ಹಾಸ್ಟೆಲ್‌ನಲ್ಲಿ ಗುಳೆ ಹೋದವರ ವಾಸ್ತವ್ಯ


Team Udayavani, Mar 30, 2020, 6:12 PM IST

ಹಾಸ್ಟೆಲ್‌ನಲ್ಲಿ ಗುಳೆ ಹೋದವರ ವಾಸ್ತವ್ಯ

ಸಾಂದರ್ಭಿಕ ಚಿತ್ರ

ಕೊಪ್ಪಳ: ದುಡಿಮೆ ಅರಸಿ ಗುಳೆ ಹೋಗಿರುವ ಜನರು, ವಲಸಿಗರು, ಭಿಕ್ಷುಕರು, ನಿರ್ಗತಿಕರ ಬಗ್ಗೆ ಕಾಳಜಿ ವಹಿಸಿದ ಜಿಲ್ಲಾಡಳಿತ ಅವರಿಗೆ ಊಟ, ಉಪಚಾರ, ಶೌಚಾಲಯ ಸೇರಿ ಅಗತ್ಯ ಸೌಲಭ್ಯಕ್ಕಾಗಿ ಜಿಲ್ಲೆಯಲ್ಲಿನ ವಿವಿಧ ವಸತಿ ನಿಲಯಗಳಲ್ಲಿ ವಾಸ್ತವ್ಯಕ್ಕೆ ಅನುವು ಮಾಡಿಕೊಟ್ಟಿರುವುದಲ್ಲದೇ, ಅಧಿಕಾರಿಗಳನ್ನು ಉಸ್ತುವಾರಿಯಾಗಿ ನೇಮಕ ಮಾಡಿದೆ.

ಹೌದು. ಜಿಲ್ಲೆ ಮೊದಲೇ ಹಿಂದುಳಿದ ಪ್ರದೇಶ. ಇಲ್ಲಿನ ಜನ ದೂರದ ಊರುಗಳಿಗೆ ಗುಳೆ ಹೋಗಿ ಪುನಃ ಊರಿಗೆ ವಾಪಾಸ್ಸಾಗುತ್ತಿದ್ದಾರೆ. ಅವರನ್ನು ಊರಿಗೆ ಕಳುಹಿಸುವ ಬದಲಾಗಿ, ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿನ ವಸತಿ ನಿಲಯಗಳಲ್ಲೇ ತಂಗುವ ವ್ಯವಸ್ಥೆ ಮಾಡಲು ಜಿಲ್ಲಾಡಳಿತ ಸಕಲ ವ್ಯವಸ್ಥೆ ಮಾಡಿದೆ.

ಇನ್ನೂ ಜಿಲ್ಲೆಯಲ್ಲಿ ಹಲವು ಬೃಹತ್‌, ಮಧ್ಯಮ ಹಾಗೂ ಸಣ್ಣ ಕೈಗಾರಿಕೆಗಳಿವೆ. ಆ ಕೈಗಾರಿಕೆಗಳಲ್ಲಿ ಸಾವಿರಾರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಆದರೆ ದೇಶವೇ ಲಾಕ್‌ಡೌನ್‌ ಆಗಿದ್ದರಿಂದ ಅನ್ಯ ರಾಜ್ಯದ ಲಾರಿ ಚಾಲಕರು, ಕ್ಲೀನರ್‌ಗಳು, ಕೂಲಿಕಾರ್ಮಿಕರು, ಅನ್ಯ ರಾಜ್ಯಗಳಿಂದ ಬಂದಿರುವ ಕಾರ್ಮಿಕ ವರ್ಗಕ್ಕೆ ಹಾಗೂ ಭಿಕ್ಷುಕ, ನಿರ್ಗತಿಕರು ಅಲೆದಾಡುವುದನ್ನು ತಪ್ಪಿಸಲು ಜಿಲ್ಲಾಡಳಿತ ವಸತಿ ನಿಲಯಗಳಲ್ಲಿ ತಂಗಲು ವ್ಯವಸ್ಥೆ ಮಾಡಿದೆ.

9 ವಸತಿ ನಿಲಯದಲ್ಲಿ ವ್ಯವಸ್ಥೆ: ಕೊಪ್ಪಳದಲ್ಲಿನ ಬಾಲಕರ ವಸತಿ ನಿಲಯ, ಟಣಕನಕಲ್‌ನ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ನಿಲಯ, ಕೊಪ್ಪಳದ ಎಸ್‌ಸಿ ಬಾಲಕರ ವಸತಿ ನಿಲಯ, ಗಂಗಾವತಿಯ ಅಲ್ಪಸಂಖ್ಯಾತರ ವಸತಿ ನಿಲಯ, ಕನಕಗಿರಿಯ ಹಿಂದೂಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಬಾಲಕಿಯರ ವಸತಿ ನಿಲಯ, ಕುಷ್ಟಗಿಯ ಎಸ್‌ಸಿ ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯ, ಕಾರಟಗಿಯ ಸರ್ಕಾರಿ ಬಾಲಕರ ವಸತಿ ನಿಲಯ, ಕುಕನೂರಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ನಿಲಯ, ಯಲಬುರ್ಗಾದ ಎಸ್‌ಸಿ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ವಲಸೆ ಕಾರ್ಮಿಕರು,ವಸತಿಹೀನರು, ನಿರ್ಗತಿಕರು ಹಾಗೂ ಇತರೆ ವರ್ಗದ ಜನರಿಗೆ ಪುನರ್‌ವಸತಿ ಕಲ್ಪಿಸಲು ವ್ಯವಸ್ಥೆ ಮಾಡಿದೆ.

ಅಧಿಕಾರಿಗಳ ನಿಯೋಜನೆ: ಪ್ರತಿ ವಸತಿ ನಿಲಯದಲ್ಲೂ 100ರಿಂದ 250 ಜನರ ವಾಸ್ತವ್ಯಕ್ಕೆ ವ್ಯವಸ್ಥೆಯಿದ್ದು, ಊಟೋಪಚಾರ, ನೀರು, ಶೌಚಾಲಯ, ವೈದ್ಯಕೀಯ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತ ಮುಂದಾಗಿದೆ. ಅಲ್ಲದೇ ಪ್ರತಿ ವಸತಿ ನಿಲಯಕ್ಕೂ ಓರ್ವ ನೋಡಲ್‌ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಿದೆ. ಇವರ ಮೇಲ ಓರ್ವ ಜಿಲ್ಲಾಮಟ್ಟದ ಅಧಿಕಾರಿಯನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಒಟ್ಟು ಮೂವರು ಉಸ್ತುವಾರಿಗಳು 9 ವಸತಿ ನಿಲಯದ ಜವಾಬ್ದಾರಿ ನೋಡಿಕೊಳ್ಳಬೇಕಿದೆ. ಅವರ ಆರೋಗ್ಯ ತಪಾಸಣೆ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ.

ಸ್ವಯಂ ಸೇವಕರಾಗಲು ನೋಂದಾಯಿಸಿ: ಕೂಲಿ ಕಾರ್ಮಿಕರು, ನಿರ್ಗತಿಕರು, ಭಿಕ್ಷುಕರು ಸೇರಿ ನಿರಾಶ್ರಿತರಿಗೆ ನೆರವಾಗಬೇಕಿದೆ. ಅವರಿಗೆ ಅಗತ್ಯ ದಿನಸಿ ಸಾಮಗ್ರಿ ಪೂರೈಕೆ ಮಾಡಬೇಕಿದೆ. ಇವೆಲ್ಲವುಗಳನ್ನು ಜನರಿಗೆ ತಲುಪಿಸುವುದು ಅಗತ್ಯವಾಗಿದ್ದು, ಹಾಗಾಗಿ ಸ್ವಯಂ ಸೇವಕರು ಬೇಕಾಗುತ್ತದೆ. ಸಂಘ-ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ಸೇರಿ ಸ್ವಯಂ ಸೇವಕರು ಸರ್ಕಾರಿ ಕೊಪ್ಪಳ ವೆಬ್‌ಸೈಟ್‌ನಲ್ಲಿ ರವಿವಾರದಿಂದ ಪ್ರಚುರ ಪ್ರಡಿಸಲಾಗುತ್ತಿದ್ದು, ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸುನೀಲ್‌ ಕುಮಾರ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.