ಎನ್‌ಇಪಿ ವಿರೋಧಿಸಿ ಸಹಿ ಸಂಗ್ರಹ

ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಚಾಲನೆ

Team Udayavani, May 3, 2022, 9:19 AM IST

2

ಕೊಪ್ಪಳ: ಕೇಂದ್ರ ಸರ್ಕಾರ ಜಾರಿಗೆ ತಂದ ಎನ್‌ಇಪಿ-2020 ವಿರೋಧಿಸಿ ಎಐಡಿಎಸ್‌ಒ ದೇಶಾದ್ಯಂತ ಕೋಟಿ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದು, ಅದರ ಭಾಗವಾಗಿ ನಗರದ ಗವಿಮಠ ಮೈದಾನದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಅಖೀಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯಾಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಎನ್‌ಇಪಿ-2020 ಶಿಕ್ಷಣದ ಖಾಸಗೀಕರಣ, ಕೋಮುವಾದೀಕರಣ, ವಾಣಿಜ್ಯೀಕರಣ ಹಾಗೂ ಕೇಂದ್ರೀಕರಣದ ನೀಲಿನಕ್ಷೆಯಾಗಿದೆ. ಇಲ್ಲಿ ಬಹುಭಾಷಾ ಪದ್ಧತಿ, ವೃತ್ತಿ ಶಿಕ್ಷಣ, ಧರ್ಮಾಧಾರಿತ ಶಿಕ್ಷಣವು ವಿದ್ಯಾರ್ಥಿಗಳ ಮೇಲೆ ಕೆಟ್ಟಪರಿಣಾಮ ಬೀರಲಿದೆ. ಇದನ್ನು ಪ್ರತಿಯೊಬ್ಬರು ವಿರೋಧ ಮಾಡಬೇಕು. ನಾನು ಸಹ ಈ ಜನ ವಿರೋಧಿ, ಶಿಕ್ಷಣ ವಿರೋಧಿ ಎನ್‌ಇಪಿ ವಿರೋಧಿ ಸುವೆ ಎಂದರು.

ಎಐಡಿಎಸ್‌ಓ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಗುರಳ್ಳಿ ರಾಜ ಅವರು ಮಾತನಾಡಿ, ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಅನುಷ್ಠಾನದ ವಿರುದ್ಧ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆದರೆ ಹಲವು ಶಿಕ್ಷಣ ತಜ್ಞರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರ ವಿರೋಧದ ನಡುವೆಯೂ ಈ ನೀತಿಯನ್ನು ಇದೀಗ ಅನುಷ್ಠಾನ ಮಾಡಲಾಗುತ್ತಿದೆ. ಸಾರ್ವಜನಿಕ ಶಿಕ್ಷಣವನ್ನು ನಾಶಗೊಳಿಸಿ, ಶಿಕ್ಷಣ ಕ್ಷೇತ್ರದ ಸಂಪೂರ್ಣ ವ್ಯಾಪಾರೀಕರಣ ಗೊಳಿಸುವ ಉದ್ದೇಶದಿಂದಲೇ ಎನ್‌ಇಪಿ ಅಪ್ರಜಾತಾಂತ್ರಿಕವಾಗಿ ಹೇರಲಾಗುತ್ತಿದೆ ಎಂದರು.

ಆರಂಭದಿಂದಲೂ ಈ ಕರಾಳ ನೀತಿಯನ್ನು ಎಐಡಿಎಸ್‌ಒ ವಿರೋಧಿಸುತ್ತಾ ಬಂದಿದೆ. ಈ ಹೋರಾಟದ ಭಾಗವಾಗಿ ಅಖೀಲ ಭಾರತ ಸಮಿತಿ ನಾಯಕತ್ವದಲ್ಲಿ ದೇಶಾದ್ಯಂತ ಒಂದು ಕೋಟಿ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಲಾಗಿದೆ. ರಾಜ್ಯದಲ್ಲಿನ ಸಹಿ ಸಂಗ್ರಹ ಅಭಿಯಾನಕ್ಕೆ ರಾಜ್ಯದ ಹಲವು ಗಣ್ಯರು, ಶಿಕ್ಷಣ ತಜ್ಞರು, ಸಾಹಿತಿಗಳು ತಮ್ಮ ಬೆಂಬಲ ಸೂಚಿಸಿದ್ದಾರೆ.

ಎನ್‌ಇಪಿ ಅನುಷ್ಠಾನಕ್ಕೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಕರ್ನಾಟಕ ಸರ್ಕಾರ ನಾಲ್ಕು ವರ್ಷದ ಪದವಿ ಕೋರ್ಸ್‌ ಅನ್ನು ಪ್ರಸ್ತುತ ಶೈಕ್ಷಣಿಕ ವರ್ಷ ಜಾರಿ ಮಾಡಿತು. ಆದರೆ ಪರೀಕ್ಷೆಗಳಿಗೆ ಇನ್ನು ಒಂದು ತಿಂಗಳು ಮಾತ್ರ ಉಳಿದಿದೆ ಎಂದಾಗಲೂ ಸರ್ಕಾರ ಮತ್ತು ವಿವಿಗಳು ನೂತನ ಕೋರ್ಸ್‌ಗೆ ಪೂರಕ ಪಠ್ಯಕ್ರಮ, ಎಲ್ಲ ವಿಷಯಗಳಿಗೂ ಸಂಬಂಧಪಟ್ಟಂತೆ ಪಠ್ಯಪುಸ್ತಕಗಳು ತಯಾರಿ ಮಾಡಿಲ್ಲ. ಬೋಧಕರ ಕೊರತೆ, ಪಾಠ ಮಾಡಲು ಸಾಮಗ್ರಿಗಳ ಕೊರತೆ, ತರಗತಿಗಳ ಕೊರತೆಯಿಂದಾಗಿ ಯಾವುದೇ ಸಮಗ್ರ ರೀತಿಯ ಅಧ್ಯಾಯಗಳು ನಡೆದಿಲ್ಲ. ಈ ಹಠಾತ್‌ ಹೇರಿಕೆಯು ರಾಜ್ಯದ ಪದವಿ ಶಿಕ್ಷಣದಲ್ಲಿ ಅತ್ಯಂತ ಗೊಂದಲ ಹಾಗೂ ಸಮಸ್ಯೆಗಳನ್ನು ಸೃಷ್ಟಿಸಿದೆ ಎಂದರು.

ಎಐಡಿಎಸ್‌ಒ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ, ಎಐಡಿಎಸ್‌ಒ ಸದಸ್ಯ ಬಸವರಾಜ, ದುಗೇìಶ, ಮಂಜುನಾಥ, ಶ್ರೀಕಾಂತ, ಕಿರಣ ಹಾಗೂ ವಿದ್ಯಾರ್ಥಿಗಳಾದ ಉದಯ, ಕಳಕೇಶ, ವೀರೇಶ, ಅಭಿಷೇಕ, ಮಾರುತಿ, ಭೀಮೇಶ, ದೇವರಾಜ, ಹನುಮೇಶ, ರವಿ, ಮಹಾಂತೇಶ, ನಿಂಗರಾಜ, ಅಪ್ಪಣ್ಣ ಸೇರಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.