ಎಸ್ಎಸ್ಎಲ್ಸಿ ಪರೀಕ್ಷೆ:ಸಿದ್ಧತಾ ಕಾರ್ಯ ಪೂರ್ಣ
Team Udayavani, Jun 23, 2020, 7:14 AM IST
ಸಿದ್ದಾಪುರ: ರಾಜ್ಯಾದ್ಯಂತ ಜೂ.25 ಗುರುವಾರ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ಸಿದ್ಧತೆ ನಡೆದಿದ್ದು, ಸೋಮವಾರ ಪರೀಕ್ಷಾ ಕೊಠಡಿಗಳಿಗೆ ಸ್ಯಾನಿಟೈಜ್ ಮಾಡಲಾಯಿತು. ಈ ಬಗ್ಗೆ ಮಾತನಾಡಿದ ಸಿದ್ದಾಪುರ ಪರೀಕ್ಷಾ ಕೇಂದ್ರದ ಅಧಿಧೀಕ್ಷಕ ಚಾಂದ್ ಪಾಷಾ, ಸಿದ್ದಾಪುರ ಪರೀಕ್ಷಾ ಕೇಂದ್ರದಲ್ಲಿ ಎಸ್ಎಸ್ಎಲ್ಸಿಯ ಒಟ್ಟು 290ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಷಯವಾರು ಪರೀಕ್ಷೆ ಬರೆಯಲಿದ್ದಾರೆ.
ಸರಕಾರಿ ಪ್ರೌಢ ಶಾಲೆ, ಕಸ್ತೂರಿ ಬಾ ಗಾಂಧಿ ವಸತಿ ಶಾಲೆ, ಸರಕಾರಿ ಪಪೂ ಕಾಲೇಜು ಸೇರಿದಂತೆ ಒಟ್ಟು 23 ಕೊಠಡಿಗಳನ್ನು ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದು, ಇಂದು ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಜ್ ಮಾಡಲಾಗಿದೆ. ಕೋವಿಡ್ 19 ಹಿನ್ನೆಲೆಯಲ್ಲಿ ಪರೀಕ್ಷೆ ಆರಂಭಕ್ಕೂ ಮುನ್ನ ಮೊದಲಿಗೆ ಪ್ರತಿಯೊಬ್ಬ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ಯಾನಿಂಗ್ಗೆ ಒಳಪಡಿಸಿ, ಕೈಗಳಿಗೆ ಸ್ಯಾನಿಟೈಸರ್ ಸಿಂಪಡಿಸಿ, ಮಾಸ್ಕ್ ಕಡ್ಡಾಯಗೊಳಿಸಿಕೊಂಡ ನಂತರ ಆಯಾ ವಿದ್ಯಾರ್ಥಿಗಳನ್ನು ಪರೀಕ್ಷಾ ಕೊಠಡಿಯೊಳಕ್ಕೆ ಬಿಡಲಾಗುತ್ತೆ. ಥರ್ಮಲ್ ಸ್ಕ್ಯಾನಿಂಗ್ ವೇಳೆ ವಿದ್ಯಾರ್ಥಿಗಳಿಗೆ ಟೆಂಪರೇಚರ್ ಜಾಸ್ತಿ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಎರಡು ಕೊಠಡಿಗಳನ್ನು ಮೀಸಲಿಡಲಾಗಿದ್ದು, ಆ ಕೊಠಡಿಯಲ್ಲಿ ಪರೀಕ್ಷೆ ಅವಕಾಶ ಮಾಡಿಕೊಡಲಾಗುತ್ತದೆ. ಸಾಮಾಜಿಕ ಅಂತರದೊಂದಿಗೆ ಒಂದು ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ. ಎಲ್ಲಾ ಕೊಠಡಿಗಳಲ್ಲಿಯೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರದಿಂದ 200 ಮೀಟರ್ವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ