ಸರ್ವಾಧಿಕಾರಿಗಳ ವಿರುದ್ಧ ವಿದ್ಯಾರ್ಥಿ ಹೋರಾಟ ನಿರಂತರ
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಮಾವೇಶಕ್ಕೆ ಚಾಲನೆ ರ್ಯಾಲಿಯಲ್ಲಿ ಪ್ಲೇ ಕಾರ್ಡ್ ತೋರಿಸದಂತೆ ಪೊಲೀಸರ ಆಕ್ಷೇಪ
Team Udayavani, Jul 26, 2022, 5:51 PM IST
ಗಂಗಾವತಿ: ವಿಶ್ವದ ಇತಿಹಾಸ ಗಮನಿಸಿದರೆ ಸರ್ವಾಧಿಕಾರಿಗಳ ಧೋರಣೆಗಳ ವಿರುದ್ಧ ಮುಂಚೂಣಿಯಲ್ಲಿ ನಿಂತು ವಿದ್ಯಾರ್ಥಿಗಳ ಸಂಘಟನೆಗಳೇ ಹೋರಾಟ ನಡೆಸಿ ನಿರಂಕುಶ ಪ್ರಭುತ್ವಗಳನ್ನು ಕೊನೆಗಾಣಿಸಿವೆ. ಭಾರತದಲ್ಲಿ ಪ್ರಸ್ತುತ ಜನ ವಿರೋಧಿ ಪ್ಯಾಸಿಸ್ಟ್ ಸರಕಾರದ ವಿರುದ್ಧ ವಿದ್ಯಾರ್ಥಿಗಳು ಮತ್ತು ಯುವ ಸಮೂಹ ಹೋರಾಟ ನಡೆಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ರಾಜ್ಯಾಧ್ಯಕ್ಷ ಹತಾವುಲ್ಲಾ ಪುಂಜಲ್ ಕಟ್ಟೆ ಹೇಳಿದರು.
ಅವರು ಕರ್ನೂಲ್ ಬಾಬಾ ದರ್ಗಾ ಆವರಣದಲ್ಲಿ ಆಯೋಜಿಸಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಸದಸ್ಯತ್ವ ಅಭಿಯಾನ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು.
ನಮ್ಮ ದೇಶದ ಇತಿಹಾಸ ಗಮನಿಸಿದರೆ ಪ್ರಭುತ್ವದ ದಮನಕಾರಿ ನೀತಿಗಳ ವಿರುದ್ಧವೂ ವಿದ್ಯಾರ್ಥಿ ಮತ್ತು ಯುವ ಸಮೂಹ ಹೋರಾಟ ನಡೆಸಿ ಯಶಸ್ವಿಯಾಗಿದೆ. 2014ರಿಂದ ಸಂವಿಧಾನ ಆಶಯಗಳಿಗೆ ಮಾರಕವಾಗುವಂತಹ ಆಡಳಿತ ಜಾರಿಯಲ್ಲಿದೆ. ಪ್ರಜಾಪ್ರಭುತ್ವ ಸಂವಿಧಾನ ಬದ್ಧವಾಗಿ ಜನಪರ ಹೋರಾಟ ನಡೆಸುವವರನ್ನು ಜೈಲಿನಲ್ಲಿರಿಸಲಾಗಿದೆ. ಸಂವಿಧಾನದ ಆಶಯಗಳನ್ನು ಉಳಿಸಲು ದೇಶದ ಸಮಗ್ರತೆ ಉಳಿವಿಗಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದೇಶಾದ್ಯಂತ ವಿದ್ಯಾರ್ಥಿ ಸಂಘಟನೆಯ ಮೂಲಕ ಕಾರ್ಯ ಮಾಡಲಾಗುತ್ತಿದೆ ಎಂದರು.
ರಾಜ್ಯ ಮುಖಂಡ ಸಫìರಾಜ್ ಮಾತನಾಡಿ, ದೇಶದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಶೈಕ್ಷಣಿಕವಾಗಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಇತ್ತೀಚೆಗೆ ಪಿಎಸ್ಐ ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಬರೀ ಅಧಿಕಾರಿಗಳು ಬಂಧನವಾಗಿದ್ದು ಇದರಲ್ಲಿ ಪಾಲ್ಗೊಂಡಿರುವ ಜನಪ್ರತಿನಿಧಿ ಗಳನ್ನು ಬಂಧಿಸಬೇಕು. ಎಲ್ಲ ಸಮಸ್ಯೆಗಳ ಕುರಿತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆ ವಿದ್ಯಾರ್ಥಿಗಳನ್ನು ಸಂಘಟಿಸುವ ಕಾರ್ಯ ಮಾಡುತ್ತಿದೆ ಎಂದರು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ರಾಜ್ಯ ಮುಖಂಡರಾದ ಅನೀಸ್ ಕುಂಬ್ರಾ, ಚಾಂದ ಸಲ್ಮಾನ್, ನಾಸೀರಾ, ಅತೀಕುರ್ ರಹೆಮಾನ್ ಸೇರಿ ಅನೇಕರಿದ್ದರು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ 2022-23ರ ಸದಸ್ಯತ್ವ ಅಭಿಯಾನದ ನಿಮಿತ್ತ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ರ್ಯಾಲಿ ನಡೆಸುವ ಸಂದರ್ಭದಲ್ಲಿ ಕೇಂದ್ರ-ರಾಜ್ಯ ಸರಕಾರಗಳ ವಿರುದ್ಧ ಭ್ರಷ್ಟಾಚಾರ ನಡೆದಿರುವುದು, ಪಿಎಸ್ಐ ಹಗರಣ ಮತ್ತು ಸಂವಿಧಾನ ಪ್ರಜಾಪ್ರಭುತ್ವ ಉಳಿಸಿ ಎಂದು ಬರೆಯಲಾಗಿದ್ದ ಪ್ಲೇ ಕಾರ್ಡ್ ಪ್ರದರ್ಶನಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿದಾಗ ಸಂಘಟಕರು ಮತ್ತು ಪಿಐ ಟಿ. ವೆಂಕಟಸ್ವಾಮಿ ಮಧ್ಯೆ ವಾಗ್ವಾದ ಜರುಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ