ಶೂನ್ಯ ಬಡ್ಡಿ ದರದಲ್ಲಿ 3ಲಕ್ಷ ರೂ.ಸಾಲ ರದ್ದತಿ ಸುತ್ತೋಲೆ ವಾಪಸ್ : ಮೊದಲಿನಂತೆ ಸಾಲ ವಿತರಣೆ
Team Udayavani, May 22, 2020, 3:44 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಗಂಗಾವತಿ: ಹಿಂದಿನ ಸರಕಾರ ಜಾರಿ ಮಾಡಿದ್ದ ಪಹಣಿ ಇರುವ ರೈತರು 3ಲಕ್ಷ ರೂ.ವರೆಗೆ ಶೂನ್ಯ ಬಡ್ಡಿದರದಲ್ಲಿ ಸಹಕಾರಿ ಸಂಸ್ಥೆ ಮತ್ತು ಬ್ಯಾಂಕುಗಳ ಮೂಲಕ ಸಾಲ ಪಡೆಯುವ ಯೋಜನೆಯನ್ನು ಬಿ.ಎಸ್.ವೈ ಸರಕಾರ ರದ್ದು ಮಾಡಿ ಹೊಸ ಸುತ್ತೋಲೆಯನ್ನು ಹೊರಡಿಸಿತ್ತು.
ಮೇ 14ರಂದು ಹೊರಡಿಸಲಾಗಿದ್ದ ಈ ಹೊಸ ಸುತ್ತೋಲೆಯ ಪ್ರಕಾರ ಒಂದು ಕುಟುಂಬಕ್ಕೆ ಮಾತ್ರ ಈ ಯೋಜನೆ ಅನ್ವಯಿಸುವಂತೆ ಸರಕಾರ ಆದೇಶ ಹೊರಡಿಸಿತ್ತು.
ರಾಜ್ಯ ಸರಕಾರದ ಈ ಹೊಸ ಸುತ್ತೊಲೆ ವಿರುದ್ದ ರಾಜ್ಯದ ರೈತರು, ಸಂಘಸಂಸ್ಥೆಗಳ ಮುಖಂಡರು ಮತ್ತು ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರು ವ್ಯಾಪಕ ಆಕ್ಷೇಪ ವ್ಯಕ್ತಪಡಿಸಿದ್ದರು. ಮಾತ್ರವಲ್ಲದೇ ಈ ಹೊಸ ಸುತ್ತೋಲೆ ಕುರಿತು ಉದಯವಾಣಿ ವೆಬ್ನಲ್ಲಿ ವ್ಯಾಪಕ ಪ್ರಚಾರವಾಗಿತ್ತು.
ಇದನ್ನು ಗಮನಿಸಿದ ಸರಕಾರ ಮೇ.21 ರಂದು ಜಾರಿ ಮಾಡಿದ್ದ ಸುತ್ತೋಲೆ ವಾಪಸ್ ಪಡೆದು ಭೂ ಪಹಣಿ ದಾಖಲೆ ಇರುವ ಎಲ್ಲಾ ರೈತರು ಶೂನ್ಯ ಬಡ್ಡಿದರದಲ್ಲಿ ಸಾಲ ಪಡೆಯುವ ಅರ್ಹತೆ ಪಡೆದಿರುವ ನಿಯಮದೊಂದಿಗೆ ಇತರೆ ಅರ್ಹತಾ ಮಾನದಂಡಗಳನ್ನು ಸೇರಿಸಿ ಹೊಸ ಸುತ್ತೋಲೆ ಪ್ರಕಟಿಸಿ ರೈತರಿಗೆ ಸಾಲ ನೀಡುವಂತೆ ಸೂಚನೆ ನೀಡಿದೆ.
ಅಭಿನಂದನೆ: ಸರಕಾರ ಹೊರಡಿಸಿದ್ದ ಕುಟುಂಬಕ್ಕೆ ಶೂನ್ಯ ಬಡ್ಡಿದರದಲ್ಲಿ ಸಾಲ ಸುತ್ತೋಲೆ ವಾಪಸ್ ಪಡೆದಿರುವುದು ಸ್ವಾಗತಾರ್ಹವಾಗಿದೆ. ಸರಕಾರದ ಸುತ್ತೋಲೆಯಿಂದ ರೈತರಿಗೆ ಅನ್ಯಾಯವಾಗುತ್ತಿತ್ತು. ಹೊಸ ಸುತ್ತೋಲೆಗೆ ವಿರೋಧ ವ್ಯಕ್ತವಾಗಿದ್ದರಿಂದ ಪ್ರತಿಯೊಬ್ಬ ರೈತ ಸಾಲ ಪಡೆಯಲು ಮೇ21 ರಂದು ನೂತನ ಸುತ್ತೋಲೆ ನೆರವಾಗಲಿದೆ ಎಂದು ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ದೊಡ್ಡಪ್ಪ ದೇಸಾಯಿ ಉದಯವಾಣಿಗೆ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ