Protest: ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದ ಬಸ್ಸು, ನಿಡಶೇಸಿಯಲ್ಲಿ ಬಸ್ ತಡೆದು ಪ್ರತಿಭಟನೆ
Team Udayavani, Sep 14, 2023, 1:33 PM IST
ಕುಷ್ಟಗಿ: ಕುಷ್ಟಗಿ- ಹನುಮಸಾಗರಕ್ಕೆ ಸಂಚರಿಸುವ ಬಸ್ಸುಗಳು, ನಿಡಶೇಸಿಗೆ ನಿಲ್ಲಿಸದೇ ಸಂಚರಿಸುವ ಧೋರಣೆ ವಿರೋಧಿಸಿ, ನಿಡಶೇಸಿ ಶಾಲಾ ವಿದ್ಯಾರ್ಥಿಗಳು ಗ್ರಾಮಸ್ಥರೊಂದಿಗೆ ಬಸ್ಸುಗಳಿಗೆ ಘೇರಾವ್ ಹಾಕಿ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಗುರುವಾರ ನಡೆದಿದೆ.
ನಿಡಶೇಸಿ ಗ್ರಾಮದ60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸರ್ಕಾರಿ ಪ್ರೌಢಶಾಲೆ ತಳವಗೇರಾ ಹಾಗೂ ಆದರ್ಶ ವಿದ್ಯಾಲಯಕ್ಕೆ ಹೋಗುತ್ತಿದ್ದಾರೆ. ಕುಷ್ಟಗಿಯಿಂದ ತಳವಗೇರಾ ಆದರ್ಶ ವಿದ್ಯಾಲಯಕ್ಕೆ ಹೋಗುವ ಎರಡು ಬಸ್ಸುಗಳು ಭರ್ತಿಯಾಗುತ್ತಿರುವುದರಿಂದ ನಿಡಶೇಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಒಂಟಿ ಕಾಲಿನಲ್ಲಿ ನಿಲ್ಲುವಷ್ಟು ಜಾಗ ಇರುವುದಿಲ್ಲ.
ಆದಾಗ್ಯೂ ವಿದ್ಯಾರ್ಥಿಗಳು ಜೀವ ಭಯ ಇಲ್ಲದೇ ಜೋತು ಬಿದ್ದು ಸಂಚರಿಸುತ್ತಿದ್ದಾರೆ. ಬಸ್ಸಿನ ಸಮಸ್ಯೆಯ ಬಗ್ಗೆ ಹಲವು ಬಾರಿ ಪ್ರತಿಭಟನೆ ನಡೆಸಿದರೂ ಘಟಕ ವ್ಯವಸ್ಥಾಪಕ ಜಡೇಶ ಅವರು ಕ್ರಮವಹಿಸದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತೆ ಬಸ್ ತಡೆದು ಪ್ರತಿಭಟನೆ ನಡೆಸಿದರು.ರಸ್ತೆಯಲ್ಲಿ ಕುಳಿತು ಘಟಕ ವ್ಯವಸ್ಥಾಪಕರ ವಿರುದ್ದ ಘೋಷಣೆ ಕೂಗಿದರು.
ಈ ವೇಳೆ ಬಸ್ ಚಾಲಕ, ನಿರ್ವಾಹಕರೊಂದಿಗೆ ವಾಗ್ವದಕ್ಕೆ ಇಳಿದರು. ಘಟಕ ವ್ಯವಸ್ಥಾಪಕ ಜಡೇಶ ಅವರು ಆಗಮಿಸಿ ಬಸ್ಸಿನ ತೊಂದರೆ ಇತ್ಯರ್ಥಗೊಳಿಸುವರೆಗೂ ಕದಲುವುದಿಲ್ಲ ಎಂದು ಬಿಗಿಪಟ್ಟು ಮುಂದುವರೆಸಿದರು.
ಅಮವಾಸೆ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸದರಿ ಬಸ್ಸುಗಳಲ್ಲಿ ಹೊರಟಿದ್ದ ಮಹಿಳಾ ಪ್ರಯಾಣಿಕರು ಪ್ರತಿಭಟನೆ ಬಿಸಿ ಅನುಭವಿಸಿದರು.
ನಿಡಶೇಸಿ ಮೂಲಕ ತಳವಗೇರಾಕ್ಕೆ ಸಂಚರಿಸುವ ಹನುಮಸಾಗರ ಮಾರ್ಗದ ಬಸ್ಸುಗಳು ನಿಡಶೇಸಿ ವಿದ್ಯಾರ್ಥಿಗಳಿಗೆ ಅನಕೂಲ ಆಗಿಲ್ಲ. ಈ ಬಗ್ಗೆ ಶಾಸಕ ದೊಡ್ಡನಗೌಡ ಪಾಟೀಲ, ಘಟಕ ವ್ಯವಸ್ಥಾಪಕ ಜಡೇಶ ಅವರ ಗಮನಕ್ಕೆ ತಂದರೂ ಹೆಚ್ಚುವರಿ ಬಸ್ಸು ಓಡಿಸಲು ಕ್ರಮ ಕೈಗೊಂಡಿಲ್ಲ.
ಶಕ್ತಿ ಯೋಜನೆ ಆರಂಭವಾದಾಗಿನಿಂದ ತಳವಗೇರಾಕ್ಕೆ ಹೋಗುವ ವಿದ್ಯಾರ್ಥಿಗಳು ನಿತ್ಯ ತೊಂದರೆ ತಪ್ಪದಂತಾಗಿದ್ದು ಪ್ರತಿದಿನ ಶಾಲಾ ತರಗತಿಗಳಿಂದ ವಂಚಿತರಾಗುತ್ತಿದ್ದಾರೆ.
ಇದನ್ನೂ ಓದಿ: Asia Cup 2023; ಮತ್ತೆ ಟೀಂ ಇಂಡಿಯಾದ ಜೊತೆ ಅಭ್ಯಾಸದಲ್ಲಿ ಕಾಣಿಸಿಕೊಂಡ ಶ್ರೇಯಸ್ ಅಯ್ಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!