ಸಿಸಿ ರಸ್ತೆ ಕಾಮಗಾರಿಗೆ ಚಾಲನೆ
Team Udayavani, Oct 5, 2019, 4:28 PM IST
ಕುಷ್ಟಗಿ: ಪಟ್ಟಣದ 15ನೇ ವಾರ್ಡ್ನಲ್ಲಿ 13 ಲಕ್ಷ ರೂ. ವೆಚ್ಚದಲ್ಲಿ ಸಿಮೆಂಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಪಟ್ಟಣದ ಸ್ವಚ್ಛತೆ ಹಿನ್ನೆಲೆಯಲ್ಲಿ ಚರಂಡಿ ಹಾಗೂ ಸಿಸಿ ರಸ್ತೆ ಕಾಮಗಾರಿಯನ್ನು ಸರ್ಕಾರ ಆದ್ಯತೆಯಾನುಸಾರ ಅನುದಾನ ಬಿಡುಗಡೆ ಮಾಡುತ್ತಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ. ಸದರಿ ಕಾಮಗಾರಿಯನ್ನು ಗುಣಮಟ್ಟದಿಂದ ನಿರ್ವಹಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ ಶಾಸಕರು, ಕಾಮಗಾರಿಯನ್ನು ಸಾರ್ವಜನಿಕರು ಪರಿಶೀಲಿಸಬೇಕು. ದುರುಪಯೋಗ ಕಂಡು ಬಂದಲ್ಲಿ ಸಂಬಂಧಿಸಿದ ಮೇಲಾಧಿ ಕಾರಿಗಳ ಗಮನಕ್ಕೆ ತರಬೇಕು ಎಂದರು.
ವಾರ್ಡ್ ಸದಸ್ಯೆ ಮಲ್ಲಿಕಾರ್ಜುನ ಕಟ್ಟಿಮನಿ, ಶರಣಪ್ಪ ತುರಕಾಣಿ, ಹನುಮಂತ ಕಟ್ಟೊನಿ, ಮಂಜುನಾಥ ಕಟ್ಟಿಮನಿ, ಧನರಾಜ್ ನಡುವಲಮನಿ, ಶಿವಪ್ಪ ಕಾಟಾಪೂರ, ಯಮನೂರ ಸಂಗಟಿ, ತಾಜುದ್ದೀನ ದಳಪತಿ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ