ಬಿಜೆಪಿಯಲ್ಲಿ ಬೀಜದ ಹೋರಿಗಳಿಲ್ಲ: ತಂಗಡಗಿ
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ವ್ಯಂಗ್ಯ
Team Udayavani, Feb 12, 2021, 3:20 PM IST
ಕನಕಗಿರಿ: ಬಿಜೆಪಿಯಲ್ಲಿ ಬೀಜದ ಹೋರಿಗಳಿಲ್ಲ, ಅಲ್ಲಿ ಇರೋದು ಕಾಂಗ್ರೆಸ್, ಜೆಡಿಎಸ್ ಬೀಜಗಳು. ನಮ್ಮವರನ್ನೇ ಎತ್ತುಕೊಂಡು ಹೋಗಿ ತಮ್ಮ ಪಕ್ಷದವರು ಎನ್ನುತ್ತಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ್ ತಂಗಡಗಿ ಹೇಳಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿಗೆ ಸಂಬಂಧಿಸಿದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕನಕಗಿರಿ ಕ್ಷೇತ್ರಕ್ಕೆ ಶಾಸಕ ಬಸವರಾಜ್ ದಢೇಸುಗೂರು ಕೊಡುಗೆ ಎಂದರೆ ಎಂಎಸ್ ಐಎಲ್, ಲಿಕ್ಕರ್ ಶಾಪ್ಗ್ಳು. ನಾನು ತಂದ ಯೋಜನೆಗಳನ್ನೇ ತಮ್ಮವು ಎನ್ನುತ್ತಿದ್ದಾರೆ. ನಾನು ಯಾವತ್ತೂ ಸ್ವಜಾತಿಯ ಅಕಾರಿಗಳನ್ನು ತರಲಿಲ್ಲ. ಆದರೆ ಬಸವರಾಜ್ ದಢೇಸುಗೂರು ಆ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ :ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಸರಳ ಸಂಪನ್ನ
ಕಾಂಗ್ರೆಸ್ನಿಂದ ಹಮ್ಮಿ ಕೊಳ್ಳಲಾಗಿರುವ ಪ್ರತಿಭಟನೆಗಳ ಮುಕ್ತಾಯದ ನಂತರ ದೆಹಲಿಯ ಗಡಿಗೆ ಹೋಗಿ ರೈತರ ಹೋರಾಟದ ಜೊತೆ ನಿಲ್ಲುತ್ತೇನೆ. ಕಾರಟಗಿಯಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಟ್ರ್ಯಾಕ್ಟರ್ ರ್ಯಾಲಿ ಇಡೀ ರಾಜ್ಯದಲ್ಲೇ ಮಾದರಿಯಾಗಬೇಕು. ಫೆ. 15ರಂದು ನಡೆಯುವ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಸಿದ್ದಪ್ಪ ನಿಲೂìಟಿ, ಮಹ್ಮದ್ ರμ, ಮಲ್ಲಿಕಾರ್ಜುನಗೌಡ, ಶರಣಬಸವರೆಡ್ಡಿ ಬರಗೂರು, ಮಂಜುನಾಥ್ ಜಿ., ಶರಣಪ್ಪ ಭತ್ತದ, ಖಾಜಾಸಾಬ್ ಗುರಿಕಾರ, ಮಹ್ಮದ್ ಪಾಷಾಸಾಬ್, ಹುಲಗಪ್ಪ ವಾಲೆಕಾರ, ಕನಕದಾಸ ಪೂಜಾರಿ, ಭೀಮನಗೌಡ ಹೊಸಕೇರಾ, ಅನಿಲಕುಮಾರ್ ಬಿಜ್ಜಳ್, ರಾಜಾಸಾಬ್ ನಂದಾಪುರ, ಸಂಗಪ್ಪ ಸಜ್ಜನ್, ವಿರೂಪಾಕ್ಷಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
Koppala: ಬೆಂಬಲಿಗರ ಜೊತೆ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಸಂಸದ ಸಂಗಣ್ಣ ಕರಡಿ…
MUST WATCH
ಹೊಸ ಸೇರ್ಪಡೆ
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು