ಕಾಮಗಾರಿ-ಏಜೆನ್ಸಿ ಬದಲಿಸಬೇಕಾದರೆ ವರದಿ ಸಲ್ಲಿಸಿ


Team Udayavani, Jul 24, 2019, 12:39 PM IST

kopala-tdy-3

ಕೊಪ್ಪಳ: ನಗರದ ಜಿಪಂ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ್‌ ಮಾತನಾಡಿದರು.

ಕೊಪ್ಪಳ: ಹೈದರಾಬಾದ್‌ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಈಗಾಗಲೇ ನಿಗದಿಪಡಿಸಿದ ಕಾಮಗಾರಿ ಅಥವಾ ಏಜೆನ್ಸಿಯನ್ನು ಬದಲಿಸಬೇಕಿದ್ದರೆ ಈ ಕುರಿತು ವರದಿ ಸಲ್ಲಿಸಬೇಕು ಎಂದು ಪ್ರಾದೇಶಿಕ ಆಯುಕ್ತ ಸುಬೋಧ್‌ ಯಾದವ್‌ ಅನುಷ್ಠಾನ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಪಂ ಸಭಾಂಗಣದಲ್ಲಿ ಹೈಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಬಿಡುಗಡೆಯಾದ ಹಣ ಬಳಕೆ ಪ್ರಮಾಣ ಪತ್ರ ಕುರಿತ ಅನುಷ್ಠಾನ ಅಧಿಕಾರಿಗಳೊಂದಿಗಿನ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬದಲಾವಣೆ ಕಾಮಗಾರಿಯಲ್ಲಿ ಹಂಚಿಕೆಯಾದ ಜಾಗದ ಬದಲಾವಣೆಯೂ ಒಳಗೊಂಡಿದ್ದು, ಯಾವುದೇ ಬದಲಾವಣೆ ಇದ್ದರೆ ಅದಕ್ಕೆ ತಕ್ಕ ಪ್ರಸ್ತಾವನೆಯನ್ನು ಆ. 15ರೊಳಗೆ ಸಲ್ಲಿಸಿ ಮತ್ತು ಸೆ. 1ರಿಂದ ಕಡ್ಡಾಯವಾಗಿ ಕಾಮಗಾರಿ ಆರಂಭಿಸಬೇಕು. ಅಲ್ಪಾವಧಿ ಅಥವಾ ದೀರ್ಘಾವಧಿ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಸ್ತಾವನೆ ಸಲ್ಲಿಸುವಾಗ ಸರಿಯಾದ ಮೊತ್ತ ನಮೂದಿಸಿ ನಿಗದಿತ ಕಾಲಮಿತಿಯೊಳಗೆ ಅನುದಾನ ಬಳಕೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು. ಆರ್ಥಿಕ ಹಾಗೂ ಭೌತಿಕ ಸಾಧನೆ ಸಮನಾಗಿರುವಂತೆ ಸರಿಯಾದ ದತ್ತಾಂಶಗಳನ್ನು ಒಳಗೊಂಡ ವರದಿ ಸಲ್ಲಿಸಬೇಕು ಎಂದರು.

ಹೈಕ ಮಂಡಳಿಯಿಂದ 2013-14ರಿಂದ 2018-19ರವರೆಗೆ ಅಭಿವೃದ್ಧಿ ಕಾಮಗಾರಿಗಳಿಗೆ ವಿವಿಧ ಹಂತದಲ್ಲಿ ಏಜೆನ್ಸಿ ನೇಮಿಸಿ ಅನುಷ್ಠಾನ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅದರಂತೆ 2013-14ನೇ ಸಾಲಿನಿಂದ 2018-19ರವರೆಗೆ ಸಾಮಾನ್ಯ, ಎಸ್‌ಸಿಪಿ, ಟಿಎಸ್‌ಪಿ ವಿಭಾಗದಲ್ಲಿ ನಿರ್ದಿಷ್ಟ ಕಾಮಗಾರಿಗಳಿಗೆ ನಿರ್ದಿಷ್ಟ ಮೊತ್ತವನ್ನು ಸಹ ಬಿಡುಗಡೆ ಮಾಡಲಾಗಿದೆ. ಆದರೆ ಬಿಡುಗಡೆ ಆದ ಹಣವನ್ನು ಅನುಷ್ಠಾನ ಏಜೆನ್ಸಿಗಳು ಸಮರ್ಪಕವಾಗಿ ಬಳಕೆ ಮಾಡಿಲ್ಲ. ಅಭಿವೃದ್ಧಿ ಕಾಮಗಾರಿಗಳೂ ಅನುಷ್ಠಾನಗೊಂಡಿಲ್ಲ. ಇದಕ್ಕೆ ಸಂಬಂಧಿಸಿದ ಏಜೆನ್ಸಿಗಳ ಅನುಷ್ಠಾನ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಮಗಾರಿಗೆ ಅನುಮತಿ ಸಿಕ್ಕ ನಂತರ ನಿಗದಿ ಪಡಿಸಿದ ಕಾಲಮಿತಿಯೊಳಗೆ ಟೆಂಡರ್‌ ಪ್ರಕ್ರಿಯೆ ಸೇರಿದಂತೆ ಕಾಮಗಾರಿಯ ಎಲ್ಲ ಹಂತಗಳು ಪೂರ್ಣಗೊಳ್ಳಬೇಕು. 2019-20ನೇ ಸಾಲಿನ ಅಭಿವೃದ್ಧಿ ಕಾಮಗಾರಿಗಳಿಗೆ ಸಿದ್ಧಪಡಿಸಿದ ಕ್ರಿಯಾಯೋಜನೆಗೆ ವೇಳಾಪಟ್ಟಿ ಅನುಸಾರ ಕಾಮಗಾರಿ ಆರಂಭಿಸಬೇಕು. 2018-19ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯು ಉತ್ತಮ ಸಾಧನೆ ಮಾಡಿದೆಯಾದರೂ ಈ ಹಿಂದಿನ ಅವಧಿಯ ಕಾಮಗಾರಿಗಳು ಕೆಲವೆಡೆ ಇನ್ನೂ ಆರಂಭವಾಗಿಲ್ಲ. ಆರಂಭವಾದ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ಕೆಲಸಗಳು ಬಾಕಿಯಿವೆ. ಅವುಗಳನ್ನು ಮುತುವರ್ಜಿ ವಹಿಸಿ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಎಂದರು.

ಕೆಲ ತಾಲೂಕಿನಲ್ಲಿ ಗ್ರಾಮಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ನೀಡಿದ ವರದಿಯಲ್ಲಿ ಒಟ್ಟು ಗ್ರಾಮಗಳ ವಿವಿಧ ಕಾಮಗಾರಿಗಳ ಕ್ರೋಢೀಕೃತ ವರದಿಯನ್ನು ನೀಡಿದ್ದೀರಿ. ಯಾವ ಕಾಮಗಾರಿ ಯಾವ ಗ್ರಾಮಕ್ಕೆ ಸಂಬಂಧಿಸಿದ್ದು ಎಂಬ ವಿವರಣೆಯಿಲ್ಲ. ಅದನ್ನು ಬದಲಾಯಿಸಿ ಗ್ರಾಮವಾರು ರಸ್ತೆ ಅಭಿವೃದ್ಧಿ, ಒಳ ಚರಂಡಿ ಕಾಮಗಾರಿ, ಸಿಸಿ ರಸ್ತೆ ನಿರ್ಮಾಣ ಯಾವ ಗ್ರಾಮಕ್ಕೆ ಯಾವ ಕಾಮಗಾರಿ ಮತ್ತು ಕಾಮಗಾರಿಯ ಪ್ರಗತಿ, ಮೊತ್ತ ಎಲ್ಲ ವಿವರಗಳನ್ನು ಒಳಗೊಂಡ ಮಾಹಿತಿ ಸಲ್ಲಿಸಬೇಕೆಂದರು.

ವಸತಿ ನಿಲಯಗಳ ನಿರ್ಮಾಣ ಸೇರಿದಂತೆ ಸರ್ಕಾರಿ ಕಟ್ಟಡಗಳ ನಿರ್ಮಾಣಕ್ಕೆ ಕಳೆದ ವರ್ಷವೇ ಅನುಮತಿ ನೀಡಲಾಗಿದೆ. ಆದರೆ ಹಂಚಿಕೆಯಾದ ಜಾಗದಲ್ಲಿ ಕಟ್ಟಡ ನಿರ್ಮಾಣ ಸಾಧ್ಯವಿಲ್ಲ ಎಂಬ ಮಾಹಿತಿ ನೀಡಲಾಗಿದೆ. ಹಂಚಿಕೆಯಾದ ಜಾಗದ ಕುರಿತು ಏನಾದರೂ ವ್ಯಾಜ್ಯಗಳು ಅಥವಾ ಗೊಂದಲಗಳಿದ್ದರೆ, ಅಲ್ಲಿ ಕಾಮಗಾರಿ ಸ್ಥಗಿತಗೊಂಡಿರುವ ಬಗ್ಗೆ ಹಾಗೂ ಅದಕ್ಕೆ ಸಂಬಂಧಿಸಿದ ಕಾರಣಗಳ ಬಗ್ಗೆ ಸೂಕ್ತ ದಾಖಲೆಗಳನ್ನು ಒದಗಿಸಬೇಕು. ಇದರಿಂದ ಮುಂದೆ ಉಂಟಾಗುವ ಗೊಂದಲಗಳನ್ನು ತಪ್ಪಿಸಬಹುದು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್ಕುಮಾರ, ಜಿಪಂ ಸಿಇಒ ರಘುನಂದನ್‌ ಮೂರ್ತಿ, ಪ್ರೊಬೇಷನರಿ ಐಎಎಸ್‌ ಅಧಿಕಾರಿ ನೇಹಾ ಜೈನ್‌, ಎಡಿಸಿ ಸೈಯಿದಾ ಅಯಿಷಾ ಇತರರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.