ಸೈನಿಕರ ಊರು ಖ್ಯಾತಿಯ ‘ಸಂಗನಹಾಲ’


Team Udayavani, Apr 26, 2019, 4:39 PM IST

hav-2

ಯಲಬುರ್ಗಾ: ಒಂದು ಊರಿನಿಂದ ಅಬ್ಬಬ್ಟಾ ಎಂದರೆ ಎಷ್ಟು ಜನರು ಸೈನ್ಯ ಸೇರಿರಬಹುದು ಎಂದರೆ ಒಬ್ಬರೋ..ಇಬ್ಬರೋ..ಇರಬಹುದು. ಆದರೆ ಇಲ್ಲೊಂದು ಊರಲ್ಲಿ 15ಕ್ಕೂ ಹೆಚ್ಚು ಯುವಕರು ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದರೆ, 30ಕ್ಕೂ ಹೆಚ್ಚು ಸೈನಿಕರು ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.

ಹೌದು. ತಾಲೂಕಿನ ಪುಟ್ಟ ಗ್ರಾಮ ಸಂಗನಹಾಲದ ಯಾವ ಓಣಿಗೆ ಹೋದರೂ ಅಲ್ಲಿ ವೀರ ಯೋಧರನ್ನು ಹೆತ್ತವರು ಸಿಗುತ್ತಾರೆ. ಉಗ್ರರೊಂದಿಗಿನ ಯುದ್ಧದ ರೋಚಕ ಕಥೆಗಳೇ ಈ ಊರಿನ ಕಟ್ಟೆಗಳಲ್ಲಿ ಚರ್ಚೆಯಾಗುತ್ತವೆ. ಅಷ್ಟೇ ಅಲ್ಲ ಈ ಊರಿನ ಸಮೀಪದಲ್ಲಿ ಎಲ್ಲಿಯಾದರೂ ಸೇನಾ ಭರ್ತಿ ರ್ಯಾಲಿ ಇದ್ದರೂ ಅಲ್ಲಿ ಸಂಗನಹಾಲ ಗ್ರಾಮದ ಯುವಕರ ತಂಡವೇ ನೆರೆದಿರುತ್ತದೆ. ಯಲಬುರ್ಗಾ ತಾಲೂಕಿನಲ್ಲಿಯೇ ಈ ಗ್ರಾಮದ ಯುವಕರೇ ಹೆಚ್ಚು ಸೈನ್ಯಕ್ಕೆ ಸೇರಿದ್ದಾರೆ.

ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಮರಳುವ ಹಿರಿಯ ಯೋಧರು ಸೇನೆ ಸೇರಲು ಊರಿನ ಯುವಕರಲ್ಲಿ ಸ್ಫೂರ್ತಿ ತುಂಬುತ್ತಾರೆ. ಯುವಕರಿಗೆ ತರಬೇತಿ ನೀಡುತ್ತಾರೆ. ಮಕ್ಕಳನ್ನು ದೇಶ ಸೇವೆಗೆ ಕಳುಹಿಸಲು ಯಾವುದೇ ಪಾಲಕರು ಹಿಂಜರಿಯಲ್ಲ. ಮಕ್ಕಳನ್ನು ಹೆಮ್ಮೆಯಿಂದ ಸೈನ್ಯಕ್ಕೆ ಕಳುಹಿಸಿಕೊಡುತ್ತಾರೆ. ಸೈನ್ಯ ಸೇರಬೇಕೆನ್ನುವ ಈ ಊರಿನ ಯುವಕರ ಉತ್ಸಾಹ ಪ್ರತಿ ವರ್ಷ ಹೆಚ್ಚುತ್ತಲೆ ಇದೆ.

ಸೈನಿಕರು ರಜಾ ದಿನಕ್ಕೆಂದು ಗ್ರಾಮಕ್ಕೆ ಗ್ರಾಮಕ್ಕೆ ಬಂದರೆ ಸುಮ್ಮನೆ ಕೂಡ್ರುವುದಿಲ್ಲ. ಗ್ರಾಮದಲ್ಲಿ ರಕ್ತದಾನ ಶಿಬಿರ, ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಗ್ರಾಮದ ಸೈನಿಕರ ಕಾರ್ಯ ನಿಜಕ್ಕೂ ಶ್ಲಾಘನೀಯ. ದೇಶದ ಭದ್ರತೆ, ಗಡಿ ವಿಚಾರ ಸೇರಿದಂತೆ ಹಲವಾರು ವಿಷಯಗಳ ಕುರಿತು ತಾಲೂಕಿನಲ್ಲಿ ಎಲ್ಲಿಯಾದರೂ ಜನತೆ ಚರ್ಚೆಗೆ ಬಂದರೆ ಸಂಗನಹಾಲ ಗ್ರಾಮದ ಸೈನಿಕರನ್ನು ಜನರು ಸ್ಮರಿಸುತ್ತಾರೆ. ಇತ್ತೀಚಿನ ದಿನಗಳಲ್ಲಿ ಸರಕಾರ, ಸರ್ಕಾರೇತರ ಸಂಘ-ಸಂಸ್ಥೆಗಳಿಂದ ದೇಶ ಕಾಯುವ ಯೋಧರನ್ನು ಗೌರವಿಸುವ ಸಂಪ್ರದಾಯ ಹೆಚ್ಚಾಗಬೇಕು. ಸೈನಿಕರು ತ್ಯಾಗ ಜೀವಿಗಳು. ದೇಶ ಕಾಯಲು ತಮ್ಮ ಜೀವನವನ್ನೇ ಮುಡುಪಾಗಿಟ್ಟಿರುತ್ತಾರೆ. ದೇಶ ಕಾಯುವ ಸೈನಿಕರನ್ನು ಪ್ರತಿಯೊಬ್ಬರು ಆದರ್ಶವಾಗಿಟ್ಟುಕೊಳ್ಳಬೇಕು ಎನ್ನುತ್ತಾರೆ ಸಂಗನಹಾಲ ಗ್ರಾಮಸ್ಥರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.