ದೋಟಿಹಾಳ: ಶಾಲಾ ಮಕ್ಕಳೊಂದಿಗೆ ಬಿಸಿಯೂಟ ಸವಿದ ತಾ.ಪಂ. ಇ.ಓ.
Team Udayavani, Oct 20, 2022, 3:06 PM IST
ದೋಟಿಹಾಳ: ಜುಮಲಾಪುರ ಗ್ರಾ.ಪಂ. ವ್ಯಾಪ್ತಿಯ ಮುದ್ದಲಗುಂದಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗುರುವಾರ ಆಕಸ್ಮಿಕವಾಗಿ ಭೇಟಿ ನೀಡಿದ ಕುಷ್ಟಗಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ಪ ಸುಬೇದಾರ್ ಅವರು ಶಾಲಾ ಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟನ್ನು ಪರೀಕ್ಷಿಸಿ ಮಕ್ಕಳೊಂದಿಗೆ ಕುಳಿತು ತಾವು ಬಿಸಿ ಊಟದ ರುಚಿಯನ್ನು ಸವಿದರು.
ನಂತರ ಶಾಲೆಯ ಕುಂದು ಕೊರತೆಗಳ ಬಗ್ಗೆ ಶಾಲಾ ಮುಖ್ಯ ಗುರುಗಳಿಂದ ಹಾಗೂ ಬಿಸಿಯೂಟದ ಅಡುಗೆ ಬಗ್ಗೆ ಮಕ್ಕಳಿಂದ ಮಾಹಿತಿ ಪಡೆದುಕೊಂಡರು.
ಇದೆ ವೇಳೆ ಶಾಲಾ ಮುಖ್ಯೋಪಾಧ್ಯಾಯ ರುದ್ರಪ್ಪ ಮಾತನಾಡಿ, ನಮ್ಮ ಶಾಲೆಗೆ ನೀರಿನ ವ್ಯವಸ್ಥೆ ಇಲ್ಲದ ಕಾರಣ ಕೂಡಲೇ ನೀರಿನ ವ್ಯವಸ್ಥೆ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡರು. ಉಪಸ್ಥಿತರಿದ್ದ ಜುಮಾಪೂರ ಪಿಡಿಓ ದೊಡ್ಡಪ್ಪ ನಾಯ್ಕ ಅವರಿಗೆ ಕೂಡಲೇ ಈ ಶಾಲೆಯಲ್ಲಿರುವ ಕೈ ಬೋರ್ವೆಲ್ ಮೋಟಾರ್ ಅಳವಡಿಸಿ ನೀರಿನ ವ್ಯವಸ್ಥೆ ಮಾಡಿಕೊಡಬೇಕೆಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕ ಐ.ಇ.ಸಿ. ಸಂಯೋಜಕ ದೇವರಾಜ ಪತ್ತಾರ, ಪಂಚಾಯತ್ ಅಭಿವೃದ್ದಿ ಅಧಿಕಾರಿ ದೊಡ್ಡಪ್ಪ ನಾಯ್ಕ, ಗ್ರಾ.ಪಂ. ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ತಾಂತ್ರಿಕ ಸಹಾಯಕ ಪ್ರಕಾಶ ಸಜ್ಜನ್, ಬಿ.ಎಫ್.ಟಿ. ಸಿದ್ದಯ್ಯ, ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ