ವಸತಿ ನಿಲಯದಲ್ಲಿ ನೀರವ ಮೌನ
•ವಿದ್ಯಾರ್ಥಿಗಳಿಗೆ 4 ದಿನಗಳ ರಜೆ•3 ಆರೋಪಿಗಳಿಗೆ ಜಾಮೀನು!•ಮನೆಗೆ ತೆರಳಿದ ಮಕ್ಕಳು
Team Udayavani, Aug 20, 2019, 1:24 PM IST
ಕೊಪ್ಪಳ: ನಗರದ ಬನ್ನಿಕಟ್ಟಿ ಏರಿಯಾದ ಡಿ. ದೇವರಾಜ ಅರಸು ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ವಿದ್ಯುತ್ ಅವಘಡದಿಂದ ಐವರು ವಿದ್ಯಾರ್ಥಿಗಳ ಸಾವಿನ ಪ್ರಕರಣದಿಂದಾಗಿ ವಸತಿ ನಿಲಯದಲ್ಲಿ ನೀರವ ಮೌನ ಆವರಿಸಿದೆ. ನಿಲಯದ ವಿದ್ಯಾರ್ಥಿಗಳಿಗೆ ನಾಲ್ಕು ದಿನ ರಜೆ ನೀಡಲಾಗಿದ್ದು, ಕಟ್ಟಡ ಮಾಲಿಕ ಸೇರಿ ಮೂರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಗೆ ಜಾಮೀನು ದೊರೆತಿದೆ.
ವಿದ್ಯಾರ್ಥಿಗಳು ಮೃತಪಟ್ಟ ಬೆನ್ನಲ್ಲೇ ಉಳಿದ ಮಕ್ಕಳನ್ನು ಪಾಲಕರು ಮನೆಗಳಿಗೆ ಕರೆದುಕೊಂಡು ಹೋಗಿದ್ದಾರೆ. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಪೊಲೀಸರು ಮೊದಲು ವಸತಿ ನಿಲಯದ ವಾರ್ಡನ್ ಬಸವರಾಜ ಬೆಳವಾಡ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು ಆ ಬೆನ್ನಲ್ಲೇ ಜೆಸ್ಕಾಂ ಅಧಿಕಾರಿ ನಾಗರತ್ನ ಅವರನ್ನು ಬಂಧಿಸಲಾಗಿತ್ತು. ಆದರೆ ಈ ಆರೋಪಿಗಳಿಗೆ ರವಿವಾರ ರಾತ್ರಿ ವೇಳೆಗೆ ಕೋರ್ಟ್ನಿಂದ ಜಾಮೀನು ದೊರೆತಿದೆ. ಇನ್ನೂ ಕಟ್ಟಡ ಮಾಲಿಕ ಬಸವನಗೌಡ ಅವರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಮಾಲಿಕ ಬಂಧನವಾಗುತ್ತಿದ್ದಂತೆ ಜಾಮೀನು ದೊರೆತಿದ್ದು, ಅಚ್ಚರಿ ಮೂಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜಾಮೀನು ದೊರೆತಿದೆ. ಇನ್ನೂ ಹಾಸ್ಟೆಲ್ನಲ್ಲಿ ನಡೆದ ಅವಘಡದ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ರಜೆ ನೀಡಲಾಗಿದೆ. ವಿದ್ಯಾರ್ಥಿಗಳು ಇಲ್ಲದೇ ಹಾಸ್ಟೆಲ್ನಲ್ಲಿ ನೀರವ ಮೌನ ಆವರಿಸಿದೆ. ಕೆಲವು ವಿದ್ಯಾರ್ಥಿಗಳಂತೂ ಐವರು ವಿದ್ಯಾರ್ಥಿಗಳ ಸಾವಿನ ಸನ್ನಿವೇಶವನ್ನು ಕಣ್ಣಾರೆ ಕಂಡು ಹಾಸ್ಟೆಲ್ಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಹೆದರಿಕೆಯಿಂದಲೇ ನಮಗೆ ಹಾಸ್ಟೆಲ್ಗೆ ತೆರಳಲು ಭಯವಾಗುತ್ತಿದೆ ಎನ್ನುತ್ತಿದ್ದಾರೆ. ಇಷ್ಟೆಲ್ಲ ಬೆಳವಣಿಗೆ ನಡೆದರೂ ಹಾಸ್ಟೆಲ್ ಮುಂಭಾಗದಲ್ಲಿರುವ ವಿದ್ಯುತ್ ತಂತಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡುವ ಕಾರ್ಯ ನಡೆಯದೇ ಇರುವುದು ಶೋಚನೀಯ ಸಂಗತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್