ಶಿವರಾಜ ತಂಗಡಗಿ ಸಭ್ಯರೇ? ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಪ್ರಶ್ನೆ


Team Udayavani, Jan 18, 2024, 1:18 PM IST

7-kushtagi

ಕುಷ್ಟಗಿ: ಕೆನರಾ ಸಂಸದ ಅನಂತಕುಮಾರ್ ಹೆಗಡೆ ಅವರು ಏಕವಚನ ಹೇಳಿಕೆ ತಪ್ಪು, ಪ್ರತಿಕಾರವಾಗಿ ಸಚಿವ ಶಿವರಾಜ್ ತಂಗಡಗಿಯವರು ಮಾತನಾಡಿರುವುದು ಕೂಡ ತಪ್ಪು. ರಾಜಕಾರಣದಲ್ಲಿ ಏಕವಚನ ಪ್ರಯೋಗ ಪುನರಾವರ್ತಿತ ಆಗಬಾರದು ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ, ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.

ಕುಷ್ಟಗಿ ಪಟ್ಟಣದ ಗೌಡ್ರು ಓಣಿಯ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಈ ವಿಚಾರವಾಗಿ ನಿನ್ನೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಹ ಯಾರೇ ಮಾತನಾಡಿದರೂ ತಪ್ಪು ಎಂದಿದ್ದಾರೆ.

ಸಚಿವ ಶಿವರಾಜ ತಂಗಡಗಿ ಅವರೇನು ಸಭ್ಯರಲ್ಲ. ಅವರು   ಅನೇಕ ಬಾರಿ  ಬೇರೆ ಬೇರೆ ವಿಚಾರಗಳಲ್ಲಿ ನಾಲಿಗೆ ಹರಿ ಬಿಟ್ಟಿದ್ದಾರೆ. ಅವರೂ ಇನ್ಮುಂದೆ ಇದೇ ರೀತಿ ನಾಲಿಗೆಯನ್ನು ಹತೋಟಿಗೆ ಇಡದೇ ಇದ್ದಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಕೊಪ್ಪಳ ಜಿಲ್ಲಾ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ನವೀನ್ ಗುಳುಗಣ್ಣವರ ಈಗತಾನೆ ಅವರು ನೇಮಕವಾಗಿದ್ದಾರೆ. ಅವರ ಕಾರ್ಯಚೆಟುವಟಿಗೆ ಮುಂದೆ ಗೊತ್ತಾಗಲಿದೆ ಎಂದರು.

ಸಂಸದ ಸಂಗಣ್ಣ ಕರಡಿ ಅವರು ಕ್ಷೇತ್ರದಲ್ಲಿ ಉತ್ತಮವಾಗಿ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಅವರಿಗೆ ಮತ್ತೊಮ್ಮೆ ಲೋಕಸಭಾ ಟಿಕೇಟ್ ದೊರೆಯಬೇಕು ಎಂದು ಬಿಜೆಪಿ ಕಾರ್ಯಕರ್ತರ ಒತ್ತಾಯವಾಗಿದೆ. ಜೊತೆಗೆ ಟಿಕೇಟಿಗಾಗಿ ಪಕ್ಷದಲ್ಲಿ ಪೈಪೋಟಿ ನಡೆದಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಶಾಸಕ ದೊಡ್ಡನಗೌಡರು, ಲೋಕಸಭಾ ಟೀಕೇಟ್ ಯಾರಿಗೆ ನೀಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಎಲ್ಲಾ ಚುನಾವಣೆಯಲ್ಲಿ ಪೈಪೋಟಿ ಇರುವುದು ಸಹಜ ತಮಗೂ ಪೈಪೋಟಿ ಇದ್ದಾಗ ಸಂಸದ ಸಂಗಣ್ಣ ಕರಡಿ ಅವರು ನನ್ನ ಜೊತೆಗಿದ್ದರು ಎಂದು ಹೇಳಿದರು.

ಶ್ರೀ ರಾಮ ಮಂದಿರ ಅಸಂಖ್ಯಾ ಭಾರತೀಯರ ಕನಸು ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಅನೇಕ ಜನರು ತಮ್ಮ ಪ್ರಾಣಾರ್ಪಣೆ ಮಾಡಿದ್ದಾರೆ. ಅನೇಕ ಜನ ಕರಸೇವಕರು ಮನೆಮಠಗಳನ್ನು ತ್ಯಜಿಸಿರುವುದನ್ನು ಕಂಡಿದ್ದೇವೆ. ಅವರೆಲ್ಲರ ಕನಸು ಈಡೇರಿದೆ. ಪಕ್ಷದ ಹಿರಿಯ ನೇತಾರ ಉಪ ಪ್ರಧಾನಿ ಲಾಲಕೃಷ್ಣ ಅಡ್ವಾಣಿ ಅವರ ಹೇಳಿಕೆಯಂತೆ ರಾಮಭಕ್ತ ನರೇಂದ್ರ ಮೋದಿ ಅವರನ್ನೇ ಶ್ರೀರಾಮ ಕರೆಯಿಸಿದ್ದಾನೆ ಮೋದಿ ಅವರ ಪ್ರಯತ್ನದ ಫಲವಾಗಿ ಭವ್ಯ ರಾಮ ಮಂದಿರ ನಿರ್ಮಾಣವಾಗಿದೆ. ಅನೇಕ ಜನ ಭಾರತೀಯರ ಕನಸು ಜ.22 ರಂದು ಈಡೇರುತ್ತಿದೆ ಎಂದು ಹೇಳಿದರು.

ಈ ವೇಳೆ ಜಿ.ಪಂ.ಮಾಜಿ ಸದಸ್ಯ ಕೆ.ಮಹೇಶ, ಪುರಸಭೆ ಸದಸ್ಯರಾದ ಬಸವರಾಜ ಬುಡಕುಂಟಿ, ಜಯತೀರ್ಥ ಆಚಾರ್ಯ, ಮುಖಂಡರಾದ ವಿಜಯಕುಮಾರ ಹಿರೇಮಠ, ವೀರಣ್ಣ ಸೊಬರದ, ಮಲ್ಲಿಕಾರ್ಜುನ ಮಸೂತಿ, ಶಶಿಧರ ಕವಲಿ, ಕಾರ್ಯದರ್ಶಿ ಚಂದ್ರಕಾಂತ ವಡಿಗೇರಿ, ಯುವಮೋರ್ಚಾ ಅಧ್ಯಕ್ಷ ಉಮೇಶ ಯಾದವ ಸೇರಿದಂತೆ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.