ತಾವರಗೇರಾ: ಮತ ಯಂತ್ರಗಳ ಸಂಖ್ಯೆ ಬದಲಾಗಿವೆ ಎಂದು ಪ್ರತಿಭಟನೆ
Team Udayavani, Dec 24, 2021, 3:00 PM IST
ಕುಷ್ಟಗಿ: ಕುಷ್ಟಗಿ ತಹಶೀಲ್ದಾರ ಕಚೇರಿಯ ಚುನಾವಣಾ ವಿಭಾಗದಲ್ಲಿರುವ ತಾವರಗೇರಾ ಪಟ್ಟಣ ಪಂಚಾಯತಿ ಚುನಾವಣೆಯ ವಿದ್ಯುನ್ಮಾನ ಮತಯಂತ್ರಗಳ ಸಂಖ್ಯೆ ಬದಲಾಗಿವೆ ಎಂದು ಶಂಕಿಸಿ ನಾಗರೀಕ ಅಭಿವೃದ್ಧಿ ವೇದಿಕೆ ಹಾಗೂ ಬಿಜೆಪಿ ಕಾರ್ಯಕರ್ತರು ಶುಕ್ರವಾರ ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಡಿ.27ಕ್ಕೆ ನಿಗದಿಯಾದ ಪಟ್ಟಣ ಪಂಚಾಯತಿ ಚುನಾವಣೆಗೆ, ತಹಶೀಲ್ದಾರ ಕಛೇರಿಯ ಚುನಾವಣಾ ವಿಭಾಗದಲ್ಲಿರುವ ವಿದ್ಯುನ್ಮಾನ ಮತಯಂತ್ರಗಳಲ್ಲಿ ಕೆಲವು ಮತಯಂತ್ರಗಳ ಸಂಖ್ಯೆ ಬದಲಿಯಾಗಿವೆ ಎನ್ನುವುದು ನಾಗರೀಕ ಅಭಿವೃದ್ಧಿ ಸಮಿತಿಯ ವಾದ. ಇದರಲ್ಲಿ ಕಾಂಗ್ರೆಸ್ ಪಕ್ಷದ ಕೈವಾಡವಿದ್ದು ಮುಂಚಿತವಾಗಿ 500ಕ್ಕೂ ಅಧಿಕ ಮತಗಳನ್ನು ಹಾಕಿಕೊಂಡಿರುವ ಸಾಧ್ಯತೆ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.
ಈ ವಾದ ಅಲ್ಲಗಳೆದಿರುವ ಸ್ಥಳೀಯ ಸಿಬ್ಬಂದಿ ತಹಶೀಲ್ದಾರ ಎಂ.ಸಿದ್ದೇಶ ಹಾಗೂ ಸಿಪಿಐ ನಿಂಗಪ್ಪ ರುದ್ರಪ್ಪಗೋಳ ಸಮಕ್ಷಮದಲ್ಲಿ ಪುನರ್ ಪರಿಶೀಲಿಸುವ ಭರವಸೆ ನೀಡಿದೆ.
ಇದೇ ವೇಳೆ ಪಟ್ಟಣ ಪಂಚಾಯತಿ ಬಳಿ ಆಯೋಜಿಸುತ್ತಿದ್ದ ಕಾಂಗ್ರೆಸ್ ಬಹಿರಂಗ ಸಭೆಯ ವೇದಿಕೆಯ ಬಗ್ಗೆ ನಾಗರೀಕ ಅಭಿವೃದ್ಧಿಯ ವೇದಿಕೆಯಿಂದ ತೀವ್ರ ತಕರಾರು ವ್ಯಕ್ತವಾಯಿತು.
ಇದನ್ನೂ ಓದಿ:ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ ಟರ್ಬನೇಟರ್ ಹರ್ಭಜನ್ ಸಿಂಗ್
ಪಟ್ಟಣ ಪಂಚಾಯಿತಿ ಹತ್ತಿರದ ರಸ್ತೆಯಲ್ಲಿ ವೇದಿಕೆ ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ, ಇಲ್ಲಿ ವೇದಿಕೆ ನಿರ್ಮಿಸಲು ಅವಕಾಶ ಕಲ್ಪಿಸಿದ ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ನಂತರ ಪ್ರತಿಭಟನಾ ನಿರತರು ತಹಶೀಲ್ದಾರರನ್ನು ಸಂಪರ್ಕಿಸಿದಾಗ ಅನುಮತಿ ಪಡೆಯದ ವಿಷಯ ಗೊತ್ತಾದಾಗ, ಕಾಂಗ್ರೆಸ್ ಪಕ್ಷದ ಮತ ಯಾಚನೆಯ ಬಹಿರಂಗ ಸಭೆಯ ವೇದಿಕೆಯ ನಿರ್ಮಾಣ ಕೆಲಸ ಮೊಟಕುಗೊಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ