ಕಾರಟಗಿ: ಶ್ರೀ ಶರಣಬಸವೇಶ್ವರ ಜಾತ್ರೋತ್ಸವ


Team Udayavani, Sep 4, 2022, 4:23 PM IST

18

ಕಾರಟಗಿ: ಪಟ್ಟಣದಲ್ಲಿ ಆರಾಧ್ಯ ದೈವ ಶ್ರೀ ಶರಣಬಸವೇಶ್ವರರ 48ನೇ ವರ್ಷದ ಪುರಾಣ ಮಹಾಮಂಗಲೋತ್ಸವ, ಜೋಡು ಮಹಾ ರಥೋತ್ಸವ ಸೆ.4-5ರಂದು ಅದ್ಧೂರಿಯಾಗಿ ನಡೆಯಲಿದೆ.

ಪುರಾಣ ಮಂಗಲೋತ್ಸವ ಮುನ್ನಾ ದಿನ ಸೆ.4ರಂದು ವೀರಭದ್ರೇಶ್ವರ, ಶರಣಬಸವೇಶ್ವರ ಮೂರ್ತಿಗೆ ರುದ್ರಾಭಿಷೇಕ, ಗಂಗೆ ಸ್ಥಳಕ್ಕೆ ಹೋಗಿ ಬರುವುದು ಸೇರಿದಂತೆ ವಿವಿಧ ಕಾರ್ಯಗಳು ನೆರವೇರುವವು. ಮಕ್ಕಳು, ಮಹಿಳೆಯರು ಸೇರಿ ಭಕ್ತಾದಿಗಳು ಶಸ್ತ್ರ ಹಾಕಿಸಿಕೊಂಡು ಭಕ್ತಿ ಮೆರೆಯುತ್ತಾರೆ. ಮರು ದಿನ ಪುರಾಣ ಮಹಾ ಮಂಗಲೋತ್ಸವ, ಶ್ರೀ ಶರಣಬಸವೇಶ್ವರ ಜೋಡು ರಥೋತ್ಸವ ನಡೆಯುತ್ತದೆ.

ಹಿನ್ನೆಲೆ: ಕ್ರಿ.ಶ. 973ರಲ್ಲಿ ಕಲ್ಯಾಣದ ಚಾಲುಕ್ಯರು ರಾಷ್ಟ್ರಕೂಟರನ್ನು ಬಗ್ಗು ಬಡಿದು ಗಂಗಾವತಿಯನ್ನು ತಮ್ಮ ಅಧಿಕಾರ ವ್ಯಾಪ್ತಿಗೆ ತೆಗೆದುಕೊಳ್ಳುತ್ತಾರೆ. ಇವರ ಆಳ್ವಿಕೆ ವೇಳೆ ಕಾರಟಗಿಯಲ್ಲಿ ಕೆಂಪುಮಣ್ಣಿನ ಕೆರೆ ನಿರ್ಮಿಸಿ ಈ ಸ್ಥಳಕ್ಕೆ ಕೆರೆ ಇಟಗಿ ಎಂದು ಹೆಸರಿಸಿದರು. ನಂತರ ಅದು ಕಾಲಾನುಕ್ರಮದಲ್ಲಿ ಕಾರಟಗಿ ಆಗಿ ಬದಲಾಯಿತೆಂಬುದು ಸ್ಥಳೀಯರ ಅಭಿಪ್ರಾಯ. ಅಂದಿನ ಕಾಲದಲ್ಲಿ ಹೋರಾಟದಲ್ಲಿ ಮೃತಪಟ್ಟ ಸೇನಾನಿಗಳ ನೆನಪಿಗಾಗಿ ವೀರಗಲ್ಲುಗಳನ್ನು ಪಟ್ಟಣದಲ್ಲಿ ಕಾಣಬಹುದು.

ಶಿವದೇವಾಲಯ, ವಿಷ್ಣು ಗಜಾನನ ಹಾಗೂ ಸಪ್ತಮಾತೃಕೆ ಪುಷ್ಕರಣಿಗಳು ಇಲ್ಲಿವೆ. ಶ್ರೀ ಮಹಾದೇಶ್ವರ ದೇವಾಲಯ ಮುಂಭಾಗ ಪುಷ್ಕರಣಿ ಸುಂಕಲ ವೀರಪ್ಪನ ಬಾವಿ ಇದ್ದು, ಅದರಲ್ಲಿ ಮಿಂದೆದ್ದು ಉತ್ತರಕ್ಕೆ ತಿರುಗಿದರೆ ಶಿವ, ದಕ್ಷಿಣಕ್ಕೆ ತಿರುಗಿದರೆ ವೆಂಕಟೇಶ್ವರಸ್ವಾಮಿ, ಪೂರ್ವಕ್ಕೆ ತಿರುಗಿದರೆ ವೀರಭದ್ರಸ್ವಾಮಿ, ವಿನಾಯಕ, ಪಶ್ಚಿಮಕ್ಕೆ ತಿರುಗಿದರೆ ಗ್ರಾಮದೇವತೆ ಮತ್ತು ಕೋಟೆ ಆಂಜನೇಯಸ್ವಾಮಿಗೆ ನಮಸ್ಕಾರ ಮಾಡಬಹುದು.

ತೀರಾ ಶಿಥಿಲಾವಸ್ಥೆಯಲ್ಲಿದ್ದ ಗಣೇಶ ದೇವಾಲಯವನ್ನು ಹಿರಿಯರ ಮಾರ್ಗದರ್ಶನ, ಸಹಾಯದಿಂದ ಕ್ರಿ.ಶ. 1973ರಲ್ಲಿ ನವೀಕರಿಸಲಾಗಿದೆ. ಮರುವರ್ಷವೇ ಶ್ರೀ ವೀರಭದ್ರೇಶ್ವರ ದೇವಸ್ಥಾನ ಮುಂಭಾಗದಲ್ಲಿ ಭವ್ಯ ವೇದಿಕೆ ನಿರ್ಮಿಸಿ ಶ್ರೀ ಶರಣಬಸವೇಶ್ವರ ಪುರಾಣ ಆರಂಭಿಸಲಾಗಿದೆ. ಆ ವರ್ಷ ಶ್ರೀ ಮುಪ್ಪಿನ ಶಾಸ್ತ್ರಿಗಳು ಕಾರ್ಯಕ್ರಮಕ್ಕೆ ಒಂದು ಹೊಸ ಆಯಾಮವನ್ನಿತ್ತರಲ್ಲದೇ ಉಳಿದ ಹಣದಲ್ಲಿ ಭವ್ಯವಾದ ಮಂಟಪ ನಿರ್ಮಿಸಿ ಶರಣರ ಪುರಾಣ ಮುಂದುವರಿಸಿದರು.

ಈ ಸಂಪ್ರದಾಯ ಪಾಲಿಸಿಕೊಂಡು ಬಂದ ಕಾರಟಗಿ ಮತ್ತು ಸುತ್ತಮುತ್ತಲಿನ ಭಕ್ತ ಸಮೂಹ 48 ವರ್ಷಗಳಿಂದ ವಿಜೃಂಭಣೆಯಿಂದ ಜಾತ್ರೆ ಆಚರಿಸುತ್ತಿದ್ದಾರೆ. ಜಾತ್ರೆ ನಡೆಯುವ ಎರಡು ದಿನಗಳ ಮುಂಚೆಯೇ ಪಟ್ಟಣದೆಲ್ಲೆಡೆ ಹಬ್ಬದ ವಾತಾವರಣ ನಿರ್ಮಾಣವಾಗಿರುತ್ತದೆ. ಮಂಗಲೋತ್ಸವ-ರಥೋತ್ಸವದಲ್ಲಿ ಅಪಾರ ಸಂಖ್ಯೆಯ ಭಕ್ತ ಸಮೂಹ ಕಿಕ್ಕಿರಿದು ತುಂಬಿರುತ್ತದೆ.

-ದಿಗಂಬರ್‌ ಎನ್‌. ಕುರ್ಡೆಕರ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.