ಪಡಿತರ ಧಾನ್ಯ ತರಲು ಹರಸಾಹಸ; ಉಪಕೇಂದ್ರ ಮಾಡಲು ಗ್ರಾಮಸ್ಥರ ಒತ್ತಾಯ


Team Udayavani, Jun 1, 2023, 5:05 PM IST

ಪಡಿತರ ಧಾನ್ಯ ತರಲು ಹರಸಾಹಸ; ಉಪಕೇಂದ್ರ ಮಾಡಲು ಗ್ರಾಮಸ್ಥರ ಒತ್ತಾಯ

ದೋಟಿಹಾಳ: ತೋನಸಿಹಾಳ ಗ್ರಾಮದ ಮತ್ತು ತಾಂಡಾದ ಜನರು ಪ್ರತಿ ತಿಂಗಳ ಪಡಿತರ ಧಾನ್ಯ ಪಡೆಯಲು ಗ್ರಾಮದಿಂದ 2 ಕಿ.ಮೀ. ದೂರದಲ್ಲಿರುವ ಗೋತಗಿ ಗ್ರಾಮಕ್ಕೆ ಹೋಗಬೇಕು. ಪಡಿತರ ಪಡೆಯಲು ಗೋತಗಿ ಗ್ರಾಮಕ್ಕೆ ಹೋಗಲು ಸರಿಯಾದ ಸಾರಿಗೆ ಸೌಲಭ್ಯವಿಲ್ಲದಿರುವುದರಿಂದ ತೋಸಿಹಾಳ ತಾಂಡಾ ಮತ್ತು ಗ್ರಾಮದ ಜನರು ಗೋತಗಿ ಗ್ರಾಮಕ್ಕೆ ನಡೆದುಕೊಂಡು ಹೋಗಿ ಪಡಿತರ ಧಾನ್ಯ ತರುವಂತಾಗಿದೆ.

ಎರಡು ಗ್ರಾಮದಲ್ಲಿ ಬಡ ಕೃಷಿ ಕೂಲಿ ಕಾರ್ಮಿಕರು ಹೆಚ್ಚಾಗಿದ್ದು, ಬದುಕಿಗೆ ಕೂಲಿಯನ್ನೇ ಅವಲಂಬಿಸಿದ್ದಾರೆ. ಇಲ್ಲಿಯ ಜನ ಪ್ರತಿ ತಿಂಗಳ ಕೂಲಿ ಕೆಲಸ ಬಿಟ್ಟು ಪಡಿತರಕ್ಕಾಗಿ ದಿನವೆಲ್ಲ ಕಳೆಯಬೇಕಾಗಿದೆ. ಇದರಿಂದ ವೃದ್ಧರು, ಮಹಿಳೆಯರು, ಮಕ್ಕಳು ದೂರದ ಊರಿಗೆ ಹೋಗಿ ಪಡಿತರ ತರಲು ಪರದಾಡಬೇಕಾಗಿದೆ. ತೋನಸಿಹಾಳ ಗ್ರಾಮಸ್ಥರು ಗೋತಗಿ ಗ್ರಾಮಕ್ಕೆ ಹೋಗಿ, ಬರಲು ಸರಿಯಾದ ವಾಹನದ ವ್ಯವಸ್ಥೆಯಿಲ್ಲ. ಕೆಲವರು ಬೈಕ್‌ಗಳ ಮೂಲಕ ಪಡಿತರ ಧಾನ್ಯ ತಂದರೆ, ಇನ್ನೂ ಕೆಲವರು ನಡೆದುಕೊಂಡು ಹೋಗಿ ಧಾನ್ಯ ತರುತ್ತಾರೆ. ಈ ತೋನಸಿಹಾಳ ತಾಂಡಾ ಮತ್ತು ಗ್ರಾಮದ ಪಡಿತರ ಕಾರ್ಡ್‌ಗಳನ್ನು ಗೋತಗಿ ಗ್ರಾಮದ ನ್ಯಾಯಬೆಲೆ ಅಂಗಡಿಗೆ ಜೋಡಿಸಲಾಗಿದೆ. ಹೀಗಾಗಿ ಇವರು ಗೋತಗಿ ಗ್ರಾಮಕ್ಕೆ ಹೋಗಿ ಬರಬೇಕು.

ಆಹಾರ ಇಲಾಖೆ ನಿಯಮದ ಪ್ರಕಾರ ಸುಮಾರು 500ಕ್ಕೂ ಹೆಚ್ಚು ಪಡಿತರ ಕಾರ್ಡ್‌ಗಳು ಇದ್ದರೆ ಮಾತ್ರ ಅಲ್ಲಿ ಒಂದು ನ್ಯಾಯಬೆಲೆ ಅಂಗಡಿ ಆರಂಭಿಸಲು ಅವಕಾಶವಿದೆ. ಆದರೇ ತೋನಸಿಹಾಳ ಗ್ರಾಮ ಮತ್ತು ತಾಂಡಾದಲ್ಲಿ 326 ಪಡಿತರ ಕಾರ್ಡ್‌ಗಳಿವೆ. ಹೀಗಾಗಿ ಈ ಎರಡು ಗ್ರಾಮದ ಜನರ ಪಡಿತರ ಕಾರ್ಡ್‌ಗಳನ್ನು ಅನಿವಾರ್ಯವಾಗಿ ಗೋತಗಿ ಗ್ರಾಮಕ್ಕೆ ಸೇರಿಸಿದ್ದಾರೆ.

ತೋನಸಿಹಾಳ ತಾಂಡಾ ಮಹಿಳೆ ಲಕ್ಷ್ಮೀ ರಾಠೊಡ ಅವರು ಮಾತನಾಡಿ, ಪ್ರತಿ ತಿಂಗಳ ಪಡಿತರ ಧಾನ್ಯ ತರಲು ನಾವು ಒಂದು ದಿನ ಕೂಲಿ ಕೆಲಸ ಬಿಟ್ಟು ಹೋಗಬೇಕು. ಜೀವನ ನಡೆಸಲು ಕೂಲಿ ಕೆಲಸ ಅನಿವಾರ್ಯ. ಆದರೂ ಒಂದು ದಿನ ಕೂಲಿ ಕೆಲಸ ಬಿಟ್ಟು ಪಡಿತರ ಅಕ್ಕಿ ತರಲು ನಡೆದುಕೊಂಡು ಹೋಗುತ್ತೇವೆ. ಮರಳಿ ಬರುವಾಗ ಯಾವುದಾದರೂ ವಾಹನ ಸಿಕ್ಕರೆ ವಾಹನದ ಮೂಲಕ ಬರುತ್ತೇವೆ. ಇಲ್ಲದಿದ್ದರೆ ತಲೆ ಮೇಲೆ ಚೀಲ ಹೊತ್ತಕೊಂಡು ಬರಬೇಕು ಎಂದು ಹೇಳಿದರು.

ತೋನಸಿಹಾಳ ಗ್ರಾಮ ಮತ್ತು ತಾಂಡಾ ಸೇರಿ ಸುಮಾರು 320ಕ್ಕೂ ಹೆಚ್ಚು ಪಡಿತರ ಕುಟುಂಬಗಳಿವೆ. ನಮ್ಮ ಗ್ರಾಮದಲ್ಲಿ ಒಂದು ನ್ಯಾಯ ಬೆಲೆ ಅಂಗಡಿ ಆರಂಭವಾದರೇ ಒಳ್ಳೆಯದು ಎಂದು ತೋನಸಿಹಾಳ ತಾಂಡಾದ ಮಹಿಳೆಯರು ತಿಳಿಸಿದರು.

ಕುಷ್ಟಗಿಯಿಂದ ಗೋತಗಿ ನ್ಯಾಯಬೆಲೆ ಅಂಗಡಿ ಹೋಗುವ ಪಡಿತರ ಧಾನ್ಯದ ಸರಬರಾಜು ಮಾಡುವ ವಾಹನ ತೋನಸಿಹಾಳ ಮಾರ್ಗವಾಗಿ ಗೋತಗಿ ಗ್ರಾಮಕ್ಕೆ ಹೋಗುತ್ತದೆ. ಹೀಗಾಗಿ ನಮ್ಮ ಗ್ರಾಮದಲ್ಲಿ ಒಂದು ಉಪಕೇಂದ್ರ ಪ್ರಾರಂಭಿಸಿದರೆ ಎರಡು ಗ್ರಾಮಸ್ಥರಿಗೆ ಅನುಕೂಲವಾಗುತ್ತದೆ ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.

ತಾಲೂಕಿನ ಗಡಿಭಾಗದ ಅನೇಕ ಹಳ್ಳಿಗಳಲ್ಲಿ ಇಂತಹ ಸ್ಥಿತಿ ಇದೆ. ಮೇಣಸಗೇರಿ ಮತ್ತು ಮೇಣಸಗೇರಿ ತಾಂಡಾ ಜನರು ಸೂಮಾರು 5 ಕಿ.ಮೀ. ದೂರದ ಕ್ಯಾದಿಗುಪ್ಪಿ ಗ್ರಾಮಕ್ಕೆ ಹೋಗುತ್ತಿದ್ದಾರೆ.

ತೋನಸಿಹಾಳ ಗ್ರಾಮದಲ್ಲಿ ಅಥವಾ ತಾಂಡಾದಲ್ಲಿಎರಡರಲ್ಲಿ ಒಂದು ಕಡೆ ನ್ಯಾಯಬೆಲೆ ಅಂಗಡಿ ಸ್ಥಾಪಿಸಬೇಕೆಂದು 2-3 ಬಾರಿ ಮಾಜಿ ತಾಪಂ ಸದಸ್ಯರು, ನಾನು ಭೇಟಿ ಮಾಡಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇದುವರೆಗೂ ಯಾವುದೇ  ಪ್ರಯೋಜನವಾಗಿ. ಈಗ ಮತ್ತೊಮ್ಮೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸುತ್ತೇವೆ. ಇದರಿಂದ ನಮ್ಮ ಎರಡು ಗ್ರಾಮದ ಜನರಿಗೆ
ಒಳ್ಳೆಯದಾಗುತ್ತದೆ.
ಶೇಖಪ್ಪ ಸಾಂತಪ್ಪ ಪೂಜಾರ,
ಕೇಸೂರ ಗ್ರಾಪಂ ಅಧ್ಯಕ್ಷ

ತಾಲೂಕಿನ ಅನೇಕ ಹಳ್ಳಿಗಳಲ್ಲಿ ಇಂತಹ ಸ್ಥಿತಿ ಇದೆ. ತೋನಸಿಹಾಳ ಗ್ರಾಮ ಮತ್ತು ತಾಂಡಾದಲ್ಲಿ 326 ಪಡಿತರ ಕುಟುಂಬಗಳು ಇವೆ. ಗೋತಗಿ ಗ್ರಾಮಕ್ಕೆ ಹೋಗುವ ಮಾರ್ಗದಲ್ಲಿ ಈ ಎರಡು ಗ್ರಾಮ ಬರುವುದರಿಂದ ಇದರಲ್ಲಿ ಒಂದು ಕಡೆ ಉಪಕೇಂದ್ರ ತೆರೆಯಲು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಸೂಕ್ತ ಕ್ರಮಕೈಗೊಳ್ಳುತ್ತೇವೆ.
ಚನ್ನಬಸಪ್ಪ ಹಟ್ಟಿ, ಆಹಾರ ಇಲಾಖೆ, ಕುಷ್ಟಗಿ

ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aa

Kishkindha ಜಿಲ್ಲೆ ಘೋಷಣೆ ಅಸಾಧ್ಯ,ಆದರೂ ಹೋರಾಟ ಅಗತ್ಯ: ಜನಾರ್ದನ ರೆಡ್ಡಿ

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

ವಿದ್ಯುತ್ ಸಂಪರ್ಕದ ವೇಳೆ ಎಡವಟ್ಟು: 50ಕ್ಕೂ ಹೆಚ್ಚಿನ ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿ

Kustagi: ವಿದ್ಯುತ್ ಸಂಪರ್ಕದ ವೇಳೆ ಎಡವಟ್ಟು: ಹಲವು ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿ

Gangavathi ಕೊಲೆ ಆರೋಪ- ಪತ್ನಿಯನ್ನು ಕಾಲುವೆಗೆ ತಳ್ಳಿದ ಪತಿ: ದೂರು ದಾಖಲು

Gangavathi ಕೊಲೆ ಆರೋಪ- ಪತ್ನಿಯನ್ನು ಕಾಲುವೆಗೆ ತಳ್ಳಿದ ಪತಿ: ದೂರು ದಾಖಲು

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.