ಪೌರಸೇವಾ ಕಾರ್ಮಿಕರಿಗೆ ಕ್ಯಾಂಟಿನ್‌ನಿಂದ ವಿಶೇಷ ಸೇವೆ


Team Udayavani, Jan 20, 2020, 4:12 PM IST

kopala-tdy-1

ಕೊಪ್ಪಳ: ನಗರದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಜಾತ್ರಾ ಆವರಣದಲ್ಲಿರುವ ಅಪ್ಪಾಜಿ ಕ್ಯಾಂಟೀನ್‌ ಮಾಲೀಕರು ವಿಶೇಷ ಸೇವೆ ಮಾಡಿ ಗಮನ ಸೆಳೆದಿದ್ದಾರೆ.

ಗವಿಸಿದ್ದೇಶ್ವರ ಜಾತ್ರೆಯಲ್ಲಿ ಸ್ವಾಮೀಜಿಗಳು ಪೌರ ಕಾರ್ಮಿಕರ ಬಗ್ಗೆ ಪ್ರೀತಿ ತೋರುತ್ತಿದ್ದಾರೆ. ಪೌರ ಸೇವಾ ಕಾರ್ಮಿಕರ ಸೇವೆಯಿಂದಾಗಿಜಾತ್ರಾ ಆವರಣದಲ್ಲಿ ಧೂಳು ಇಲ್ಲದೇಆರೋಗ್ಯಕರ ವಾತಾವರಣ ನಿರ್ಮಾಣವಾಗಿದೆ. ಇವರ ಸೇವೆಯನ್ನು ಮನಗೊಂಡು ಅಪ್ಪಾಜಿ ಕ್ಯಾಂಟೀನ್‌ ಮಾಲೀಕರಾದ ಸತೀಶ ಸರನಾಡಗೌಡರ್‌ ಸುಮಾರು 90 ಪೌರ ಕಾರ್ಮಿಕರಿಗೆ ಹೆಸರು ಬೇಳೆ ಪಾಯಸ ಹಾಗೂ ಬೆಣ್ಣೆದೋಸೆ, ಕಾಫಿ ಒದಗಿಸಿದರು. ಅಲ್ಲದೇ ಮಹಿಳಾ ಕಾರ್ಮಿಕರಿಗೆ ಸೀರೆ ಮತ್ತು ಕುಪ್ಪಸ, ಪುರುಷ ಕಾರ್ಮಿಕರಿಗೆ ಅಂಗಿಯನ್ನು ಉಡುಗೊರೆಯಾಗಿ ನೀಡಿದರು. ಪ್ರತಿವರ್ಷದಂತೆ ಈ ವರ್ಷವು ಅಪ್ಪಾಜಿ ಕ್ಯಾಂಟೀನ್‌ಮಾಲೀಕ ಸತೀಶ ಸೇವೆಗೈದಿರುವುದು ಶ್ಲಾಘನೀಯ.

ಜ. 20ರಂದೂ ಉಪಹಾರ ಸೇವೆ: ಪೌರ ಕಾರ್ಮಿಕರಿಗೆ ಜ. 20ರಂದು ಕೊಪ್ಪಳ ಕಾ ರಾಜಾ ಗಣಪತಿ ಮಿತ್ರಮಂಡಳಿಯಿಂದ ಉಪಹಾರದ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರತಿದಿನವೂಒಂದಿಲ್ಲೊಂದು ಸಂಘ-ಸಂಸ್ಥೆಗಳು ಪೌರಕಾರ್ಮಿಕರ ಬಗೆಗೆ ಕಾಳಜಿ ತೋರುತ್ತಿದೆ.

ಭಕ್ತಸಾಗರ: ರವಿವಾರ ರಜಾ ದಿನವಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ್ದರು. ನಗರ ಹಾಗೂ ಹಳ್ಳಿಗಳಿಂದ ಆಗಮಿಸಿದ ಭಕ್ತರು ಶ್ರೀಮಠಕ್ಕೆಬಂದು ಕತೃì ಗದ್ದುಗೆಯ ದರ್ಶನ ಹಾಗೂ ಶ್ರೀಗಳ ಆಶೀರ್ವಾದ ಪಡೆದರು. ಸುತ್ತಲೂ ಹಳ್ಳಿಗಳಿಂದ ಎತ್ತಿನ ಬಂಡಿ,  ಟ್ರ್ಯಾಕ್ಟರ್‌, ಲಘು ವಾಹನದೊಂದಿಗೆ ಮಕ್ಕಳ ಸಮೇತ ಜಾತ್ರೆಗೆ ಆಗಮಿಸಿ ಜಾತ್ರೆಯಲ್ಲಿ ಸುತ್ತಾಡಿದರು.

ನಗರದ ಭಕ್ತರು ಸಹ ರವಿವಾರ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು ವಿಶೇಷ. ಜಾತ್ರಾ ಆವರಣದಲ್ಲಿ ಮಕ್ಕಳು ಮನರಂಜನೆಯ ಆಟೋಟಗಳಲ್ಲಿ ತೊಡಗಿ, ಮಹಿಳೆಯರು ಬಳೆ ಅಂಗಡಿ, ಇನ್ನಿತರ ಗೃಹೋಪಯೋಗಿ ವಸ್ತು ಖರೀದಿಯಲ್ಲಿ ತೊಡಗಿದ್ದರು. ಬಳಿಕಮಹಾದಾಸೋದಲ್ಲಿ ಗೋ ಧಿ ಹುಗ್ಗಿ, ರೊಟ್ಟಿ, ದಾಲ್‌, ಕುಂಬಳಕಾಯಿ, ಅನ್ನ, ಸಾಂಬಾರ, ಕಡ್ಲಿಚಟ್ನಿ, ಉಪ್ಪಿನ ಕಾಯಿ ಸವಿದರು.

ದಾಸೋಹಕ್ಕೆ ಹರಿದು ಬಂದ ಧಾನ್ಯ: ಗವಿಮಠದ ಮಹಾದಾಸೋಹಕ್ಕೆ ರವಿವಾರ ಕಿನ್ನಾಳ್‌ ಗ್ರಾಮದ ಭಕ್ತರು 40 ಚೀಲ ನೆಲ್ಲು, 4 ಪ್ಯಾಕೆಟ್‌ ಬೆಲ್ಲ, 60 ಕುಂಬಳಕಾಯಿ ಅರ್ಪಿಸಿದರು. ಕವಲೂರ ಗ್ರಾಮದ ಸದ್ಭಕ್ತರು 30 ಕ್ವಿಂಟಲ್‌ ಗೋಧಿ  ಹುಗ್ಗಿ ಹಾಗೂ 5 ಕ್ವಿಂಟಲ್‌ ಸಜ್ಜಕವನ್ನು ತಯಾರಿಸಿ ಪ್ರಸಾದ ಸೇವೆಗೈದರು. ಮಾರುತಿ ಸೇವಾ ಸಮಿತಿ ಹುಡ್ಕೊà ಕಾಲನಿ ಕೊಪ್ಪಳ ಹಾಗೂ ಸತ್ಸಂಗ ಯುವಕ ಸಂಘ ಕಾರಟಗಿ ಹಾಗೂ ಇನ್ನಿತರ ಸಂಘಟನೆಗಳು, ಸ್ವಯಂ ಸೇವಕರು ಪ್ರಸಾದ ವಿತರಿಸುವ ಸೇವೆಗೈದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.