್ದರು. ಆದರೆ ಪರೀಕ್ಷಾ  ಕೇಂದ್ರದ ಸಿಬ್ಬಂದಿ ತುಂಬು ತೋಳಿನ ಶರ್ಟ್‌ ಧರಿಸಿ ಬಂದಿರುವ ಅಭ್ಯರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿ, ನಿಮ್ಮ ಉದ್ದ ತೋಳುಗಳನ್ನು ಕಟ್‌ ಮಾಡಿಕೊಳ್ಳಿ. ಹಾಫ್‌ ತೋಳು ಇರುವ ಅಭ್ಯರ್ಥಿಗಳಿಗೆ ಒಳಗೆ ಪ್ರವೇಶವಿದೆ ಎನ್ನುವ ಸಂದೇಶ ನೀಡಿದ್ದಾರೆ. ಇದರಿಂದ ಅಭ್ಯರ್ಥಿಗಳು ಪೇಚಿಗೆ ಸಿಲುಕಿದ್ದಾರೆ. ಪರೀಕ್ಷೆ ಬರೆಯದೇ ವಿಧಿಯಿಲ್ಲ ಎಂದು ತುಂಬ ತೋಳಿನ ಅಂಗಿ ಧರಿಸಿ ಬಂದಿದ್ದ ಅಭ್ಯರ್ಥಿಗಳು ಅಲ್ಲಿಯೇ ತಮ್ಮ ಎರಡೂ ಶರ್ಟ್ ನ ತೋಳು ಕತ್ತರಿಸಿಕೊಂಡು ಆಫ್‌ ಶರ್ಟ್‌ ತರ ಮಾಡಿಕೊಂಡು ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದಾರೆ. ಟೀ ಶರ್ಟ್‌ ಇದ್ದರೂ ಅವರ ತೋಳುಗಳನ್ನೂ ಪರೀಕ್ಷಾ ಸಿಬ್ಬಂದಿ ಕತ್ತರಿಸಿದ್ದಾರೆ. ಸರ್ಕಾರದ ಈ ಕತ್ತರಿ ಪ್ರಯೋಗ ಆಕ್ರೋಶಕ್ಕೂ ಕಾರಣವಾಗಿದೆ.

ಪರೀಕ್ಷೆ ನಡೆಸುವ ಸಂಸ್ಕೃತಿ ಇದೇನಾ? ಪರೀಕ್ಷಾ ಕೇಂದ್ರದ ಸಿಬ್ಬಂದಿ ಅಭ್ಯರ್ಥಿಗಳನ್ನು ಪ್ರತಿ ಹಂತದಲ್ಲಿ ಪರೀಕ್ಷೆಗೆ ಒಳಪಡಿಸಲಿ. ಆದರೆ ಶರ್ಟ್‌ ನ ತೋಳು ಕತ್ತರಿಸುವ ಹಂತಕ್ಕೆ ತೆರಳಿದ್ದು ನಿಜಕ್ಕೂ ಪರೀಕ್ಷಾ ನಡೆಸುವ ಸಂಸ್ಕೃತಿ ಇದೇನಾ ಎಂದು ಸರ್ಕಾರ ಹಾಗೂ ಕಾಲೇಜು ಪರೀಕ್ಷಾ ಸಿಬ್ಬಂದಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.