ಹಾಸ್ಟೆಲ್‌ಗೆ ಪರೀಕ್ಷಾರ್ಥಿಗಳ ಪರದಾಟ


Team Udayavani, Apr 25, 2021, 2:11 PM IST

Scrutiny for the hostel

ಕೊಪ್ಪಳ: ಜಿಲ್ಲೆಯಲ್ಲಿ ಎಂಜಿನಿಯರಿಂಗ್‌ ಕಾಲೇಜುವಿದ್ಯಾರ್ಥಿಗಳ ಪರೀಕ್ಷೆಯು ಆರಂಭವಾಗಿವೆ.ಕೋವಿಡ್‌ ಹಿನ್ನೆಲೆಯಲ್ಲಿ ಎಲ್ಲ ಹಾಸ್ಟೆಲ್‌ಗಳು ಬಂದ್‌ ಆಗಿದ್ದರಿಂದ ವಸತಿ ನಿಲಯದವಿದ್ಯಾರ್ಥಿಗಳು ಉಳಿದುಕೊಳ್ಳಲು ಜಾಗವಿಲ್ಲದೇಸಮಸ್ಯೆ ಎದುರಿಸುತ್ತಿದ್ದಾರೆ. ಸರ್ಕಾರವು ಪರೀಕ್ಷಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗ‌ಳಲ್ಲಿ ವಾಸ್ತವ್ಯಕ್ಕೆ ಅವಕಾಶನೀಡುವಂತೆ ಆದೇಶ ಮಾಡಿದ್ದರೂ ಜಿಲ್ಲೆಯಲ್ಲಿಯಾವ ಹಾಸ್ಟೆಲ್‌ಗ‌ಳೂ ತೆರೆದಿಲ್ಲ.

ಜಿಲ್ಲೆಯ ತಳಕಲ್‌ ಹಾಗೂ ಗಂಗಾವತಿಯಲ್ಲಿಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳಿವೆ.ಇಲ್ಲಿ ಹಲವು ವಿದ್ಯಾರ್ಥಿಗಳು ದಾಖಲಾತಿ ಪಡೆದುಬಿಸಿಎಂ, ಸಮಾಜ ಕಲ್ಯಾಣ ಹಾಗೂ ಅಲ್ಪ ಸಂಖ್ಯಾತರಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಪ್ರವೇಶಾತಿಪಡೆದು ಅಭ್ಯಾಸ ಮಾಡುತ್ತಿದ್ದರು. ಆದರೆ ಕೋವಿಡ್‌ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲ ಹಾಸ್ಟೆಲ್‌ಗ‌ಳನ್ನುಬಂದ್‌ ಮಾಡುವಂತೆ ಈಚೆಗೆ ಆದೇಶ ಮಾಡಿದ್ದರಿಂದಜಿಲ್ಲೆಯಲ್ಲಿ ಎಲ್ಲ ಹಾಸ್ಟೆಲ್‌ಗ‌ಳನ್ನು ಬಂದ್‌ ಮಾಡಿವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ.

ಆದರೆ ಬೆಳಗಾವಿ ವಿಟಿಯು ವ್ಯಾಪ್ತಿಯ ಸರ್ಕಾರಿಎಂಜಿನಿಯರಿಂಗ್‌ ಕಾಲೇಜಿನಲ್ಲಿ ಪ್ರಸ್ತುತ ವಿವಿಧಸೆಮಿಸ್ಟರ್‌ ಪರೀಕ್ಷೆಗಳು ಆರಂಭವಾಗಿವೆ. ಆದರೆಹಾಸ್ಟೆಲ್‌ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲುಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ಇದನ್ನರಿತು ಉನ್ನತ ಶಿಕ್ಷಣ ಇಲಾಖೆ ಪರೀಕ್ಷೆಇರುವ ವಿದ್ಯಾರ್ಥಿಗಳಿಗೆ ವಸತಿ ನಿಲಯದಲ್ಲಿವಾಸ್ತವ್ಯಕ್ಕೆ ಅವಕಾಶ ನೀಡುವಂತೆ ಆದೇಶಮಾಡಿದೆ. ಆದರೆ ಜಿಲ್ಲೆಯಲ್ಲಿ ಯಾವುದೇ ಹಾಸ್ಟೆಲ್‌ಆರಂಭಿಸಿಲ್ಲ.

ಪರೀಕ್ಷಾ ವಿದ್ಯಾರ್ಥಿಗಳಿಗೂ ವಸತಿನಿಲಯದಲ್ಲಿ ವಾಸ್ತವ್ಯಕ್ಕೆ ಅವಕಾಶ ಇಲ್ಲದಂತಾಗಿದೆ.ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಮಾತ್ರಪರೀಕ್ಷೆ ಬರೆಯುವುದು ಹೇಗೆ ಎಂದು ಚಿಂತನೆಮಾಡುವಂತಾಗಿದೆ. ತಮ್ಮ ಊರಿನಿಂದ ನಿತ್ಯ ಪರೀಕ್ಷೆಹಾಜರಾಗಲು ತೊಂದರೆಯಾಗುತ್ತಿದ್ದು, ಹಾಗಾಗಿನಗರ ಪ್ರದೇಶದಲ್ಲೇ ಸಂಬಂಧಿ ಕರ ಮನೆಯಲ್ಲಿ,ಸ್ನೇಹಿತರ ರೂಂಗಳಲ್ಲಿ ಹಾಗೂ ಪಿಜಿಗಳಲ್ಲಿ ಹಣ ಪಾವತಿಮಾಡಿ ವಾಸ್ತವ್ಯ ಮಾಡಿ ಪರೀಕ್ಷೆ ಬರೆಯುವಂತಸಂದಿಗ್ಧ ಸ್ಥಿತಿ ಎದುರಾಗಿದೆ.

ಸರ್ಕಾರವು ಪರೀಕ್ಷಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನಲ್ಲಿ ವಾಸ್ತವ್ಯಕ್ಕೆ ಅವಕಾಶನೀಡುವಂತೆ ಮರು ಆದೇಶ ಮಾಡಿದ್ದರೂ ಜಿಲ್ಲೆಯಲ್ಲಿಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಹಾಸ್ಟೆಲ್‌ಗಳಲ್ಲಿ ವಾಸ್ತವ್ಯಕ್ಕೆ ಅವಕಾಶ ನೀಡಿಲ್ಲ. ಸಮಾಜಕಲ್ಯಾಣ ಇಲಾಖೆಯಡಿ ಹಾಸ್ಟೆಲ್‌ನಲ್ಲಿ ಪರೀಕ್ಷಾ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ ಎನ್ನುವಮಾತು ಕೇಳಿ ಬಂದಿದ್ದರೂ ಎಲ್ಲಿಯೂ ಹಾಸ್ಟೆಲ್‌ಆರಂಭಿಸಿಲ್ಲ.

ಇನ್ನೂ ಬಿಸಿಎಂ ಇಲಾಖೆಯಡಿಯಹಾಸ್ಟೆಲ್‌ನಲ್ಲಿ ಗಂಗಾವತಿಯಲ್ಲಿ ಬಿಸಿಎಂ ಹಾಸ್ಟೆಲ್‌ಗಳಲ್ಲಿ ಈಚೆಗೆ ಕೆಲವು ವಿದ್ಯಾರ್ಥಿಗಳಿಗೆ ಕೋವಿಡ್‌ದೃಢಪಟ್ಟಿದೆ. ಇದಲ್ಲದೇ ಪ್ರಾಥಮಿಕ ಸಂಪರ್ಕಿತವಿದ್ಯಾರ್ಥಿಗಳನ್ನು ಇನ್ನೊಂದು ಹಾಸ್ಟೆಲ್‌ನಲ್ಲಿಐಸೋಲೇಷನ್‌ ಮಾಡಲಾಗಿದೆ. ಹಾಗಾಗಿ ಬಿಸಿಎಂಇಲಾಖೆಯಲ್ಲೂ ಪರೀಕ್ಷಾ ವಿದ್ಯಾರ್ಥಿಗಳ ಪ್ರವೇಶಾತಿಗೆಇಲಾಖೆ ಅ ಧಿಕಾರಿಗಳು ಇನ್ನೂ ನಿರ್ಧಾರ ಕೈಗೊಂಡಿಲ್ಲ.ಸೋಮವಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಿಟಿಯು ಪರೀಕ್ಷೆಯನ್ನು ಮುಂದೂಡದೇಇರುವುದು ಇಷ್ಟೆಲ್ಲ ಸಮಸ್ಯೆಗೆ ಕಾರಣವಾಗಿದೆ.ಹಾಸ್ಟೆಲ್‌ನಲ್ಲಿ ಅಭ್ಯಾಸ ಮಾಡಿ ಪರೀಕ್ಷೆ ಬರೆಯಬೇಕಾದವಿದ್ಯಾರ್ಥಿಗಳಿಗೆ ವಸತಿ ನಿಲಯದಲ್ಲಿ ವಾಸ್ತವ್ಯ ಇಲ್ಲದೇತುಂಬ ಸಮಸ್ಯೆ ಎದುರಾಗಿದೆ. ಕೂಡಲೇ ಹಾಸ್ಟೆಲ್‌ಗಳನ್ನು ಆರಂಭಿಸಿ, ಪರೀûಾ ವಿದ್ಯಾರ್ಥಿಗಳಿಗೆ ಅವಕಾಶಕಲ್ಪಿಸಬೇಕೆನ್ನುವುದು ವಿದ್ಯಾರ್ಥಿ ಸಂಘಟನೆಗಳಒತ್ತಾಯವಾಗಿದೆ.ಪರೀûಾ ವಿದ್ಯಾರ್ಥಿಗಳಿಗೆ ವಸತಿನಿಲಯದಲ್ಲಿ ವಾಸ್ತವ್ಯಕ್ಕೆ ಅವಕಾಶನೀಡಬೇಕೆಂದು ಸರ್ಕಾರ ಆದೇಶ ಮಾಡಿದೆ.ಹಾಗಾಗಿ ಕೆಲವೊಂದು ಹಾಸ್ಟೆಲ್‌ಗ‌ಳನ್ನು ಆರಂಭಿಸಿಅಂತಹ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದ್ದೇವೆ.ಹಾಸ್ಟೆಲ್‌ ಸಿಗದ ವಿದ್ಯಾರ್ಥಿಗಳು ಆಯಾತಾಲೂಕು ಅ ಧಿಕಾರಿಗಳನ್ನು ಸಂಪರ್ಕ ಮಾಡಿಹಾಸ್ಟೆಲ್‌ ಪ್ರವೇಶ ಮಾಡಬಹುದು.

ನವೀನ್‌ ಶಿಂತ್ರೆ,ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ, ಕೊಪ್ಪಳ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.