ತಾಪಂ ರದ್ಧತಿ ಬೇಡ; ಚೈತನ್ಯ ತುಂಬಿ


Team Udayavani, Jan 23, 2021, 6:29 PM IST

taluk-panchayath-issue

ಕಾರಟಗಿ: ರಾಜ್ಯ ಬಿಜೆಪಿ ಸರ್ಕಾರ ತಾಲೂಕು ಪಂಚಾಯಿತಿಯನ್ನು ರದ್ದು ಮಾಡಲು ಸಿದ್ಧತೆ ನಡೆಸುತ್ತಿರುವುದು ಖಂಡನೀಯ. ಇದು ಒಂದು ರಾಜಕೀಯ ಹುನ್ನಾರ ಆಗಿದೆ..

ಹೀಗೆ ತಮ್ಮ ಅಸಮಾಧಾನ ಹೊರಹಾಕಿದವರು ಕಾರಟಗಿ ತಾಪಂ ಅಧ್ಯಕ್ಷ ಪ್ರಕಾಶ ಬಾವಿ ಅವರು. ತಾಲೂಕು ಪಂಚಾಯಿತಿಯನ್ನು ರದ್ದು ಪಡಿಸುವ ಚಿಂತನೆ ಸರ್ಕಾರದ ಮಟ್ಟದಲ್ಲಿ ನಡೆದಿರುವ ಸಂದರ್ಭದಲ್ಲಿ “ತಾಪಂ ರದ್ಧತಿ ಆಗಬೇಕೇ ಅಥವಾ ಬೇಡವೇ?’ ಎಂಬುದರ ಬಗ್ಗೆ “ಉದಯವಾಣಿ’ ಜತೆ ಅವರು ಅಭಿಪ್ರಾಯ ಹಂಚಿಕೊಂಡರು.

ಜಿಲ್ಲಾ ಹಂತದಲ್ಲಿ ಈ ಚಿಂತನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ತಾಪಂ ಅನ್ನು ರದ್ದುಪಡಿಸಿ ತಾಲೂಕು ಬೋರ್ಡ್‌ ಮಾಡಿ ಪಕ್ಷದ ಕಾರ್ಯಕರ್ತರನ್ನು ನಾಮಕೆವಾಸ್ತೆ ನಾಮನಿರ್ದೇಶನ ಮಾಡಿ ಸಂಪೂರ್ಣ ತಾಲೂಕನ್ನು ಶಾಸಕರ ಹಿಡಿತಕ್ಕೆ ನೀಡಲು ಮಾಡುತ್ತಿರುವ ವ್ಯವಸ್ಥಿತ ಹುನ್ನಾರವಾಗಿದೆ ಎಂದು ಆರೋಪಿಸಿದರು.

ತಾಪಂ ಪಾತ್ರ ಪ್ರಮುಖ: ತಾಪಂ ವ್ಯವಸ್ಥೆಯನ್ನು ರದ್ದು ಪಡಿಸುವುದರ ಬದಲಾಗಿ ಅದಕ್ಕೆ ಶಕ್ತಿ ತುಂಬಬೇಕಿದೆ. ಅಧಿ ಕಾರವನ್ನೂ ಹೆಚ್ಚಿಸಿ, ಬಲವರ್ಧನೆ ಮಾಡುವ ಕೆಲಸ ಮಾಡಬೇಕಿದೆ. ಜನರ ದೃಷ್ಟಿಯಲ್ಲಿ ಎಲ್ಲ ಪಂಚಾಯತ್‌ ವ್ಯವಸ್ಥೆಗಿಂತಲೂ ತಾಪಂ ವ್ಯವಸ್ಥೆ ಪ್ರಮುಖ ಪಾತ್ರ ವಹಿಸುತ್ತದೆ. ಹಳ್ಳಿಗಳಲ್ಲಿ ಸಾಮಾನ್ಯ ಜನರು ತಾಲೂಕು ಮಟ್ಟದ ಇಲಾಖೆಗಳನ್ನು ಸಂಪರ್ಕಿಸಲು ತಮ್ಮ ಸಮಸ್ಯೆ ಪರಿಹರಿಸಿಕೊಳ್ಳಲು ಇದರಿಂದ ಸಾಧ್ಯವಾಗುತ್ತದೆ. ಗ್ರಾಪಂ ಸದಸ್ಯರ ಮೂಲಕ ಎಲ್ಲ ಸಮಸ್ಯೆಗಳು ದೂರವಾಗುತ್ತವೆ ಎಂಬುದು ಅಸಾಧ್ಯ.

ತಾಪಂಗೂ ಇದೆ ಅಧಿಕಾರ: ಜಿಪಂ ಸದಸ್ಯರನ್ನು ಸಂಪರ್ಕಿಸಲು ಎಲ್ಲರಿಗೂ ಸಾಧ್ಯವಾಗಲ್ಲ. ಹೀಗಾಗಿ ಜನರಿಗೆ ತಾಪಂ ಸದಸ್ಯರು ನೇರವಾಗಿ ಸಂಪರ್ಕಕ್ಕೆ ಸಿಗುತ್ತಾರೆ. ಆ ಮೂಲಕ ತಾಲೂಕು ಮಟ್ಟದ ಇಲಾಖೆ ಅ ಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳನ್ನು ಮತ್ತು ಕೆಲಸ ಕಾರ್ಯ ಪೂರೈಸಿಕೊಳ್ಳುತ್ತಾರೆ. ಹೀಗಾಗಿ ತಾಪಂ ವ್ಯವಸ್ಥೆ ಅತ್ಯಂತ ಮುಖ್ಯವಾಗಿದೆ. ತಾಪಂಗೆ ಅಧಿ  ಕಾರವಿಲ್ಲ ಎನ್ನುವುದನ್ನು ನಾನು ಒಪ್ಪುವುದಿಲ್ಲ. ತಾಪಂಗೆ ತನ್ನದೇ ಆದ ಅಧಿ ಕಾರಗಳಿವೆ. ಜಿಲ್ಲಾ ಮಟ್ಟದಲ್ಲಿ ಜಿಪಂಗೆ ಇರುವಷ್ಟೇ ಅಧಿ ಕಾರ ತಾಲೂಕು ಮಟ್ಟದಲ್ಲಿ ತಾಪಂಗಿದೆ. ತಾಪಂಗೆ ಅನುದಾನಗಳ ಕೊರತೆಇದ್ದರೂ ಅನುಷ್ಠಾನ ಇಲಾಖೆಗಳಲ್ಲಿರುವ ಅನುದಾನ ಬಳಸಿಕೊಳ್ಳುವ ಅವಕಾಶವಿದೆ. ಆದರೆ ಅವುಗಳನ್ನು ಬಳಸಿಕೊಳ್ಳುವ ಜ್ಞಾನ ಸದಸ್ಯರಿಗೆ ಇರಬೇಕು.

ಇದನ್ನೂ ಓದಿ:400 ಕೋಟಿ ರೂ. ಅನುದಾನಕ್ಕೆ ಮನವಿ

ಸರಕಾರ ಕೂಡ ತಾಪಂಗಳಿಗೆ ನೀಡುವ ಅನುದಾನವನ್ನು ಹೆಚ್ಚಿಸಿ ಬಲವರ್ಧನೆ ಮಾಡಬೇಕಾಗಿದೆ. ತಾಲೂಕುಪಂಚಾಯತಿ ವ್ಯವಸ್ಥೆ ರದ್ಧತಿ ಮಾಡದೆ ಉಳಿಸಲೇಬೇಕು.  ನನ್ನ ಸದಸ್ಯತ್ವದ ಅಧಿ ಕಾರ ಅವಧಿಯಲ್ಲಿ ಅನುದಾನಗಳ ಜತೆಗೆ ವಿವಿಧ ಇಲಾಖೆಗಳ ಅನುದಾನ ಹಾಗೂಮಹಾತ್ಮಾ ಗಾಂಧಿ  ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಬಳಸಿಕೊಂಡು ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ 4 ಕೋಟಿಗೂ ಹೆಚ್ಚು ರೂ.ಗಳ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದೇನೆ. ಗ್ರಾಪಂ ಅಧ್ಯಕ್ಷರಿಗೆ ನೀಡಿರುವ ಅಧಿ  ಕಾರವನ್ನು ತಾಪಂ ಸದಸ್ಯರಿಗೂ ನೀಡಿದರೆ ಅಭಿವೃದ್ಧಿ ಕಾರ್ಯಗಳಲ್ಲಿ ಬದಲಾವಣೆ ತರಬಹುದು. ತಾಪಂ ಇರಲೇಬೇಕು ಎಂಬುದು ನನ್ನ ಅಭಿಪ್ರಾಯ ಎಂದರು.

ದಿಗಂಬರ ಎನ್‌.ಕುರ್ಡೆಕರ

ಟಾಪ್ ನ್ಯೂಸ್

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.