ಆಮೆಗತಿಯಲ್ಲಿ ಕ್ಯಾಂಟೀನ್‌ ಕಾರ್ಯ

•ಜಿಲ್ಲೆಗೆ ಮಂಜೂರಾದ 5ರಲ್ಲಿ ಒಂದೇ ಕ್ಯಾಂಟೀನ್‌ ಆರಂಭ•ಯೋಜನೆಗೆ ಉತ್ತಮ ಪ್ರತಿಕ್ರಿಯೆ

Team Udayavani, Jul 28, 2019, 11:36 AM IST

kopala-tdy-1

ಕೊಪ್ಪಳ: ನಗರದಲ್ಲಿ ಆರಂಭವಾಗಿರುವ ಇಂದಿರಾ ಕ್ಯಾಂಟೀನ್‌.

ಕೊಪ್ಪಳ: ಈ ಹಿಂದಿನ ಕಾಂಗ್ರೆಸ್‌ ಸರ್ಕಾರ ಜನತೆಗೆ ಕಡಿಮೆ ದರದಲ್ಲಿ ಉಪಹಾರ ಹಾಗೂ ಊಟ ಪೂರೈಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್‌ ಎಂಬ ಮಹತ್ವಾಕಾಂಕ್ಷಿ ಯೋಜನೆ ಜಾರಿಗೊಳಿಸಿದೆ. ಆದರೆ ಜಿಲ್ಲೆಗೆ ಮಂಜೂರಾದ 5 ಕ್ಯಾಂಟೀನ್‌ಗಳ ಪೈಕಿ, ಒಂದೇ ಕ್ಯಾಂಟೀನ್‌ ಆರಂಭಿಸಿದ್ದು, ಇನ್ನೂ ನಾಲ್ಕು ಕ್ಯಾಂಟೀನ್‌ ಆಮೆಗತಿಯ ಪ್ರಗತಿ ಕಾಣುತ್ತಿವೆ.

ಹೌದು. ನಗರ ಪ್ರದೇಶಗಳ ಜನರು ಹೋಟೆಲ್ಗಳಲ್ಲಿ ಊಟ ಹಾಗೂ ಉಪಹಾರಕ್ಕೆ ಹೆಚ್ಚಿನ ಬೆಲೆ ತೆರುತ್ತಿದ್ದಾರೆ. ಇದೆಲ್ಲವನ್ನೂ ಗಮನಿಸಿ ಕಾರ್ಮಿಕ ವರ್ಗ, ಕೂಲಿಕಾರರು ಸೇರಿದಂತೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಿಂದಿನ ಕಾಂಗ್ರೆಸ್‌ ಸರ್ಕಾರ ಇಂದಿರಾ ಕ್ಯಾಂಟೀನ್‌ ಯೋಜನೆ ಜಾರಿ ಮಾಡಿದೆ. ಈ ಪೈಕಿ ಜಿಲ್ಲೆಗೆ 5 ಕ್ಯಾಂಟೀನ್‌ ಮಂಜೂರಾಗಿವೆ. ಆದರೆ ಕೊಪ್ಪಳ ನಗರದಲ್ಲಿ ಮಾತ್ರ ಒಂದು ಆರಂಭವಾಗಿದ್ದು, ಇನ್ನೂಳಿದ ನಾಲ್ಕು ಕಡೆ ಕ್ಯಾಂಟೀನ್‌ ಪ್ರಗತಿಯ ಹಾದಿಯಲ್ಲಿವೆ ಎನ್ನುತ್ತಾರೆ ಅಧಿಕಾರಿಗಳು.

ಏಲ್ಲೆಲ್ಲಿ ಏನೇನು ಸ್ಥಿತಿಯಿದೆ?:ಗಂಗಾವತಿ, ಯಲಬುರ್ಗಾದಲ್ಲಿ ಕ್ಯಾಂಟೀನ್‌ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದರೆ, ಅಡುಗೆ ಕೊಠಡಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು ಬಾಕಿಯಿದೆ. ಇನ್ನೂ ಕುಷ್ಟಗಿ ಪುರಸಭೆ ವ್ಯಾಪ್ತಿಯಲ್ಲಿ ಕ್ಯಾಂಟೀನ್‌ ಆರಂಭಕ್ಕೆ ಕೆಎಸ್‌ಆರ್‌ಟಿಸಿ ನಿಲ್ದಾಣದ ಸ್ಥಳದಲ್ಲೇ ನಿವೇಶನ ಪಡೆಯಲಾಗಿದ್ದು, ಕಟ್ಟಡ ಕಾಮಗಾರಿ ಆರಂಭಿಸಬೇಕಿದೆ. ಗಂಗಾವತಿಯಲ್ಲಿ ಮತ್ತೂಂದು ಕ್ಯಾಂಟೀನ್‌ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ.

ಬಡವರಿಗೆ ಅನುಕೂಲ: ಇಂದಿರಾ ಕ್ಯಾಂಟೀನ್‌ನಲ್ಲಿ ಗ್ರಾಮೀಣ ಪ್ರದೇಶದ ಜನರೇ ಹೆಚ್ಚು ಸೌಲಭ್ಯ ಪಡೆಯುತ್ತಿರುವುದು ಇತ್ತೀಚೆಗೆ ಕಂಡು ಬರುತ್ತಿದೆ. ನಗರ ಪ್ರದೇಶಕ್ಕೆ ಕೆಲಸಕ್ಕೆಂದು ಬರುವ ಕೆಳ ಹಾಗೂ ಮಧ್ಯಮ ವರ್ಗದ ಜನರು ಕ್ಯಾಂಟೀನ್‌ಗೆ ಆಗಮಿಸಿ ಉಪಹಾರ ಸೇರಿದಂತೆ ಮಧ್ಯಾಹ್ನದ ಊಟವನ್ನೂ ಮಾಡುತ್ತಿದ್ದಾರೆ. ಉಪಹಾರಕ್ಕೆ 5 ರೂ. ದರವಿದ್ದರೆ, ಊಟಕ್ಕೆ 10 ರೂ. ದರವಿದೆ. ಇನ್ನೂ ನಿತ್ಯ ಕೂಲಿ ಕೆಲಸ ಮಾಡುವ ಬಡ ಜನರೂ ಕ್ಯಾಂಟೀನ್‌ನಲ್ಲಿ ಭೋಜನ ಸೇವಿಸುತ್ತಿದ್ದಾರೆ. ವಿದ್ಯಾರ್ಥಿಗಳು ಸಹ ಇಂದಿರಾ ಕ್ಯಾಂಟೀನ್‌ನಲ್ಲಿ ಉಪಹಾರ, ಊಟ ಮಾಡುತ್ತಿದ್ದಾರೆ.

ಪ್ರಸ್ತುತ ನಗರ ಪ್ರದೇಶದ ಹೋಟೆಲ್ಗಳಲ್ಲಿ ಉಪಹಾರ ಒಂದಕ್ಕೆ 30 ರೂ. ದರವಿದೆ. ಇನ್ನೂ ಊಟಕ್ಕೆ 50ರಿಂದ 60 ರೂ. ಇದೆ. ಕೆಲಸಕ್ಕೆಂದು ನಗರಕ್ಕೆ ಆಗಮಿಸುವ ಗ್ರಾಮೀಣ ಭಾಗದ ಕಾರ್ಮಿಕರು ನಿತ್ಯ 50ರಿಂದ 60 ರೂ. ವ್ಯಯಿಸಿ ಹೋಟೆಲ್ನಲ್ಲಿ ಊಟ ಮಾಡಲು ಹೊರೆಯಾಗುತ್ತದೆ. ನಿತ್ಯ ಊಟಕ್ಕೆ ಇಷ್ಟೊಂದು ಹಣ ವ್ಯಯಿಸಿದರೆ ನಮ್ಮ ಜೀವನ ನಡೆಯುವುದು ಕಷ್ಟ ಎಂಬುದನ್ನು ಅರಿತು ಕಾರ್ಮಿಕರು ಇಂದಿರಾ ಕ್ಯಾಂಟೀನ್‌ಗೆ ಆಗಮಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಸಂಬಂಧಿಕರು ಕೂಡ ಇಂದಿರಾ ಕ್ಯಾಂಟೀನ್‌ಗೆ ಆಗಮಿಸುತ್ತಿದ್ದಾರೆ.

ಒಟ್ಟಿನಲ್ಲಿ ಕೆಳ ಹಾಗೂ ಮಧ್ಯಮ ವರ್ಗದವರಿಗೆ ಇಂದಿರಾ ಕ್ಯಾಂಟೀನ್‌ ಅನುಕೂಲವಾಗುತ್ತಿದೆ. ಜಿಲ್ಲೆಯಲ್ಲಿನ ಉಳಿದ ಕ್ಯಾಂಟೀನ್‌ಗಳನ್ನು ಶೀಘ್ರ ಆರಂಭಿಸಿದರೆ ಅಲ್ಲಿಯೂ ಜನರು ಇದರ ಸದ್ಭಳಕೆ ಮಾಡಿಕೊಳ್ಳಲಿದ್ದಾರೆ ಎನ್ನುವ ಅಭಿಪ್ರಾಯ ಕೇಳಿ ಬಂದಿವೆ.

 

•ದತ್ತು ಕಮ್ಮಾರ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.