ಗಂಗಾವತಿಯನ್ನು ಕಿಷ್ಕಿಂಧಾ ನಾಮಕರಣದೊಂದಿಗೆ ಜಿಲ್ಲೆಯನ್ನಾಗಿಸಲು ಹೋರಾಟ ಅಗತ್ಯವಾಗಿದೆ


Team Udayavani, Mar 7, 2023, 5:32 PM IST

tdy-20

ಗಂಗಾವತಿ (ಎಸ್.ಬಿ.ಗೊಂಡಬಾಳ ವೇದಿಕೆ): ರಾಜಕೀಯ ಹಿತಾಸಕ್ತಿಗಾಗಿ ಕಾರಟಗಿ, ಕನಕಗಿರಿ ಪ್ರತೇಕ ತಾಲೂಕು ರಚನೆ ಮಾಡುವ ಮೂಲಕ ಗಂಗಾವತಿಯ ಅಂಗಾಂಗಗಳನ್ನು ಕತ್ತರಿಸಲಾಗಿದ್ದು ಇದಕ್ಕೆ ಪರಿಹಾರವಾಗಿ ಗಂಗಾವತಿಯ ಹೆಸರು ಬದಲಿಸಿ ಪ್ರತೇಕ ಕಿಷ್ಕಿಂಧಾ ಜಿಲ್ಲೆ ರಚನೆಯೊಂದೇ ಮಾರ್ಗವಾಗಿದ್ದು ಕೂಡಲೇ ಜಿಲ್ಲಾ ರಚನಾ ಹೋರಾಟ ಸಮಿತಿ ಅಸ್ತಿತ್ವಕ್ಕೆ ತರಬೇಕಿದೆ ಎಂದು ವಕೀಲರ ಸಂಘದ ಕಾರ್ಯದರ್ಶಿ ಹಾಗೂ ನ್ಯಾಯವಾದಿ ಎಚ್.ಎಂ.ಮಂಜುನಾಥ ಹೇಳಿದರು.

ಅವರು 8 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಭಿವೃದ್ಧಿ ಚಿಂತನಾಗೋಷ್ಠಿಯ ಆಶಯ ನುಡಿಗಳನ್ನಾಡಿ ಮಾತನಾಡಿದರು.

ಅಖಂಡ ರಾಯಚೂರು ಜಿಲ್ಲೆಯಿದ್ದ ಸಂದರ್ಭದಲ್ಲಿ ಗಂಗಾವತಿ ಎಪಿಎಂಸಿ ಆದಾಯ ಇಡಿ ರಾಜ್ಯಕ್ಕೆ ಎರಡನೇಯ ಸ್ಥಾನದಲ್ಲಿತ್ತು. ಇಲ್ಲಿ ಆರ್‌ಟಿಓ, ಕೆಇಬಿ ಸೇರಿ ಹಲವು ಕಚೇರಿಗಳು ಕೊಪ್ಪಳಕ್ಕೆ ವರ್ಗಾ ಆಗಿವೆ. ಗಂಗಾವತಿ ನೋಂದಣಿ ಇಲಾಖೆಯ ಆದಾಯ ವಾರ್ಷಿಕ 15ಕೋಟಿ ರೂ. ಇದ್ದು ಇನ್ನೂ ಅನೇಕ ವಿಷಯಗಳಲ್ಲಿ ಗಂಗಾವತಿ ಅಭಿವೃದ್ಧಿ ಹೊಂದಬೇಕಿದೆ. ಆದ್ದರಿಂದ ಗಂಗಾವತಿಗೆ ಜಿಲ್ಲೆಯ ಸ್ಥಾನಮಾನಕ್ಕಾಗಿ ಹೋರಾಟ ನಡೆಸುವ ಅನಿವಾರ್ಯತೆ ಇದೆ. ಇಲ್ಲದಿದ್ದರೆ ಗಂಗಾವತಿ ಅಭಿವೃದ್ಧಿಯಿಂದ ವಂಚಿತವಾಗಲಿದೆ. ಕಿಷ್ಕಿಂದಾ ಎಂದು ನಾಮಕರಣ ಮಾಡಿ ಗಂಗಾವತಿಯನ್ನು ಪ್ರತೇಕ ಜಿಲ್ಲೆ ಮಾಡಬೇಕು. ಈಗಾಗಲೇ ಸಿಂಧನೂರನ್ನು ಜಿಲ್ಲೆಯಾಗಿಸುವಂತೆ ಹೋರಾಟಗಳು ನಡೆಯುತ್ತಿದ್ದು ಗಂಗಾವತಿಯವರು ಎಚ್ಚೆತ್ತುಕೊಳ್ಳದಿದ್ದರೆ ಕಾರಟಗಿ ತಾಲೂಕು ಸಿಂಧನೂರು ನೂತನ ಜಿಲ್ಲೆಗೆ ಸೇರಲಿದೆ.ಗಂಗಾವತಿ ಪ್ರತೇಕ ಜಿಲ್ಲೆಯಾದ ತಕ್ಷಣ, ಜಿಲ್ಲಾಧಿಕಾರಿಗಳು, ಎಸ್ಪಿ, ಲೋಕಾಯುಕ್ತ, ಎಸಿ, ರ‍್ಟಿಓ, ಸೇರಿ ಎಲ್ಲಾ ಇಲಾಖೆಗಳ ಕಚೇರಿಗಳು, ಜಿಲ್ಲಾ ಕೋರ್ಟ್, ಸ್ನಾತಕೋತ್ತರ ಕೇಂದ್ರಗಳು, ರೈಲ್ವೇ , ವಿಮಾನ ನಿಲ್ದಾಣ ಹಾಗೂ ರಾಷ್ಟ್ರೀಯ ಹೆದ್ದಾರಿ, ಬಜೆಟ್ ನಲ್ಲಿ ಪ್ರತೇಕ ಹಣ ಮೀಸಲು, ಉದ್ಯೋಗ ಸೃಷ್ಠಿ ಸರಕಾರಿ ಇಲಾಖೆಗಳ ಅಧಿಕಾರಿಗಳ ಸಂಪರ್ಕ ದೊರಕಿ ಅಭಿವೃದ್ಧಿಯ ವೇಗ ಹೆಚ್ಚಾಗುತ್ತದೆ ಆದ್ದರಿಂದ ಗಂಗಾವತಿಯ ರಾಜಕಾರಣಿಗಳು ಜಿಲ್ಲಾ ಕೇಂದ್ರವಾಗಲು ಜನತೆಯೊಂದಿಗೆ ಹೋರಾಟ ನಡೆಸಬೇಕು. ಹಂಪಿ ಅಭಿವೃದ್ಧಿ ಪ್ರಾಧಿಕಾರದವರು ಹಂಪಿ ಭಾಗದ 14 ಗ್ರಾಮಗಳಲ್ಲಿ ಎಲ್ಲಾ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಿ ಆನೆಗೊಂದಿ ಭಾಗದ 15 ಗ್ರಾಮಗಳನ್ನು ಗ್ರೀನ್ ಝೋನ್ ನಿಯಮದಡಿ ಮಾಡಿ ಅಭಿವೃದ್ಧಿಗೆ ಭಾರಿ ಪೆಟ್ಟು ನೀಡಿದ್ದಾರೆ. ಆದ್ದರಿಂದ ಹಂಪಿ ಅಭಿವೃದ್ಧಿ ಪ್ರಾಧಿಕಾರದಿಂದ ಆನೆಗೊಂದಿ ಭಾಗವನ್ನು ಪ್ರತೇಕ ಮಾಡಿ ಆನೆಗೊಂದಿ ಕಿಷ್ಕಿಂಧಾ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮೂಲಕ ಗಂಗಾವತಿ ತಾಲೂಕಿನ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡಬೇಕೆಂದು ಮನವಿ ಸಲ್ಲಿಸಿದರು.

ನಿವೃತ್ತ ಪ್ರಾಧ್ಯಾಪಕ ಬಿ.ಸಿ.ಐಗೋಳ್, ಡಾ| ಬದ್ರಿ ಪ್ರಸಾದ, ಪ್ರಾಧ್ಯಾಪಕ ಶರಣಬಸಪ್ಪ ಬಿಳಿಎಲಿ, ಮುಖಂಡ ಸಂತೋಷ ಕೆಲೋಜಿ ತಾಲೂಕಿನ ಸಮಗ್ರ ಅಭಿವೃದ್ಧಿ ಕುರಿತು ಮಾತನಾಡಿದರು. ಡಾ|ಅಮರೇಶ ಪಾಟೀಲ್, ಪ್ರತ್ರಕರ್ತ ಪ್ರಸನ್ನದೇಸಾಯಿ, ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ, ಚನ್ನಪ್ಪ ಮಳಗಿ ಸೇರಿ ಅನೇಕರಿದ್ದರು.

ಸಮ್ಮೇಳನದಲ್ಲಿ ಬಿಜೆಪಿ ಸರಕಾರ ಪ್ರಸ್ತಾಪ ಆಕ್ರೋಶ..

8 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರವಾಸೋದ್ಯಮ ಸಾಧ್ಯತೆ ಮತ್ತು ಅಭಿವೃದ್ದಿ ವಿಷಯದ ಕುರಿತು ಮಾತನಾಡಬೇಕಿದ್ದ ಪುರಾತತ್ವ ಇಲಾಖೆಯ ಅಧಿಕಾರಿ ಆರ್.ಮಂಜುನಾಥ ಅನುಪಸ್ಥಿತಿಯಲ್ಲಿ ಬಿಜೆಪಿ ಮುಖಂಡ ಸಂತೋಷ ಕೆಲೋಜಿ ಮಾತನಾಡುವ ಸಂದರ್ಭದಲ್ಲಿ ಕಿಷ್ಕಿಂದಾ ಅಂಜನಾದ್ರಿ ಅಭಿವೃದ್ದಿ ಬಿಜೆಪಿ ಸರಕಾರ ಮಾಡಿದೆ. ಪ್ರಧಾನಿ ಮೋದಿ ಪತ್ನಿ ಜಶೋಧಾ ಬೆನ್ ಬಂದು ಹೋದ ನಂತರ ಪ್ರಗತಿಯ ವೇಗ ಹೆಚ್ಚಿದೆ. ಸಚಿವ ಬಿ.ಶ್ರೀರಾಮುಲು ಪುರಾತನ ಇತಿಹಾಸ ಪ್ರಸಿದ್ಧ ಪಂಪಾಸರೋವರದ ಶ್ರೀ ವಿಜಯಲಕ್ಷ್ಮೀ ಹಾಗೂ ಮೇಗೋಟದ ವಾಲೀಕಿಲ್ಲಾ ಆದಿಶಕ್ತಿ ದೇಗುಲಗಳನ್ನು ಜಿರ್ಣೋದ್ಧಾರ ಮಾಡುತ್ತಿದ್ದಾರೆ.  ಇದುವರೆಗೂ ಆಡಳಿತ ನಡೆಸಿದ ಸರಕಾರಗಳು ಮತ್ತು ಶಾಸಕ ಸಂಸದರು ಮಾಡದೇ ಇರುವ ಅಭಿವೃದ್ಧಿ ಕಾರ್ಯಗಳನ್ನು ಭಾರತೀಯ ಜನತಾ ಪಾರ್ಟಿ ಸರಕಾರ ಮಾಡಿದೆ ಎಂದರು. ಸಾಹಿತ್ಯ ಸಮ್ಮೇಳನದಲ್ಲಿ ರಾಜಕೀಯ ಪಾರ್ಟಿಗಳ ಪ್ರಚಾರ ಮಾಡುವುದು ಸರಿಯಲ್ಲ. ಕಳೆದೆರಡು ದಿನಗಳಿಂದ ಶಾಸಕ ಪರಣ್ಣ ಮುನವಳ್ಳಿ ಸಮ್ಮೇಳನದಲ್ಲಿದ್ದರೂ ರಾಜಕೀಯ ಮಾತನಾಡಿಲ್ಲ. ಕೆಲೋಜಿಯವರು ಯಾಕೆ ಮಾತನಾಡಬೇಕಿತ್ತು ಎಂಬ ಮಾತುಗಳು ಕೇಳಿ ಬಂದವು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.