ಎಸ್ಸೆಸ್ಸೆಲ್ಸಿ ಪೂರ್ವಭಾವಿ ಸಿದ್ಧತಾ ಸಭೆ
Team Udayavani, Jun 22, 2020, 9:54 AM IST
ಕಾರಟಗಿ: ಪರೀಕ್ಷೆ ಬರೆಯುವ ಪ್ರತಿ ವಿದ್ಯಾರ್ಥಿಗಳನ್ನು ಆರೋಗ್ಯ ತಪಾಸಣೆಗೊಳಪಡಿಸಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು ಎಂದು ಶಾಸಕ ಬಸವರಾಜ ದಡೆಸೂಗುರ ಹೇಳಿದರು.
ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳು, ಪಾಲಕರು ಆತಂಕಗೊಂಡಿದ್ದಾರೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ಮೂಲಕ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಅಲ್ಲದೆ ಪರೀಕ್ಷಾ ಕೊಠಡಿಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳಿಗೆ ಸಾನಿಟೈಸರ್, ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡುವುದು ಬಹುಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕೊಠಡಿ ಮೇಲ್ವಿಚಾರಕರು ಕಟ್ಟುನಿಟ್ಟಾಗಿ ಎಲ್ಲ ನಿಯಮಗಳನ್ನು ಪಾಲಿಸಬೇಕು ಎಂದರು.
ತಹಶೀಲ್ದಾರ್ ಕವಿತಾ ಆರ್. ಮಾತನಾಡಿ, ಜೂ.25ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದ ಹಿನ್ನೆಲೆಯಲ್ಲಿ ತಾಲೂಕಾಡಳಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವಲ್ಲಿ ಯಾವುದೇ ತೊಂದರೆಯಾಗದಂತೆ ಅಗತ್ಯ ಎಲ್ಲಾ ಸಿದ್ಧತಾ ಕ್ರಮಗಳನ್ನು ನಡೆಸುತ್ತಲಿದೆ. ಪರೀಕ್ಷೆ ನಡೆಯುವ ಎರಡು ದಿನ ಮುಂಚಿತವಾಗಿ ಪರೀಕ್ಷಾ ಕೊಠಡಿಗಳನ್ನು ಸಾನಿಟೈಸ್ ಮಾಡಲಾಗುವುದು. ಉಳಿದಂತೆ ನಿಗದಿಪಡಿಸಿದ ಎಲ್ಲಾ ಕ್ರಮಗಳನ್ನು ಅನುಸರಿಸಲಾಗುತ್ತದೆ ಎಂದರು.
ಬಿಇಒ ಸೋಮಶೇಖರಗೌಡ ಮಾತನಾಡಿ, ಪಟ್ಟಣದಲ್ಲಿ 2 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 710 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಬಸ್ಗಳ ವ್ಯವಸ್ಥೆ ಸಾರಿಗೆ ಇಲಾಖೆ ಮಾಡಲಿದೆ. ಜಿಲ್ಲಾಡಳಿತದ ನಿರ್ದೇಶನದಂತೆ ಯಾವುದೇ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ಪರೀಕ್ಷೆಗಳು ನಡೆಸಲೂ ಎಲ್ಲ ಪೂರ್ವ ಸಿದ್ಧತಾ ಕಾರ್ಯ ನಡೆಸಲಾಗಿದೆ ಎಂದರು.
ಕನಕಗಿರಿ ತಹಶೀಲ್ದಾರ್ ರವಿ ಅಂಗಡಿ, ಪಿಎಸ್ಐ ಅವಿನಾಶ ಕಾಂಬ್ಳೆ, ತಾಪಂ ಇಒ ಚಂದ್ರಶೇಖರ, ಪುರಸಭೆ ಮುಖ್ಯಾಧಿಕಾರಿ ಎನ್.ಶಿವಲಿಂಗಪ್ಪ, ಪ್ರಾಚಾರ್ಯ ಅನಿಲಕುಮಾರ, ವಿರೂಪಾಕ್ಷಪ್ಪ ಕೋರಿ, ತಿರುಮಲಮ್ಮ, ವಿ.ವಿ. ಗೊಂಡಬಾಳ, ಸುರೇಶ ಕುಮಾರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!