ಪಡಿತರ ಧಾನ್ಯ ತರಲು ಹರಸಾಹಸ; ಉಪಕೇಂದ್ರ ಮಾಡಲು ಗ್ರಾಮಸ್ಥರ ಒತ್ತಾಯ


Team Udayavani, Jun 1, 2023, 5:05 PM IST

ಪಡಿತರ ಧಾನ್ಯ ತರಲು ಹರಸಾಹಸ; ಉಪಕೇಂದ್ರ ಮಾಡಲು ಗ್ರಾಮಸ್ಥರ ಒತ್ತಾಯ

ದೋಟಿಹಾಳ: ತೋನಸಿಹಾಳ ಗ್ರಾಮದ ಮತ್ತು ತಾಂಡಾದ ಜನರು ಪ್ರತಿ ತಿಂಗಳ ಪಡಿತರ ಧಾನ್ಯ ಪಡೆಯಲು ಗ್ರಾಮದಿಂದ 2 ಕಿ.ಮೀ. ದೂರದಲ್ಲಿರುವ ಗೋತಗಿ ಗ್ರಾಮಕ್ಕೆ ಹೋಗಬೇಕು. ಪಡಿತರ ಪಡೆಯಲು ಗೋತಗಿ ಗ್ರಾಮಕ್ಕೆ ಹೋಗಲು ಸರಿಯಾದ ಸಾರಿಗೆ ಸೌಲಭ್ಯವಿಲ್ಲದಿರುವುದರಿಂದ ತೋಸಿಹಾಳ ತಾಂಡಾ ಮತ್ತು ಗ್ರಾಮದ ಜನರು ಗೋತಗಿ ಗ್ರಾಮಕ್ಕೆ ನಡೆದುಕೊಂಡು ಹೋಗಿ ಪಡಿತರ ಧಾನ್ಯ ತರುವಂತಾಗಿದೆ.

ಎರಡು ಗ್ರಾಮದಲ್ಲಿ ಬಡ ಕೃಷಿ ಕೂಲಿ ಕಾರ್ಮಿಕರು ಹೆಚ್ಚಾಗಿದ್ದು, ಬದುಕಿಗೆ ಕೂಲಿಯನ್ನೇ ಅವಲಂಬಿಸಿದ್ದಾರೆ. ಇಲ್ಲಿಯ ಜನ ಪ್ರತಿ ತಿಂಗಳ ಕೂಲಿ ಕೆಲಸ ಬಿಟ್ಟು ಪಡಿತರಕ್ಕಾಗಿ ದಿನವೆಲ್ಲ ಕಳೆಯಬೇಕಾಗಿದೆ. ಇದರಿಂದ ವೃದ್ಧರು, ಮಹಿಳೆಯರು, ಮಕ್ಕಳು ದೂರದ ಊರಿಗೆ ಹೋಗಿ ಪಡಿತರ ತರಲು ಪರದಾಡಬೇಕಾಗಿದೆ. ತೋನಸಿಹಾಳ ಗ್ರಾಮಸ್ಥರು ಗೋತಗಿ ಗ್ರಾಮಕ್ಕೆ ಹೋಗಿ, ಬರಲು ಸರಿಯಾದ ವಾಹನದ ವ್ಯವಸ್ಥೆಯಿಲ್ಲ. ಕೆಲವರು ಬೈಕ್‌ಗಳ ಮೂಲಕ ಪಡಿತರ ಧಾನ್ಯ ತಂದರೆ, ಇನ್ನೂ ಕೆಲವರು ನಡೆದುಕೊಂಡು ಹೋಗಿ ಧಾನ್ಯ ತರುತ್ತಾರೆ. ಈ ತೋನಸಿಹಾಳ ತಾಂಡಾ ಮತ್ತು ಗ್ರಾಮದ ಪಡಿತರ ಕಾರ್ಡ್‌ಗಳನ್ನು ಗೋತಗಿ ಗ್ರಾಮದ ನ್ಯಾಯಬೆಲೆ ಅಂಗಡಿಗೆ ಜೋಡಿಸಲಾಗಿದೆ. ಹೀಗಾಗಿ ಇವರು ಗೋತಗಿ ಗ್ರಾಮಕ್ಕೆ ಹೋಗಿ ಬರಬೇಕು.

ಆಹಾರ ಇಲಾಖೆ ನಿಯಮದ ಪ್ರಕಾರ ಸುಮಾರು 500ಕ್ಕೂ ಹೆಚ್ಚು ಪಡಿತರ ಕಾರ್ಡ್‌ಗಳು ಇದ್ದರೆ ಮಾತ್ರ ಅಲ್ಲಿ ಒಂದು ನ್ಯಾಯಬೆಲೆ ಅಂಗಡಿ ಆರಂಭಿಸಲು ಅವಕಾಶವಿದೆ. ಆದರೇ ತೋನಸಿಹಾಳ ಗ್ರಾಮ ಮತ್ತು ತಾಂಡಾದಲ್ಲಿ 326 ಪಡಿತರ ಕಾರ್ಡ್‌ಗಳಿವೆ. ಹೀಗಾಗಿ ಈ ಎರಡು ಗ್ರಾಮದ ಜನರ ಪಡಿತರ ಕಾರ್ಡ್‌ಗಳನ್ನು ಅನಿವಾರ್ಯವಾಗಿ ಗೋತಗಿ ಗ್ರಾಮಕ್ಕೆ ಸೇರಿಸಿದ್ದಾರೆ.

ತೋನಸಿಹಾಳ ತಾಂಡಾ ಮಹಿಳೆ ಲಕ್ಷ್ಮೀ ರಾಠೊಡ ಅವರು ಮಾತನಾಡಿ, ಪ್ರತಿ ತಿಂಗಳ ಪಡಿತರ ಧಾನ್ಯ ತರಲು ನಾವು ಒಂದು ದಿನ ಕೂಲಿ ಕೆಲಸ ಬಿಟ್ಟು ಹೋಗಬೇಕು. ಜೀವನ ನಡೆಸಲು ಕೂಲಿ ಕೆಲಸ ಅನಿವಾರ್ಯ. ಆದರೂ ಒಂದು ದಿನ ಕೂಲಿ ಕೆಲಸ ಬಿಟ್ಟು ಪಡಿತರ ಅಕ್ಕಿ ತರಲು ನಡೆದುಕೊಂಡು ಹೋಗುತ್ತೇವೆ. ಮರಳಿ ಬರುವಾಗ ಯಾವುದಾದರೂ ವಾಹನ ಸಿಕ್ಕರೆ ವಾಹನದ ಮೂಲಕ ಬರುತ್ತೇವೆ. ಇಲ್ಲದಿದ್ದರೆ ತಲೆ ಮೇಲೆ ಚೀಲ ಹೊತ್ತಕೊಂಡು ಬರಬೇಕು ಎಂದು ಹೇಳಿದರು.

ತೋನಸಿಹಾಳ ಗ್ರಾಮ ಮತ್ತು ತಾಂಡಾ ಸೇರಿ ಸುಮಾರು 320ಕ್ಕೂ ಹೆಚ್ಚು ಪಡಿತರ ಕುಟುಂಬಗಳಿವೆ. ನಮ್ಮ ಗ್ರಾಮದಲ್ಲಿ ಒಂದು ನ್ಯಾಯ ಬೆಲೆ ಅಂಗಡಿ ಆರಂಭವಾದರೇ ಒಳ್ಳೆಯದು ಎಂದು ತೋನಸಿಹಾಳ ತಾಂಡಾದ ಮಹಿಳೆಯರು ತಿಳಿಸಿದರು.

ಕುಷ್ಟಗಿಯಿಂದ ಗೋತಗಿ ನ್ಯಾಯಬೆಲೆ ಅಂಗಡಿ ಹೋಗುವ ಪಡಿತರ ಧಾನ್ಯದ ಸರಬರಾಜು ಮಾಡುವ ವಾಹನ ತೋನಸಿಹಾಳ ಮಾರ್ಗವಾಗಿ ಗೋತಗಿ ಗ್ರಾಮಕ್ಕೆ ಹೋಗುತ್ತದೆ. ಹೀಗಾಗಿ ನಮ್ಮ ಗ್ರಾಮದಲ್ಲಿ ಒಂದು ಉಪಕೇಂದ್ರ ಪ್ರಾರಂಭಿಸಿದರೆ ಎರಡು ಗ್ರಾಮಸ್ಥರಿಗೆ ಅನುಕೂಲವಾಗುತ್ತದೆ ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.

ತಾಲೂಕಿನ ಗಡಿಭಾಗದ ಅನೇಕ ಹಳ್ಳಿಗಳಲ್ಲಿ ಇಂತಹ ಸ್ಥಿತಿ ಇದೆ. ಮೇಣಸಗೇರಿ ಮತ್ತು ಮೇಣಸಗೇರಿ ತಾಂಡಾ ಜನರು ಸೂಮಾರು 5 ಕಿ.ಮೀ. ದೂರದ ಕ್ಯಾದಿಗುಪ್ಪಿ ಗ್ರಾಮಕ್ಕೆ ಹೋಗುತ್ತಿದ್ದಾರೆ.

ತೋನಸಿಹಾಳ ಗ್ರಾಮದಲ್ಲಿ ಅಥವಾ ತಾಂಡಾದಲ್ಲಿಎರಡರಲ್ಲಿ ಒಂದು ಕಡೆ ನ್ಯಾಯಬೆಲೆ ಅಂಗಡಿ ಸ್ಥಾಪಿಸಬೇಕೆಂದು 2-3 ಬಾರಿ ಮಾಜಿ ತಾಪಂ ಸದಸ್ಯರು, ನಾನು ಭೇಟಿ ಮಾಡಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇದುವರೆಗೂ ಯಾವುದೇ  ಪ್ರಯೋಜನವಾಗಿ. ಈಗ ಮತ್ತೊಮ್ಮೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸುತ್ತೇವೆ. ಇದರಿಂದ ನಮ್ಮ ಎರಡು ಗ್ರಾಮದ ಜನರಿಗೆ
ಒಳ್ಳೆಯದಾಗುತ್ತದೆ.
ಶೇಖಪ್ಪ ಸಾಂತಪ್ಪ ಪೂಜಾರ,
ಕೇಸೂರ ಗ್ರಾಪಂ ಅಧ್ಯಕ್ಷ

ತಾಲೂಕಿನ ಅನೇಕ ಹಳ್ಳಿಗಳಲ್ಲಿ ಇಂತಹ ಸ್ಥಿತಿ ಇದೆ. ತೋನಸಿಹಾಳ ಗ್ರಾಮ ಮತ್ತು ತಾಂಡಾದಲ್ಲಿ 326 ಪಡಿತರ ಕುಟುಂಬಗಳು ಇವೆ. ಗೋತಗಿ ಗ್ರಾಮಕ್ಕೆ ಹೋಗುವ ಮಾರ್ಗದಲ್ಲಿ ಈ ಎರಡು ಗ್ರಾಮ ಬರುವುದರಿಂದ ಇದರಲ್ಲಿ ಒಂದು ಕಡೆ ಉಪಕೇಂದ್ರ ತೆರೆಯಲು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಸೂಕ್ತ ಕ್ರಮಕೈಗೊಳ್ಳುತ್ತೇವೆ.
ಚನ್ನಬಸಪ್ಪ ಹಟ್ಟಿ, ಆಹಾರ ಇಲಾಖೆ, ಕುಷ್ಟಗಿ

ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.