ವೈಭವದ ಸದ್ಭಾವನಾ ಪಾದಯಾತ್ರೆ


Team Udayavani, Nov 23, 2019, 3:33 PM IST

kopala-tdy-3

ಕಾರಟಗಿ: ಸಮೀಪದ ಮೈಲಾಪೂರ ಗ್ರಾಮದಲ್ಲಿ ಶುಕ್ರವಾರ ಕೊಪ್ಪಳದ ಗವಿಶ್ರೀಗಳ 8ನೇ ದಿನದ ಸದ್ಭಾವನಾ ಪಾದಯಾತ್ರೆ ವೈಭವದಿಂದ ನಡೆಯಿತು. ಶ್ರೀಗಳ ಪಾದಯಾತ್ರೆ ನಿಮಿತ್ತ ಗ್ರಾಮದ ಎಲ್ಲ ರಸ್ತೆಗಳು ಹೂವು, ರಂಗೋಲಿ ಹಾಗೂ ತಳಿರು-ತೋರಣಗಳಿಂದ ಕಂಗೊಳಿಸುತ್ತಿದ್ದವು. ಶ್ರೀಗಳು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಮಹಿಳೆಯರು ಆರತಿಯೊಂದಿಗೆ ರಸ್ತೆಯ ಇಕ್ಕೆಲಗಳಲ್ಲಿ ನಿಂತು ಶ್ರದ್ಧಾಭಕ್ತಿಯಿಂದ ಸ್ವಾಗತಿಸಿದರು.

ಬೆಳಗ್ಗೆ 6ಕ್ಕೆ ಮೈಲಾಪೂರ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಿಂದ ಆರಂಭವಾದ ಸದ್ಭಾವನಾ ಯಾತ್ರೆ ವಿವಿಧ ವಾರ್ಡ್‌ಗಳಲ್ಲಿ ಸಂಚರಿಸುತ್ತ ನಿಜಲಿಂಗಮ್ಮ ದೇವಸ್ಥಾನ, ಶ್ರೀ ಶರಣ ಬಸವೇಶ್ವರ ದೇವಸ್ಥಾನ, ಹಿರೇದೇವತೆ ದೇವಸ್ಥಾನದ ಮೂಲಕ ಸಾಗಿ ಮರಳಿ ರಾಮಲಿಂಗೇಶ್ವರ ದೇವಸ್ಥಾನ ತಲುಪಿತು. ಯಾತ್ರೆಯಲ್ಲಿ ಗವಿಶ್ರೀಗಳಿಗೆ ಮಹಿಳೆಯರು ಮಕ್ಕಳು ಸೇರಿದಂತೆ ಎಲ್ಲರೂ ತಲೆಬಾಗಿ ನಮಸ್ಕರಿಸುತ್ತಿದ್ದರು. ಅದಕ್ಕೆ ಪ್ರತಿಯಾಗಿ ಶ್ರೀಗಳು ಭಕ್ತ ಸಮೂಹಕ್ಕೆ ಆಶೀರ್ವದಿಸಿದರು.

ಮೆರವಣಿಗೆಯಲ್ಲಿ ಬಳಗಾನೂರಿನ ಚಿಕೇನಕೊಪ್ಪ ಮಠದ ಶ್ರೀಶಾಂತವೀರ ಶರಣರು ಭಕ್ತಿಗೀತೆ, ತತ್ವಪದಗಳನ್ನು ಹಾಡಿದರು. ಭಜನಾ ತಂಡದೊಂದಿಗೆ ಶ್ರೀಶಾಂತವೀರ ಶರಣರು ಹಾಡುತ್ತ ಹೆಜ್ಜೆಹಾಕುತ್ತಿದ್ದರು. ನಾಗನಕಲ್‌-ಮೈಲಾಪೂರ ಗ್ರಾಮದಲ್ಲಿ ಸದ್ಭಾವನಾ ಯಾತ್ರೆ ನಡೆಸಲು ಗವಿಶ್ರೀಗಳು ಶುಕ್ರವಾರ ಬೆಳಗ್ಗೆ ದೇವಿಕ್ಯಾಂಪ್‌, ರತ್ನಗಿರಿ ಪರ್ವತದಿಂದ ತೆರಳುವ ಮಾರ್ಗಮಧ್ಯದಲ್ಲಿ ಬರುವ ನಾಗನಕಲ್‌ ಗ್ರಾಮದಲ್ಲಿ ಸರ್ವಧರ್ಮಿಯರು ರಸ್ತೆಯ ಇಕ್ಕೇಲಗಳಲ್ಲಿ ನಿಂತು ಶ್ರೀಗಳಿಗೆ ಸ್ವಾಗತಕೋರಿ ಭಾವೈಕ್ಯ ಮೆರೆದರು. ಶಿವಲಿಂಗಯ್ಯ ಸ್ವಾಮಿಗಳು, ವೀರಭದ್ರಯ್ಯ ಸ್ವಾಮಿಗಳು, ರುದ್ರಮುನಿ ಸ್ವಾಮಿಗಳು, ಅಮರಯ್ಯಸ್ವಾಮಿ ಹಿರೇಮಠ, ಮರುಳ ಸಿದ್ಧಯ್ಯಸ್ವಾಮಿ ಹಿರೇಮಠ ಪಾಲ್ಗೊಂಡಿದ್ದರು.

ಮಾಜಿ ಸಚಿವ ಶಿವರಾಜ ತಂಗಡಗಿ,ಅನ್ನದಾನಗೌಡ, ತಿರುಪತೆಪ್ಪ ಗುಡಿತಾಳ, ಮಲ್ಲನಗೌಡ ಮೇಳಮಾಳಗಿ, ಸುಕುಮುನೆಪ್ಪ ಕಲ್ಮಂಗಿ, ಮಲ್ಲನಗೌಡ, ಯಮನಪ್ಪ ತಳವಾರ, ವೀರೇಶ ತಳವಾರ, ಅಯ್ಯನಗೌಡ ಮೇಲಮಾಳಗಿ, ಚೇರಮನ್‌ ವೀರನರ್ಗವಡ, ಸಂಗಪ್ಪ ದಾಸನಾಳ, ಅಮರಯ್ಯಸ್ವಾಮಿ, ಶರಣಯ್ಯಸ್ವಾಮಿ, ಅಮರೇಶ ಮೈಲಾಪೂರ, ಕೆ. ಸಿದ್ಧನಗೌಡ ಇತರರಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.