ಕೂಲಿ ಪಾವತಿಗೆ ಒತ್ತಾಯಿಸಿ ಗ್ರಾಪಂಗೆ ಮುತ್ತಿಗೆ
Team Udayavani, Jan 28, 2020, 3:05 PM IST
ಕನಕಗಿರಿ: ಕೂಲಿ ಪಾವತಿಸುವಂತೆ ಒತ್ತಾಯಿಸಿ ಕಾರ್ಮಿಕರು ಸೋಮವಾರ ಜೀರಾಳ ಗ್ರಾಪಂಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.
ಕೂಲಿ ಕಾರ್ಮಿಕ ಯಮನೂರಪ್ಪ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿ 4 ತಿಂಗಳಾದರೂ ಕೂಲಿ ಹಣ ಪಾವತಿಸಿಲ್ಲ. ಕೂಲಿ ಪಾವತಿಸುವಂತೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಲಿಯನ್ನು ನಂಬಿಕೊಂಡಿರುವ ಕುಟುಂಬಗಳ ಕಂಗಾಲಾಗಿವೆ. ಕೂಲಿ ಕಾರ್ಮಿಕರ ಹಣವನ್ನು ಪಾವತಿ ಮಾಡುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದರು.
ಮಲ್ಲಮ್ಮ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿ 15 ದಿನ ಕೆಲಸ ಮಾಡಿದ್ದೇವೆ. ಆದರೆ ಹಣವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಿಲ್ಲ. ಗ್ರಾಪಂ ಅಧಿ ಕಾರಿಗಳನ್ನು ಕೇಳಿದರೆ ಸುಳ್ಳು ಭರವಸೆ ನೀಡುತ್ತಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಹಣ ಪಾವತಿಸಬೇಕೆಂದರು. ಈ ಸಂದರ್ಭದಲ್ಲಿ ರಮೇಶದಾಸ, ಲಕ್ಷ್ಮಣ, ನಾಗಮ್ಮ, ಸಿದ್ದಮ್ಮ, ರಾಮೇಶ್ವರಿ ಸೇರಿದಂತೆ ಜೀರಾಳ ಗ್ರಾಪಂ ವ್ಯಾಪ್ತಿಯ ಕೂಲಿ ಕಾರ್ಮಿಕರು ಇದ್ದರು.
ಉದ್ಯೋಗ ಖಾತ್ರಿ ಯೋಜನೆಯಡಿ ಜೀರಾಳ ಗ್ರಾಪಂನಲ್ಲಿ ನೀಡಲಾಗಿರುವ ಕೆಲಸಕ್ಕೆ ಕೂಲಿ ಪಾವತಿ ಮಾಡದೇ ಇರುವುದು ಗಮನಕ್ಕೆ ಇದೆ. ಕ್ರಿಯಾಯೋಜನೆ ಅನುಮೋದನೆಯಾಗದೇ ಕೆಲಸ ಮಾಡಿದ್ದಾರೆ. ಇದರಿಂದ ತೊಂದರೆಯಾಗಿದೆ. ಕ್ರಿಯಾ ಯೋಜನೆ ಅನುಮೋದನೆಗೆ ಜಿಪಂ ಕಳಿಸಲಾಗಿದೆ. 15 ದಿನಗಳ ಒಳಗಾಗಿ ಹಣ ಪಾವತಿಸಲಾಗುವುದು. –ಚಿದಾನಂದ, ಜಿಪಂ ವಿಭಾಗ ಎಇಇ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ