ನವರಾತ್ರಿ ಹಬ್ಬದ ಅಂಗವಾಗಿ ಬನ್ನಿಮಹಾಕಾಳಿಗೆ ಮಹಿಳೆಯರಿಂದ ವಿಶೇಷ ಮೌನ ವೃತ ಪೂಜೆ, ಆಚರಣೆ


Team Udayavani, Sep 27, 2022, 4:44 PM IST

18

ದೋಟಿಹಾಳ: ನವರಾತ್ರಿ ಹಬ್ಬ ಆರಂಭವಾದರೆ ಸಾಕು ಮಹಿಳೆಯರಿಗೆ ಎಲ್ಲಿಲ್ಲದ ಸಡಗರ, ಸಂಭ್ರಮ. ಕಾರಣ ನವರಾತ್ರಿ ಹಬ್ಬದ 9 ದಿನಗಳ ಕಾಲ ಮಹಿಳೆಯರು ವಿಶೇಷ ಮೌನವೃತ ಆಚರಣೆ ಮಾಡುತ್ತಿರುವುದಾಗಿದೆ. ಕಳೆದ 20 ವರ್ಷಗಳಿಂದಲೂ ಗ್ರಾಮದಲ್ಲಿ ಈ ವಿಶೇಷ ವೃತ ಕಂಡು ಬರುತ್ತಿದೆ.

ಕಳೆದ ಎರಡು ವರ್ಷ ಕೊರೊನಾ ಮಾಹಾಮಾರಿಯಿಂದ ಮಂಕಾಗಿದ್ದ ದಸರಾ ಹಬ್ಬ ಈ ವರ್ಷ ಮತ್ತೆ ತನ್ನ ವೈಭವವನ್ನು ಕಾಣುತ್ತಿದೆ. ಸೋಮವಾರಿದಿಂದ ನವರಾತ್ರಿ ಆರಂಭವಾದ ಪ್ರಯುಕ್ತ ಗ್ರಾಮದಲ್ಲಿನ ಮಹಿಳೆಯರು ಮತ್ತು ಮಕ್ಕಳು ಆಶ್ವೀಜ ಮಾಸದ ನವರಾತ್ರಿ ಹಬ್ಬದಲ್ಲಿ ವಿಶಿಷ್ಠವಾದ ಮೌನಾಚರಣೆಯೊಂದನ್ನು ಆಚರಿಸುತ್ತಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಇಲ್ಲಿನ ನೂರಕ್ಕೂ ಹೆಚ್ಚು ಮಹಿಳೆಯರು ಬೆಳಗಿನ ಬ್ರಾಹ್ಮಿ ಮುಹೂರ್ತದಲ್ಲಿ ಮೌನವಾಗಿ ಬನ್ನಿ ಮಹಾಕಾಳಿ ಕಟ್ಟೆಗೆ ಹೋಗಿ ಪೂಜೆ ಸಲ್ಲಿಸಿ ವಿಶೇಷವಾದ ಮೌನವೃತಾಚರಣೆ ಬೆಳಗಿನ ಜಾವ ಆಚರಿಸುತ್ತಿರುವುದು ಕಂಡು ಬರುತ್ತದೆ.

ಆಚರಣೆ ಕ್ರಮ: ಆಶ್ವೀಜ ಮಾಸದ ನವರಾತ್ರಿಯ ಪ್ರತಿದಿನ ಗ್ರಾಮದ ಯುವತಿಯರು, ಮಹಿಳೆಯರು, ಮತ್ತು ಮಕ್ಕಳು ಬೆಳಗಿನ ಜಾವ ನಾಲ್ಕು ಗಂಟೆಗೆ ಎದ್ದು ಮನೆ ಸ್ವಚ್ಛಗೊಳಿಸಿ, ದೇವರ ಕೋಣೆಯಲ್ಲಿ ರಂಗೋಲಿ ಹಾಕಿ, ಶೃಂಗಾರ ಮಾಡಿ ಮೌನವಾಗಿಯೇ ಇದ್ದು, ಮಡಿವಂತಿಕೆಯಿಂದ ಮನೆಯಲ್ಲಿ ದೇವರಿಗೆ ದೀಪ ಹಚ್ಚಿ ಗುಂಪು ಗುಂಪಾಗಿ ಮಬ್ಬು ಕತ್ತಲಲ್ಲಿ ಕೈಯಲ್ಲಿ ಹೂ-ಕಾಯಿ, ಕುಂಕುಮ ಹಣ್ಣುಹಂಪಲುಗಳೊಂದಿಗೆ ಗ್ರಾಮದಲ್ಲಿರುವ ಬನ್ನಿ ಮಹಾಕಾಳಿ ಕಟ್ಟೆಗೆ ಯಾರೊಂದಿಗೂ ಮಾತನಾಡದೆ ತೆರಳಿ ಪೂಜೆ ಸಲ್ಲಿಸುತ್ತಾರೆ.

ಅಕ್ಕಪಕ್ಕ ಜನರಿದ್ದರೂ ಪರಸ್ಪರ ಮಾತನಾಡದೆ ಕತ್ತಲಲ್ಲಿ ಮೌನವಾಗಿಯೆ ಹೆಜ್ಜೆ ಹಾಕುತ್ತಾರೆ. ಬನ್ನಿಕಟ್ಟೆಗೆ ಹೋಗಿ ಪೂಜೆ ಸಲ್ಲಿಸಿ ತಮ್ಮ ತಮ್ಮ ಪ್ರಾರ್ಥನೆ, ಹರಕೆಯನ್ನು ದೇವರಿಗೆ ಸಲ್ಲಿಸುತ್ತಾರೆ. ಬನ್ನಿಕಟ್ಟೆಗೆ ಇದೆ ರೀತಿ ಮೌನ ಆಚರಿಸಲು ಬರುವ ತಮ್ಮ ಗೆಳತಿಯರೊಂದಿಗೂ ಅಲ್ಲಿ ಮಾತನಾಡುವುದಿಲ್ಲ. ಪೂಜೆ ಮುಗಿಸಿಕೊಂಡು ಮನೆಗೆ ಮರಳಿದ ಬಳಿಕವೇ ಮೌನ ಬಿಟ್ಟು ಮಾತನಾಡುತ್ತಾರೆ.

ನಂಬಿಕೆ: ಬ್ರಾಹ್ಮಿ ಮಹೂರ್ತದಲ್ಲಿ ಮೌನವೃತ ಆಚರಿಸಿ ಬನ್ನಿ ಮಹಾಕಾಳಿಗೆ ಪೂಜೆ ಸಲ್ಲಿಸುವುದರಿಂದ ಕಷ್ಟಗಳು ನಿವಾರಣೆಯಾಗುತ್ತವೆ ಎಂಬುದು ಹಿಂದೂ ಧರ್ಮದ ಶ್ರೇಷ್ಟವಾದ ನಂಬಿಕೆಯಾಗಿದೆ. ಮೌನವೃತಾಚರಣೆ ಸುಮಾರು 18-20 ವರ್ಷಗಳಿಂದ ಆಚರಣೆಯಲ್ಲಿದೆ. ಈ ವೃತಾಚರಣೆಯಿಂದ ಗ್ರಾಮದ ಹಲವಾರು ಜನರಿಗೆ ಒಳಿತಾಗಿರುವ ಉದಾಹರಣೆಗಳಿವೆ. ಮಹಿಳೆಯರು ತಮ್ಮ ಗಂಡಂದಿರ ಒಳಿತಿಗಾಗಿ ಪೂಜೆ ಸಲ್ಲಿಸಿದರೇ, ಯುವತಿಯರು ಕಂಕಣಭಾಗ್ಯ ದೊರೆತು ಉತ್ತಮ ಜೀವನ ಸಿಗಲಿ ಎಂದು ಬೇಡಿಕೊಳ್ಳುತ್ತಾರೆ. ಮಕ್ಕಳು ಒಳ್ಳೆಯ ವಿಧ್ಯಾಬ್ಯಾಸ ದೊರೆಯಲಿ ಎಂದು ಪ್ರಾರ್ಥಿಸುತ್ತಾರೆ.

ಕೆಲವೇ ಜನರಿಂದ ಪ್ರಾರಂಭವಾದ ಈ ಆಚರಣೆ ನಂತರದ ದಿನಗಳಲ್ಲಿ ನಂಬಿಕೆ ಬಲವಾದ ಕಾರಣ ಊರಿನ ಪ್ರತಿ ಮನೆಯಿಂದ ಒಬ್ಬರಾದರೂ ಮೌನಾಚರಣೆ ಮೂಲಕ ದೇವಾಲಯಕ್ಕೆ ಹೋಗಿ ಪೂಜೆ ಸಲ್ಲಿಸುತ್ತಾರೆ.

-ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.