ಮಧ್ಯಾಹ್ನದ ಬಿಸಿಯೂಟಕ್ಕೆ ಅಡ್ಡಿಯಾದ ಬಿಸಿಲು.. ಕಲ್ಯಾಣ ಕರ್ನಾಟಕದಲ್ಲಿ 38-40 ಡಿಗ್ರಿ ತಾಪಮಾನ

ಬೇಸಿಗೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಬೇಕೋ ಬೇಡವೋ..ಪಾಲಕರ ಚಿಂತೆ

Team Udayavani, Mar 30, 2024, 12:40 PM IST

ಮಧ್ಯಾಹ್ನದ ಬಿಸಿಯೂಟಕ್ಕೆ ಅಡ್ಡಿಯಾದ ಬಿಸಿಲು.. ಕಲ್ಯಾಣ ಕರ್ನಾಟಕದಲ್ಲಿ 38-40 ಡಿಗ್ರಿ ತಾಪಮಾನ

ದೋಟಿಹಾಳ (ಕೊಪ್ಪಳ): ಸದ್ಯ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಸೂರನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಬೇಸಿಗೆ ರಜೆ ಅವಧಿಯಲ್ಲಿ ಶಾಲಾ ಮಕ್ಕಳು ಮಧ್ಯಾಹ್ನದ ಬಿಸಿಯೂಟಕ್ಕಾಗಿ ಸುಡುವ ಬಿಸಿಲಿನಲ್ಲಿ ಶಾಲೆಗೆ ಹೋಗುವಂತಾಗಿದೆ.

ರಾಜ್ಯ ಸರ್ಕಾರ ಬರಗಾಲ ಇರುವುದರಿಂದ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಅವಧಿಯಲ್ಲೂ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆ ಮುಂದುವರಿಸಿದೆ. ಆದರೆ ಇದು ಪಾಲಕರನ್ನು ಚಿಂತೆಗೀಡು ಮಾಡಿದೆ.

ಕೆಲವೆಡೆ ಬಿಸಿಲಿನ ತಾಪಮಾನ 40 ಡಿಗಿ, ಸೆಲ್ಸಿಯಸ್ ದಾಟುತ್ತಿದೆ. ಆರೋಗ್ಯ ಇಲಾಖೆಯವರು ಮುಂದಿನ ದಿನಗಳಲ್ಲಿ ಉಷ್ಣತೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಮಕ್ಕಳ ಆರೋಗ್ಯದ ಕಡೆ ಪಾಲಕರು ಹೆಚ್ಚು ಗಮನ ಹರಿಸಬೇಕಿದೆ. ಮಧ್ಯಾಹ್ನ 12ರಿಂದ 4 ಗಂಟೆವರೆಗೆ ಬಿಸಿಲಿನ ತಾಪಮಾನ ಹೆಚ್ಚಾಗಿದ್ದರಿಂದ ಮಕ್ಕಳನ್ನು ಮನೆಯಿಂದ ಹೊರಗೆ ಕಳಿಸಬೇಡಿ ಎಂದು ಸಲಹೆ ನೀಡುತ್ತಿದೆ. ಹೀಗಾಗಿ ಪಾಲಕರಿಗೆ ಮಕ್ಕಳನ್ನು ಬಿಸಿಯೂಟಕ್ಕೆ ಕಳಿಸಬೇಕೋ.ಅಥವಾ ಬಿಡಬೇಕೋ ಎಂಬ ಚಿಂತೆ ಶುರುವಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ಹಳ್ಳಿಗಳ ಶಾಲೆಗಳು ಬಹುತೇಕ ಊರ ಹೊರಗಿವೆ. ಹೀಗಾಗಿ ಮಕ್ಕಳು ಬಿಸಿಲಿನಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಶಾಲೆಗೆ ಹೋಗಿ ಬರಬೇಕು. ಬಿಸಿಲಿನ ಪ್ರಖರ ಕಿರಣಗಳಿಗೆ ಮೈಯೊಡ್ಡುವುದರಿಂದ ಸನ್ ಸ್ಟೋಕ್ ಆಗುವ ಸಾಧ್ಯತೆಗಳಿವೆ. ವಿಪರೀತ ತಲೆನೋವಿನ ಜತೆ ಜ್ವರ ಸನ್‌ ಸ್ಟೋಕ್‌ನ ಮುಖ್ಯ ಲಕ್ಷಣ, ತಲೆ ಸುತ್ತು, ವಾಂತಿಯೂ ಇರಬಹುದು. ಒಮ್ಮಿಂದೊಮ್ಮೆ ಪ್ರಜ್ಞಾ, ಹೀನ ರಾಗಬಹುದು. ಸದ್ಯ ಕಲ್ಯಾಣ ಕರ್ನಾಟಕ ಭಾಗದಲ್ಲಿ 38-40 ಡಿಗ್ರಿ ತಾಪಮಾನ ಇದೆ.

ಇಂತಹ ಸ್ಥಿತಿಯಲ್ಲಿ ಮಕ್ಕಳನ್ನು ಮಧ್ಯಾಹ್ನದ ಬಿಸಿಯೂಟಕ್ಕೆ ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ. ಸರ್ಕಾರ ಬೇಸಿಗೆ, ರಜೆಯಲ್ಲಿ ಮಕ್ಕಳಿಗೆ ಬಿಸಿಯೂಟ ನೀಡುವ ಬದಲು ಕೋವಿಡ್ ವೇಳೆ ಮಕ್ಕಳಿಗೆ ನೀಡಿದ ಆಹಾರ ಪದಾರ್ಥಗಳ ರೀತಿಯಲ್ಲಿ ನೀಡಿದರೆ ಒಳ್ಳೆಯದು. ಇದರಿಂದ ಮಕ್ಕಳು ಪ್ರತಿನಿತ್ಯ ಶಾಲೆಗೆ ಬರುವುದು ತಪ್ಪುತ್ತದೆ ಎಂದು ಪಾಲಕರು ಹೇಳುತ್ತಿದ್ದಾರೆ. ಬರಗಾಲದಿಂದ ರಾಜ್ಯದ ಬಹುತೇಕ ಶಾಲೆಗಳಲ್ಲಿ ಕುಡಿವ ನೀರಿನ ಸಮಸ್ಯೆ ಕಾಡುತ್ತಿದೆ. ಬಿಸಿಯೂಟ ಅಡುಗೆ ಮಾಡಲು ನೀರೂ ಸಿಗುತ್ತಿಲ್ಲ. ಇನ್ನು ಮಕ್ಕಳ ಊಟದ ತಟ್ಟೆ ತೊಳೆಯಲು ಮಕ್ಕಳು ಪರದಾಡುತ್ತಿದ್ದಾರೆ. ಇಂತಹದರ ಮಧ್ಯೆ ಮಕ್ಕಳು ಊಟಕ್ಕಾಗಿ ಬಿಸಿಲಿನಲ್ಲಿ ಶಾಲೆಗೆ ಹೋಗಬೇಕು. ಇದರ ಬದಲು ಮಕ್ಕಳಿಗೆ ಆಹಾರ ಪದಾರ್ಥ ನೀಡಿದರೆ ಒಳ್ಳೆಯದು ಎನ್ನುವುದು ಪ್ರಜ್ಞಾನಂತರ ಕಳಕಳಿ,

ಕೊಪ್ಪಳ ಜಿಲ್ಲೆಯ 1ರಿಂದ 8ನೇ ತರಗತಿವರೆಗೆ ಸುಮಾರು 1.73 ಲಕ್ಷ ಶಾಲಾ ಮಕ್ಕಳು ಬಿಸಿಯೂಟ ಮಾಡುತ್ತಿದ್ದಾರೆ. ಸದ್ದ ಬೇಸಿಗೆ ರಜೆ ಅವಧಿಯಲ್ಲಿ ಬಿಸಿಯೂಟ ಮಾಡಲು ಶೇ.70 ಮಕ್ಕಳು ಮಾತ್ರ ಒಪ್ಪಿಗೆ ಪತ್ರ ನೀಡಿದ್ದಾರೆ.
– అనిತಾ ಎಸ್ ಆರ್ . ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ, ಕೊಪ್ಪಳ.

ಸದ್ಯ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಶಾಲಾ ಮಕ್ಕಳ ಬೇಸಿಗೆ ರಜೆ ಅವಧಿಯಲ್ಲಿ ಮಧ್ಯಾಹ್ನ ಬಿಸಿಯೂಟ ಯೋಜನೆ ಬಗ್ಗೆ ರಾಜ್ಯ ಪಿಎಂ ಪೋಷಣಾ ಅಭಿಯಾನ ನಿರ್ದೇಶಕರ ಜತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.

– ಡಾ|ಆಕಾಶ, ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರ್ಗಿ.

– ಮಲ್ಲಿಕಾರ್ಜುನ ಮೆದಿಕೇರಿ ದೋಟಿಹಾಳ,

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.