ಸೌಲಭ್ಯಕ್ಕೆ ಆಗ್ರಹಿಸಿ ಪುರಸಭೆಗೆ ಮುತ್ತಿಗೆ

•ಮೂರು ದಿನದಲ್ಲಿ ಬೇಡಿಕೆ ಈಡೇರಿಸದಿದ್ದರೆ ಧರಣಿ ಸತ್ಯಾಗ್ರಹ: ಎಚ್ಚರಿಕೆ

Team Udayavani, May 3, 2019, 3:43 PM IST

kopala-4-tdy..

ಕುಷ್ಟಗಿ: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕಾರ್ಯಕರ್ತರು ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕುಷ್ಟಗಿ: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುದ್ದೀಪ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕಾರ್ಯಕರ್ತರು ಪುರಸಭೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ಮಲ್ಲಯ್ಯ ವೃತ್ತದಿಂದ ಜಿಲ್ಲಾಧ್ಯಕ್ಷ ಹುಲಗಪ್ಪ ಚೂರಿ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಪುರಸಭೆ ಆಡಲಿತ ಅವ್ಯವಸ್ಥೆ ಕುರಿತು ಧಿಕ್ಕಾರ ಕೂಗಿದರು. ನಂತರ ಪುರಸಭೆ ಕಾರ್ಯಾಲಯದಲ್ಲಿ ಮುಖ್ಯಾಧಿಕಾರಿ ಅಶೋಕ ಪಾಟೀಲ ಅನುಪಸ್ಥಿತಿಯಲ್ಲಿ ಅಕೌಟೆಂಟ್ ದೇವೇಂದ್ರಪ್ಪ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಹುಲಗಪ್ಪ ಚೂರಿ, ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ವಾರದಲ್ಲಿ ಎರಡು ಬಾರಿ ನೀರು ಪೂರೈಸಲು ಪುರಸಭೆ ಕ್ರಮ ಕೈಗೊಳ್ಳಬೇಕು. ಪಟ್ಟಣದ ಮುಖ್ಯ ರಸ್ತೆಯ ವಿಭಜಕಗಳ ಹೈಮಾಸ್ಟ್‌ ವಿದ್ಯುದ್ದೀಪಗಳಿಗೆ ಬೆಳಕಿನ ಭಾಗ್ಯ ಕಲ್ಪಿಸಿ ಕತ್ತಲೆಯಿಂದ ಮುಕ್ತಗೊಳಿಸಬೇಕು. ಕಳೆದ ಮೂರು ವರ್ಷಗಳಿಂದ ನನೆಗುದಿಯಲ್ಲಿರುವ 24 ತಾಸು ನೀರು ಪೂರೈಕೆ ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ಪಟ್ಟಣದಲ್ಲಿ ಸೊಳ್ಳೆ ನಿಯಂತ್ರಣಕ್ಕಾಗಿ ಸೊಳ್ಳೆ ನಿರೋಧಕ ಸಿಂಪರಣೆಗೆ ಫಾಗಿಂಗ್‌ ವ್ಯವಸ್ಥೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಕಳೆದ ಮಾರ್ಚ್‌ 12ರಿಂದ ಕುಷ್ಟಗಿ ಪಟ್ಟಣದ ಮುಖ್ಯ ರಸ್ತೆಯ ವಿಭಜಕ ವಿದ್ಯುತ್‌ ಕಂಬಗಳಲ್ಲಿ ವಿದ್ಯುದ್ದೀಪ ಬೆಳಗುತ್ತಿಲ್ಲ. ವಾಹನಗಳ ಬೆಳಕಲ್ಲಿ ಸಾರ್ವಜನಿಕರು ಸಂಚರಿಸುವ ದುಸ್ಥಿತಿ ಎದುರಾಗಿದೆ. ಪುರಸಭೆ ದುರಸ್ತಿಗೀಡಾದ ವಿದ್ಯುದ್ದೀಪಗಳ ಮರು ದುರಸ್ತಿಗೂ ಪ್ರಯತ್ನಿಸಿಲ್ಲ. ಇನ್ನೂ ಮೂರು ದಿನಗಳಲ್ಲಿ ಬೇಡಿಕೆ ಈಡೇರಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಗೌರವಾಧ್ಯಕ್ಷ ಮಹಾಂತೇಶ ಆರೇರ್‌, ತಾಲೂಕಾ ಅಧ್ಯಕ್ಷ ದೇವರಾಜ್‌ ಹಜಾಳ್‌, ರಫೀ ಬಂಗಾಳಿ, ತೊಂಡೆಪ್ಪ ಚೂರಿ, ನಾಗರಾಜ್‌ ಭೋವಿ, ಹನಮಂತಪ್ಪ ಬೂತಬಿಲ್ಲಿ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.