ಬೇಸಿಗೆ ಶೇಂಗಾಕ್ಕೆ ಉತ್ತಮ ಬೆಲೆ ಸಿಗದೇ ರೈತ ಕಂಗಾಲು

ಅಡುಗೆ ಎಣ್ಣೆ ಬೆಲೆ ಹೆಚ್ಚಾದರೂ ಎಣ್ಣೆಕಾಳಿಗಿಲ್ಲ ಬೆಲೆ

Team Udayavani, Apr 8, 2022, 4:01 PM IST

18

ಕುಷ್ಟಗಿ: ಅಡುಗೆ ಎಣ್ಣೆ ಬೆಲೆ ಏರಿಕೆಯ ದಿನಮಾನದಲ್ಲಿ ರೈತರು ತಾವು ಬೆಳೆದ ಶೇಂಗಾ ಬೆಳೆಗೆ ಉತ್ತಮ ಧಾರಣಿ ಸಿಗುವ ನಿರೀಕ್ಷೆ ಹುಸಿಯಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಶೇಂಗಾ ಧಾರಣಿ 200 ರೂ.ದಿಂದ 500 ರೂ. ಕಡಿಮೆಯಾಗಿರುವುದು ಶೇಂಗಾ ಬೆಳೆದ ರೈತರಲ್ಲಿ ನಿರಾಸೆ ಮೂಡಿಸಿದೆ.

ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧ ಪರಿಣಾಮ ಹಾಗೂ ದೇಶಿ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಏರಿಕೆಯಿಂದ ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚುತ್ತಿರುವುದು ಸಹಜವಾಗಿದೆ. ಇಂತಹ ಸಂದರ್ಭದಲ್ಲಿ ಬೇಸಿಗೆ ಶೇಂಗಾ ಬೆಳೆ ಉತ್ತಮ ಬೆಲೆ ಸಿಗುವ ನಿರೀಕ್ಷೆ ತಿಂಗಳಾಂತರದಲ್ಲಿ ಹುಸಿಯಾಗಿದೆ.

ಆರಂಭದಲ್ಲಿ ಶೇಂಗಾ ಪ್ರತಿ ಕ್ವಿಂಟಲ್‌ಗೆ 7 ಸಾವಿರದಿಂದ 6,800 ರೂ. ಇದ್ದ ಬೆಲೆ ವಾರದಿಂದೀಚೆಗೆ 6,500 ರೂ. ಇದೆ. ಶೇಂಗಾ ಗುಣಮಟ್ಟ, ಕಾಳಿನ ಗಾತ್ರ, ಎಣ್ಣೆಯ ಅಂಶ ಇತ್ಯಾದಿ ಪರಿಶೀಲನೆಗೆ ಒಳಗಾಗಿ ಯೋಗ್ಯ ಬೆಲೆ ಎಂದರೆ ಪ್ರತಿ ಕ್ವಿಂಟಲ್‌ಗೆ 6,800 ರೂ. ದಿಂದ 6,900 ರೂ. ಆಗಿದೆ. ಈ ಭಾಗದ ಮಸಾರಿ ಜಮೀನಿನಲ್ಲಿ ಪಂಪ್‌ ಸೆಟ್‌ ನೀರಾವರಿ ಆಧಾರಿತವಾಗಿ ಬೆಳೆಯುವ ಬೇಸಿಗೆ ಶೇಂಗಾಕ್ಕೆ ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಹಾಗೂ ಗಂಗಾವತಿ ಎಣ್ಣೆ ಮಿಲ್ ಗಳಲ್ಲು ಹೆಚ್ಚು ಬೇಡಿಕೆ ಇದೆ.

ಆದರೂ ಈ ವಾರಂತ್ಯದಲ್ಲಿ ಏಕಾಏಕಿ ರೂ. 200ರೂ. ದಿಂದ 500 ರೂ. ಕಡಿಮೆಯಾಗಿರುವುದನ್ನು ಗಮನಿಸಿ ಕೆಲವು ರೈತರು ತಮ್ಮಲ್ಲಿರುವ ಶೇಂಗಾ ಉತ್ಪನ್ನವನ್ನು ಮುಂದೆ ಉತ್ತಮ ಬೆಲೆ ಸಿಗುವ ಭರವಸೆಯಿಂದ ಮಾರಾಟಕ್ಕೆ ಮುಂದಾಗಿಲ್ಲ. ಈ ವರ್ಷ ಸ್ವಲ್ಪ ಪ್ರಮಾಣದಲ್ಲಿ ಇಳುವರಿ ಕಡಿಮೆ ಇದ್ದರೂ ರೈತರು ನಿರೀಕ್ಷಿಸಿದಷ್ಟು ಬೆಲೆ ಇಲ್ಲ. ಕುಷ್ಟಗಿ ಎಪಿಎಂಸಿಗೆ ಕಳೆದ ತಿಂಗಳಿನಿಂದ ಬೇಸಿಗೆ ಶೇಂಗಾ ಆವಕವಾಗುತ್ತಿದ್ದು, ಮೇ ತಿಂಗಳ ಕೊನೆಯವರೆಗೂ ಈ ಉತ್ಪನ್ನ ಮಾರುಕಟ್ಟೆಗೆ ಆವಕವಾಗುವ ನಿರೀಕ್ಷೆ ಇದೆ ಎಂದು ಕುಷ್ಟಗಿ ಎಪಿಎಂಸಿ ಕಾರ್ಯದರ್ಶಿ ಟಿ. ನೀಲಪ್ಪ ಶೆಟ್ಟಿ ಹೇಳಿದರು. ‌

ಈ ಭಾಗದಲ್ಲಿ ಮೊದಲಿನಿಂದಲೂ ಬೆಳೆಯುವ ಶೇಂಗಾ ಉತ್ಪನ್ನಕ್ಕೆ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ. ಇತ್ತೀಚಿನ ಸುಧಾರಿತ ಖದ್ರಿ ಲೇಪಾಕ್ಷಿ ಶೇಂಗಾ ಉತ್ಪನ್ನಕ್ಕೆ ಬೇಡಿಕೆ ಇಲ್ಲ. ಖದ್ರಿ ಶೇಂಗಾ ಉತ್ಪನ್ನಕ್ಕೆ ಪ್ರತಿ ಕ್ವಿಂಟಲ್‌ 5 ಸಾವಿರ ರೂ. ಇದ್ದು, ಸಾಮಾನ್ಯವಾಗಿ ಬೆಳೆಯುವ ಶೇಂಗಾ ಉತ್ಪನ್ನ ಪ್ರತಿ ಕ್ವಿಂಟಲ್‌ಗೆ ಗುಣಮಟ್ಟದ ಆಧಾರದಲ್ಲಿ 7 ಸಾವಿರ ರೂ. ಇದೆ. –ಶ್ರೀಕಾಂತ ಪಟ್ಟಣಶೆಟ್ಟಿ, ವರ್ತಕರು ಎಪಿಎಂಸಿ ಯಾರ್ಡ್‌ ಕುಷ್ಟಗಿ

ಅಂತರ್ಜಲ ಕಡಿಮೆಯಾಗಿರುವ ಸಂಕಷ್ಟದ ಸ್ಥಿತಿಯಲ್ಲಿ ಸ್ಪಿಂಕ್ಲರ್‌ ಬಳಸಿ ಶೇಂಗಾ ಬೆಳೆ ಬೆಳೆದಿದ್ದು, ಈ ಬಾರಿ ಕ್ವಿಂಟಲ್‌ಗೆ 8 ಸಾವಿರ ರೂ. ನಿರೀಕ್ಷಿಸಿದ್ದೇವು. ಆದರೆ ಶೇಂಗಾ ಧಾರಣಿ ಕಡಿಮೆಯಾಗಿದೆ. ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆಯ ಬೆಲೆ ಹೆಚ್ಚಿದ್ದು, ಶೇಂಗಾ ಉತ್ಪನ್ನ ದರ ಯಾಕೆ ಹೆಚ್ಚಾಗಿಲ್ಲ.   –ನಿಂಗಪ್ಪ ಜೀಗೇರಿ, ಕಡೇಕೊಪ್ಪ ರೈತ

-ಮಂಜುನಾಥ ಮಹಾಲಿಂಗಪುರ

 

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

Koppal ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

1-qweqw-ew

High Court ಆದೇಶದಂತೆ ಏ.17,18 ರಂದು ನವವೃಂದಾವನಗಡ್ಡಿಯಲ್ಲಿ ಆರಾಧನೆ

1-waddasd

Gangavati; ಈದ್ಗಾ ಮೈದಾನದಲ್ಲಿ ರಾಜಕೀಯ: ಅನ್ಸಾರಿ-ಗಾಲಿ ರೆಡ್ಡಿ ಸಮರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.