ಕೆರೆಯಂತಾಗುವ ಸಿದ್ಧಾಪುರ ಕಾಲೇಜ್‌

ಆವರಣ ಕಟ್ಟಡ ನಿರ್ಮಿಸಿದಾಗಿನಿಂದ ಇದೆ ಸಮಸ್ಯೆ; ಮಳೆಗಾಲ ಮುಗಿಯುವವರೆಗೂ ಪ್ರಾರ್ಥನೆ ಸ್ಥಗಿತ

Team Udayavani, Sep 8, 2022, 4:44 PM IST

14

ಸಿದ್ದಾಪುರ: ಗ್ರಾಮದ ಸರಕಾರಿ ಸಂಯುಕ್ತ ಪಪೂ ಕಾಲೇಜು (ಹೈಸ್ಕೂಲ್‌) ಆವರಣ ಮಳೆಗಾಲದ ನಾಲ್ಕು ತಿಂಗಳ ಕಾಲ ಸಂಪೂರ್ಣ ಜಲಾವೃತವಾಗಿ ಕೆರೆಯಂಗಳದಂತಾಗುತ್ತದೆ. ಈ ಸ್ಥಿತಿ ಬಗ್ಗೆ ಇಲ್ಲಿವರೆಗೆ ಆಡಳಿತ ನಡೆಸಿದ ಜನಪ್ರತಿನಿಧಿಗಳಾಗಲಿ ಅಥವಾ ಅಧಿಕಾರಿಗಳಾಗಲಿ ಗಮನ ಹರಿಸದೇ ಇರುವುದು ವಿಪರ್ಯಾಸ.

ಗ್ರಾಮದಲ್ಲಿ 1994ರಲ್ಲಿ ಸುಮಾರು 10 ಎಕರೆ ಪ್ರದೇಶದಲ್ಲಿ ಮೊದಲಿಗೆ ಸರಕಾರಿ ಪ್ರೌಢಶಾಲೆ ಆರಂಭವಾಯಿತು. ಕೆಲ ವರ್ಷಗಳ ಬಳಿಕ ಇದೇ ಆವರಣದಲ್ಲಿ ಸರಕಾರಿ ಪಪೂ ಕಾಲೇಜು ಆರಂಭವಾಗಿದ್ದರಿಂದ ಸರಕಾರಿ ಸಂಯುಕ್ತ ಪಪೂ ಕಾಲೇಜು ಆಗಿ ಮರು ನಾಮಕರಣಗೊಂಡಿತು. ಇದೆ ಆವರಣದಲ್ಲೇ ಕಸ್ತೂರಿಬಾ ಗಾಂಧಿ ಮೈನಾರಿಟಿ ವಿದ್ಯಾರ್ಥಿನಿಯರ ವಸತಿ ಶಾಲೆ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯ ಸೇರಿಕೊಂಡಂತೆ ಒಟ್ಟು ಸಾವಿರಾರು ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆಯಾಗಿದೆ.

1994ರಿಂದ ಶಾಲೆ ಆರಂಭವಾದಾಗಿನಿಂದ ಇಂತಹದ್ದೆ ಪರಿಸ್ಥಿತಿ ಇದೆ. ವಿದ್ಯಾರ್ಥಿಗಳು, ಶಿಕ್ಷಕರು ಕೆಸರು ನೀರಿನಲ್ಲೇ ಎದ್ದು, ಬಿದ್ದು ಕೊಠಡಿ ಪ್ರವೇಶಿಸಬೇಕು. ಆವರಣದಲ್ಲಿ ನಿತ್ಯ ನಡೆಯಬೇಕಾಗಿದ್ದ ಪ್ರಾರ್ಥನೆ ನಡೆಯದಂತಾಗಿದೆ.

ಸಣ್ಣ ಗಟಾರು: ಸಂಗ್ರಹಗೊಂಡ ನೀರನ್ನು ಹೊರ ಕಳಿಸಲು ಒಂದೇ ಸಣ್ಣ ಗಟಾರ್‌ ಇದೆ. ಈ ಸಣ್ಣ ಗಟಾರ ಮೂಲಕವೇ ನೀರು ಹೊಗಬೇಕು. ಕೆಲವೊಮ್ಮೆ ಇದು ಬಂದಾಗಿರುತ್ತದೆ. ಆಗ ಮಳೆ ಭೂಮಿಯಲ್ಲಿ ಇಂಗುವವರೆಗೂ ನೀರು ಕಡಿಮೆಯಾಗಲ್ಲ. ಸಂಬಂ ಧಿಸಿದ ಜನಪ್ರತಿನಿಧಿ ಗಳು ಮತ್ತು ಅಧಿಕಾರಿಗಳು ಇತ್ತ ಗಮನ ಹರಿಸಿ ಶಾಶ್ವತ ಪರಿಹಾರ ಕಲ್ಪಿಸುವಂತೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಒತ್ತಾಯಿಸಿದ್ದಾರೆ.

ಇದಕ್ಕೆ ಶಾಶ್ವತ ಪರಿಹಾರ ಅಂದ್ರೆ ಡ್ರೈನೆಜ್‌ ಮಾಡಬೇಕು ಅಥವಾ ಆವರಣ ತುಂಬ ಮಣ್ಣು ಹಾಕಬೇಕು. ಡ್ರೈನೇಜ್‌ ಮಾಡಲು ಅನುಮತಿ ಸಿಕ್ಕಿಲ್ಲ. ಮಣ್ಣು ಹಾಕಲು ಸುಮಾರು 20 ಲಕ್ಷಕ್ಕೂ ಅಧಿಕ ವೆಚ್ಚವಾಗುತ್ತದೆ. ಅಷ್ಟೊಂದು ಅನುದಾನ ಗ್ರಾಪಂಯಿಂದ ಕೊಡಲು ಬರುವುದಿಲ್ಲ. ಹೀಗಾಗಿ ತಾಪಂ ಇಒ ಅವರಿಗೆ ಇಲ್ಲಿಯ ಸಮಸ್ಯೆ ಗಮನಕ್ಕೆ ತರಲಾಗಿದೆ. ಅವರು ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಉತ್ತಮವಾಗಿ ಸ್ಪಂದಿಸಿದ್ದಾರೆ.  –ಸಾಯಿನಾಥ, ಸಿದ್ದಾಪುರ ಗ್ರಾಪಂ ಪಿಡಿಒ

ಶಿಕ್ಷಣ ಇಲಾಖೆಯಿಂದ ಮೈದಾನ ಸೇರಿದಂತೆ ಇತರ ಅಭಿವೃದ್ಧಿ ಕೆಲಸ ಕೈಗೊಳ್ಳುವುದಕ್ಕೆ ಯಾವುದೇ ವಿಶೇಷ ಅನುದಾನವಿಲ್ಲ. ಗ್ರಾಪಂನಿಂದ ನರೇಗಾದಡಿ ಮೈದಾನ ಅಭಿವೃದ್ಧಿ ಮಾಡಬೇಕಾಗುತ್ತದೆ. ಈ ಬಗ್ಗೆ ವಿಶೇಷ ಕಾಳಜಿ ವಹಿಸಿ ತಾಪಂ ಇಒ ಅವರ ಗಮನಕ್ಕೆ ತಂದು ಮೈದಾನ ಅಭಿವೃದ್ಧಿಪಡಿಸಲು ಗಮನ ಹರಿಸುತ್ತೇನೆ.  –ಸೋಮಶೇಖರಗೌಡ ಪಾಟೀಲ, ಬಿಇಒ, ಗಂಗಾವತಿ

ಶಾಲೆ ಆರಂಭವಾದಾಗಿನಿಂದಲೂ ಪ್ರತಿ ಮಳೆಗಾಲದಲ್ಲೂ ಇದೇ ಪರಿಸ್ಥಿತಿ ಎದುರಾಗುತ್ತದೆ. ಈ ಬಗ್ಗೆ ಸಾಕಷ್ಟು ಬಾರಿ ಗ್ರಾಪಂಗೆ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ. ನಿಮ್ಮ ಇಲಾಖೆ ಮೇಲಾ ಧಿಕಾರಿಗಳಿಗೆ ಪತ್ರ ಬರೆದುಕೊಳ್ಳಿ ಎಂದು ಉತ್ತರಿಸುತ್ತಾರೆ. –ಖಾಸಿಂಸಾಬ್‌, ಉಪ ಪ್ರಾಚಾರ್ಯ

-ಸಿದ್ದನಗೌಡ ಹೊಸಮನಿ

ಟಾಪ್ ನ್ಯೂಸ್

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.