ಗಂಗಾವತಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿಯೇ ಬಿಟ್ಟ ಸಿದ್ದರಾಮಯ್ಯ
ಷಡ್ಯಂತ್ರ ನಡೆಸಿ ಸೋಲಿಸುವ ಕುತಂತ್ರ ನಡೆಸುವ ಸಂಭವವಿದೆ...
Team Udayavani, Nov 20, 2022, 7:41 PM IST
ಗಂಗಾವತಿ :ಮುಂದಿನ 2023 ರ ವಿಧಾನಸಭೆಯ ಗಂಗಾವತಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯನ್ನು ಗೆಲ್ಲಿಸುವ ಮೂಲಕ ನನಗೆ ಬಲ ನೀಡಿ ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. .
ಅವರು ಭಾನುವಾರ ವಳಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ತಕರ್ತ ಅರಸಿನಕೇರಿ ಹನುಮಂತಪ್ಪ ನಿವಾಸದ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ನೆರೆದ ಜನರಿಗೆ ಮನವಿ ಮಾಡಿದರು.
ಬಿಜೆಪಿಯವರ ಭ್ರಷ್ಟಾಚಾರಕ್ಕೆ ರಾಜ್ಯದ ಜನರು ರೋಸಿ ಹೋಗಿದ್ದು ಜೆಡಿಎಸ್- ಬಿಜೆಪಿಗೆ ನೆರವಾಗುತ್ತದೆ .ಆದ್ದರಿಂದ ಕಾಂಗ್ರೆಸ್ ಪಕ್ಷ ಜನರ ಪರವಾದ ಆಡಳಿತದ ನೀಡುವ ಪಕ್ಷವಾಗಿದ್ದು ಜನಸಾಮಾನ್ಯರು ಕೃಷಿ ಕೂಲಿಕಾರರಿಗೆ ನೆರವಾಗುತ್ತದೆ .ಮಾಜಿ ಮಂತ್ರಿ ಅನ್ಸಾರಿ ಅಭಿವೃದ್ಧಿ ಹರಿಕಾರನಾಗಿದ್ದು, ಜನಪರವಾದ ಆಡಳಿತ ನೀಡುವ ವ್ಯಕ್ತಿ. ಕೆಲವರು ಅನ್ಸಾರಿ ಬಗ್ಗೆ ಷಡ್ಯಂತ್ರ ನಡೆಸಿ ಸೋಲಿಸುವ ಕುತಂತ್ರ ನಡೆಸುವ ಸಂಭವವಿದ್ದು ಮತದಾರರು ಅನ್ಸಾರಿಯನ್ನು ಗೆಲ್ಲಿಸುವಂತೆ ಪದೇ ಪದೇ ಮನವಿ ಮಾಡಿದರು.
ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ,ಭೀಮಾನಾಯಕ್, ಇಕ್ಬಾಲ್ಅನ್ಸಾರಿ, ಶಾಮೀದ್ ಮನಿಯಾರ್ ಕಾಂಗ್ರೆಸ್ ಯುವ ಮುಖಂಡ ಅರಸಿನಕೇರಿ ಹನುಮಂತಪ್ಪ ಸೇರಿ ಅನೇಕರಿದ್ದರು.
2013 ರಲ್ಲಿ ಇಕ್ಬಾಲ್ ಅನ್ಸಾರಿ ಜೆಡಿಎಸ್ ನಿಂದ ಗೆದ್ದು ಶಾಸಕರಾಗಿದ್ದರು. 2018 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅವರು ಬಿಜೆಪಿಯ ಪರಣ್ಣ ಈಶ್ವರಪ್ಪ ಮುನವಳ್ಳಿ ಅವರ ವಿರುದ್ದ ಸೋಲು ಅನುಭವಿಸಿದ್ದರು. ಕಾಂಗ್ರೆಸ್ ಟಿಕೆಟ್ ಗಾಗಿ ಕೆಲ ಪ್ರಮುಖ ಮುಖಂಡರು ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ
Delhi Liquor Scam:ತಿಹಾರ್ ಜೈಲಿನೊಳಗೆ ಬಿಆರ್ ಎಸ್ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ
Liquor Policy Case: ಅರವಿಂದ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ
Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್ ಕದತಟ್ಟಿದ ಕೇಜ್ರಿವಾಲ್