ವ್ಯಾಪಿಸಿದೆ ನಕಲಿ ಬೀಜ ತಯಾರಿಕೆ ಜಾಲ

ನೋಟಿಸ್‌ಗೆ ಸೀಮಿತವಾದ ಕೃಷಿ ಇಲಾಖೆ! ­ರೈತರು ಬೆಳೆದ ಭತ್ತ ಖರೀದಿಸಿ ಚೀಲದಲ್ಲಿ ಹಾಕಿ ಮಾರಾಟ

Team Udayavani, Jun 23, 2021, 8:35 PM IST

22-gvt-01

ವರದಿ: ಕೆ. ನಿಂಗಜ್ಜ

ಗಂಗಾವತಿ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ನಾಲ್ಕೈದು ದಶಕಗಳಿಂದ ಭತ್ತದ ಬೆಳೆಯನ್ನು ಹೆಚ್ಚು ಬೆಳೆಯುವುದರಿಂದ ನಕಲಿ ಭತ್ತದ ಬೀಜ, ರಸಗೊಬ್ಬರ, ಕ್ರಿಮಿನಾಶಕ ತಯಾರಕರ ಸಂಖ್ಯೆ ಹೆಚ್ಚಾಗಿದೆ.

ರೈತರು ಬೆಳೆದ ಭತ್ತವನ್ನೇ ಬೀಜ ತಯಾರಿಕಾ ಘಟಕಕ್ಕೆ ಖರೀದಿಸಿ, ಬ್ರಾಂಡ್‌ ಚೀಲದಲ್ಲಿ ತುಂಬಿ ಅನಧಿಕೃತವಾಗಿ ಮಾರಾಟ ಮಾಡುವ ಜಾಲ ತಾಲೂಕಿನಲ್ಲಿದೆ. ಇದು ಕೃಷಿ ಇಲಾಖೆಯ ಜಾಗೃತದಳದ ಅಧಿಕಾರಿಗಳಿಗೆ ಗೊತ್ತಿದೆ. ಆದರೂ ಆಗಾಗ ಬೀಜ ತಯಾರಿಕಾ ಘಟಕದವರಿಗೆ ನ್ಯೂನ್ಯತೆಗಳ ಕುರಿತು ನೋಟಿಸ್‌ ನೀಡಿ ಕೈ ತೊಳೆದುಕೊಳ್ಳುತ್ತಿರುವುದು ಕಂಡು ಬರುತ್ತಿದೆ.

ಕೃಷಿ ಇಲಾಖೆ ಮಾಹಿತಿ ಪ್ರಕಾರ ಗಂಗಾವತಿ ತಾಲೂಕಿನ ಕೆಲ ಗ್ರಾಮಗಳಲ್ಲಿರುವ ಖಾಸಗಿ ಭತ್ತದ ಬೀಜ ತಯಾರಿಕಾ ಘಟಕಗಳು ಪ್ರತಿ ಹಂಗಾಮಿನಲ್ಲಿ 5000 ಕ್ವಿಂಟಲ್‌ ಭತ್ತದ ಬೀಜ ಮಾರಾಟ ಮಾಡುತ್ತವೆ. ಕೊಪ್ಪಳ, ರಾಯಚೂರು, ಬಳ್ಳಾರಿ, ಯಾದಗಿರಿ, ಕಲಬುರ್ಗಿ, ದಾವಣಗೆರೆ ಜಿಲ್ಲೆಗಳು ಸೇರಿ ಪಕ್ಕದ ಆಂಧ್ರಪ್ರದೇಶ, ತೆಲಂಗಾಣದ ಕೆಲ ಭಾಗಕ್ಕೆ ಮಾರಾಟ ಆಗುತ್ತವೆ. ಇಲ್ಲಿ ಕೃಷಿ ವಿವಿ ಹಾಗೂ ಕೃಷಿ ಸಂಶೋಧನಾ ಕೇಂದ್ರದ ವಿಜ್ಞಾನಿಗಳ ಸಮ್ಮುಖದಲ್ಲಿ ಬೀಜ ತಯಾರಾಗುತ್ತಿಲ್ಲ. ಸ್ಥಳೀಯವಾಗಿ ರೈತರು ಬೆಳೆದ ಭತ್ತವನ್ನು ಖರೀದಿಸಿ, ಸ್ವತ್ಛಗೊಳಿಸಿ ಚೀಲದಲ್ಲಿ ತುಂಬಿ ನೇರವಾಗಿ ರೈತರಿಗೆ ಮಾರಾಟ ಮಾಡಲಾಗುತ್ತಿದೆ.

ಸರಕಾರಿ ಅಥವಾ ಖಾಸಗಿಯಾಗಿ ಭತ್ತದ ಬೀಜೋತ್ಪಾದನೆ ಮಾಡುವ ಸಂದರ್ಭದಲ್ಲಿ ಸರಕಾರ ಹಲವು ನಿಯಮಗಳನ್ನು ರೂಪಿಸಿದೆ. ಮೊದಲೇ ಬೀಜ ಮಾಡುವ ಭತ್ತದ ಗದ್ದೆಯ ಮಣ್ಣಿನ ಫಲವತ್ತತೆ ಗುರುತಿಸಬೇಕು. ಭತ್ತದ ಬೀಜ ಬೆಳೆಸುವ ರೈತರ ಹೆಸರು, ಪಹಣಿ ಸಂಖ್ಯೆಯನ್ನು ಮುಂಚಿತವಾಗಿ ಕೃಷಿ ಇಲಾಖೆಗೆ ರವಾನಿಸಬೇಕು. ಬೀಜ ಖರೀದಿಸುವ ರೈತರ ಹೆಸರು, ಅವರು ಭತ್ತವನ್ನು ಬೆಳೆದ ರೀತಿ, ಇಳುವರಿ ಕುರಿತು ಬೀಜೋತ್ಪಾದನಾ ಕೇಂದ್ರದವರು ಕೃಷಿ ಇಲಾಖೆ ಗಮನಕ್ಕೆ ತರಬೇಕು. ಬೀಜ ಖರೀದಿಸಿದ ರೈತರ ಗದ್ದೆಯಲ್ಲಿ ಕ್ಷೇತ್ರೋತ್ಸವ ಸೇರಿ ಬೀಜದ ಗುಣಮಟ್ಟ ಇಳುವರಿ ಕುರಿತು ಖಚಿತತೆಯನ್ನು ಕೃಷಿ ಇಲಾಖೆಯಲ್ಲಿ ದಾಖಲಿಸಬೇಕು. ಹೀಗೆ ಭತ್ತದ ಬೀಜ ತಯಾರಿಸುವ ಘಟಕಗಳು ಹಲವು ನಿಯಮ ಪಾಲಿಸಬೇಕು.

ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವನ್ನು ಬೀಜ ತಯಾರಿಕಾ ಘಟಕದವರು ಬಳಸಿಕೊಂಡು ಗುಣಮಟ್ಟವಲ್ಲದ ಭತ್ತದ ಬೀಜ ಮಾರಾಟ ಮಾಡುತ್ತಿದ್ದಾರೆ. ಕಳೆದ ವರ್ಷ ಸಾಣಾಪುರ, ಸಂಗಾಪುರ, ಢಣಾಪುರ, ರಾಂಪುರ ಸೇರಿ ತಾಲೂಕಿನ ವಿವಿಧೆಡೆ ನಕಲಿ ಭತ್ತದ ಬೀಜ ಸಸಿ ಮಡಿ ಹಾಕಿದ್ದರಿಂದ ಸಸಿ ಸರಿಯಾಗಿ ಬೆಳೆದಿಲ್ಲ. ಆದ್ದರಿಂದ ರೈತರು ಹೊಸದಾಗಿ ಭತ್ತದ ಸಸಿಮಡಿ ಹಾಕಿ ನಾಟಿ ಮಾಡಬೇಕಾಗಿದೆ. ರೈತರು ಸಹ ಕೃಷಿ ಇಲಾಖೆ, ಕೃಷಿ ವಿವಿ, ಕೃಷಿ ಸಂಶೋಧನಾ ಕೇಂದ್ರದವರು ಶಿಫಾರಸ್ಸು ಮಾಡಿದ ಬೀಜ ಖರೀದಿಸಬೇಕು. ತಪ್ಪದೇ ರಸೀದಿ ಪಡೆಯಬೇಕು.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.