ಪಕ್ಷ ಸಂಘಟನೆಗೆ ಕೈ ಜೋಡಿಸಿ: ಶಾಸಕ ಆಚಾರ್
Team Udayavani, Jul 6, 2019, 4:13 PM IST
ಕುಕನೂರು: ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಸದಸ್ಯತ್ವ ಅಭಿಯಾನ ಸಭೆಯಲ್ಲಿ ಶಾಸಕ ಹಾಲಪ್ಪ ಆಚಾರ್ ಮಾತನಾಡಿದರು.
ಕುಕನೂರು: ಪಕ್ಷ ಸಂಘಟನೆಗೆ ಸದಸ್ಯತ್ವ ಅಭಿಯಾನ ಮೂಲಕ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಶಾಸಕ ಹಾಲಪ್ಪ ಆಚಾರ್ ಹೇಳಿದರು.
ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಸದಸ್ಯತ್ವ ಅಭಿಯಾನ ಸಭೆಯಲ್ಲಿ ಅವರು ಮಾತನಾಡಿದರು. ನರೇಂದ್ರ ಮೋದಿ ಅವರ ಪಾರದರ್ಶಕ ಹಾಗೂ ಪ್ರಾಮಾಣಿಕ ಆಡಳಿತ ಕಂಡು ರಾಷ್ಟ್ರದ ಜನತೆ ಅವರನ್ನು ಮತ್ತೂಮ್ಮೆ ಪ್ರಧಾನಿ ಮಾಡಿದ್ದಾರೆ. ಯುವಕರ ಮೋದಿ, ಮೋದಿ ಎಂಬ ಘೋಷಣೆ ದೇಶವನ್ನು ಅವನತಿಯತ್ತ ದೂಡುತ್ತಿದ್ದ ಕಾಂಗ್ರೆಸ್ನ ಬಾಯಿ ಮುಚ್ಚಿಸಿದೆ. ಚುನಾವಣೆ ಮುಗಿದರು ಸಹ ಬಿಜೆಪಿ ಸಂಘಟನೆಗೆ ಮುಂದಾಗಿದೆ. ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳುವ ಮೂಲಕ ಬಿಜೆಪಿಯ ಸಿದ್ಧಾಂತ ಹಾಗೂ ರಾಷ್ಟ್ರಾಭಿವೃದ್ಧಿ ದಿಕ್ಸೂಚಿ ಮನೆ, ಮನಕ್ಕೆ ತಲುಪಿಸುವ ಕಾರ್ಯ ಆಗಬೇಕಿದೆ. ಇನ್ನೂ ಕೆಲವೇ ದಿನದಲ್ಲಿ ಭಾರತ ಆರ್ಥಿಕತೆಯಿಂದ ಸದೃಢವಾಗಿ ವಿಶ್ವದ ಹಿರಿಯಣ್ಣನ ಪಟ್ಟಕ್ಕೆ ಏರಲಿದೆ ಎಂದರು.
ವಿಭಾಗೀಯ ಸಂಘಟನಾ ಕಾರ್ಯದರ್ಶಿ ಪ್ರಮೋದ ಜಿ. ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 23 ಕೋಟಿ(ಶೇ.38) ಮತ ಹಾಗೂ ಎನ್ಡಿಎ 28 ಕೋಟಿ (ಶೇ.48) ಮತ ಪಡೆದಿದೆ. 303 ಸ್ಥಾನ ಗೆದ್ದಿದ್ದರೂ ಸಹ ಬಿಜೆಪಿ ಸಂಘಟನೆಗೆ ಮುಂದಾಗಿದೆ. ಸಂಘಟನೆಯೆ ಪಕ್ಷದ ಬಲ. ಪ್ರತಿ ಮನೆಗೆ ತೆರಳಿ ಪಕ್ಷದ ಬಗ್ಗೆ ಅರಿವು ಮೂಡಿಸಿ, ಸದಸ್ಯರಾಗಲು ಕಾರ್ಯಕರ್ತರು ಮುಂದಾಗಬೇಕು ಎಂದರು.
ಜಿಲ್ಲಾ ಸದಸ್ಯತ್ವ ಅಭಿಯಾನದ ಸಂಚಾಲಕರಾದ ಅಮರೇಶ ಕುಳಗಿ, ಈರಪ್ಪ ಕುಡಗುಂಟಿ, ಯಲಬುರ್ಗಾ ಬಿಜೆಪಿ ಮಂಡಳ ಅಧ್ಯಕ್ಷ ರಥನ ದೇಸಾಯಿ, ಕಾರ್ಯದರ್ಶಿಗಳಾದ ಪ್ರಭು ಕಲಬುರ್ಗಿ, ಮಾರುತಿ ಗಾವರಾಳ, ತಾಪಂ ಉಪಾಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ್, ಪ್ರಮುಖರಾದ ನವೀನ ಗುಳಗಣ್ಣವರ್, ಬಸಲಿಂಗಪ್ಪ ಭೂತೆ, ಶರಣಪ್ಪ ಬಣ್ಣದಬಾವಿ, ರಾಮಣ್ಣ ಭಜಂತ್ರಿ, ಎ.ಜೆ. ಭಾವಿಮನಿ, ಸಿದ್ಲಿಂಗಯ್ಯ ಉಳ್ಳಾಗಡ್ಡಿ, ಮಹಾಂತೇಶ ಹೂಗಾರ, ಮಂಜುನಾಥ ಗಟ್ಟೆಪ್ಪನವರ್, ಹಂಚ್ಯಾಳಪ್ಪ ತಳವಾರ, ಅರ್ಜುನರಾವ್ ಜಗತಾಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?