Live video ಮಾಡುತ್ತಲೇ ಕ್ರಿಮಿನಾಶಕ ಸೇವಿಸಿ ಶಿಕ್ಷಕ ಆತ್ಮಹತ್ಯೆ!
ಪತ್ನಿ ಮತ್ತು ಮಕ್ಕಳಿಗೆ ಯಾವುದೇ ಕಾರಣಕ್ಕೂ ತೊಂದರೆ ಕೊಡಬೇಡಿ...
Team Udayavani, Jun 23, 2023, 4:35 PM IST
ಕುಷ್ಟಗಿ:ಲೈವ್ ವಿಡಿಯೋ ಮಾಡುತ್ತಲೇ ಕ್ರಿಮಿನಾಶಕ ಸೇವಿಸಿ ಖಾಸಗಿ ಶಾಲೆಯ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ.ರಾಜು ಬ್ಯಾಡಗಿ (45) ಆತ್ಮಹತ್ಯೆ ಮಾಡಿಕೊಂಡ ಖಾಸಗಿ ಶಾಲೆಯ ಶಿಕ್ಷಕ.
ರಾಜು, ಕುಷ್ಟಗಿ ಪಟ್ಟಣದಲ್ಲಿರುವ ಬುತ್ತಿ ಬಸವೇಶ್ವರ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಮಧ್ಯಾಹ್ನ ಕುಷ್ಟಗಿ ಸಾಯಿಬಾಬಾ ದೇವಸ್ಥಾನ ಹಿಂಭಾಗ ತನ್ನ ಕೆಲವು ಮಿತ್ರರಿಗೆ ಲೈವ್ ವಿಡಿಯೋ ಮಾಡಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥನಾಗಿದ್ದರು, ಕೂಡಲೇ ಕುಷ್ಟಗಿ ಸರ್ಕಾರಿ ಆಸ್ಪತ್ರೆಯಿಂದ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಲೈವ್ ವಿಡಿಯೋ
ಹಣ ಡಬಲ್ ಮಾಡಿಕೊಡುವುದಾಗಿ ಅನೇಕ ಜನರಿಂದ ಎಂಬಿಬಿ ಹೆಸರಿನ ಕಂಪೆನಿಯಲ್ಲಿ ಹಣ ಹೂಡಿಕೆ ಮಾಡಿಸಿದ್ದರು.ಹಣ ಹೂಡಿಕೆ ಮಾಡಿದವರು ಹಣ ವಾಪಾಸ್ ಕೊಡಿಸುವಂತೆ ಕೇಳುತ್ತಿದ್ದರು. ಇದೇ ಕಾರಣಕ್ಕೆ ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿರುವ ರಾಜು ಬ್ಯಾಡಗಿ ಪದೇ ಪದೇ ಹಣ ಕೊಡಿಸಿ ಎಂದು ಪೀಡಿಸುತ್ತಿದ್ದಾರೆ. ಕಂಪನಿಯ 1 ರೂ. ಇಟ್ಟು ಕೊಂಡಿಲ್ಲ. ಎಂಬಿಬಿ. ಕಂಪನಿಗೆ ಹೂಡಿಕೆ ಮಾಡಿದ ಹಣ ಎಲ್ಲವೂ ಎಂಬಿಬಿ. ಮಾಲಕ ಮಹೇಶ ಬಿರಾದಾರಗೆ ಮುಟ್ಟಿಸಿದ್ದೇನೆ ಎಂದು ಹೇಳಿಕೊಂಡಿದ್ದು, ತನ್ನ ಪತ್ನಿಯ ಜೀವನ ಹಾಗೂ ಇಬ್ಬರು ಮಕ್ಕಳ ಶೈಕ್ಷಣಿಕ ಭವಿಷ್ಯ ಕಾಳಜಿವಹಿಸಿರಿ. ಅಲ್ಲದೇ ನನ್ನ ಕುಟುಂಬಕ್ಕೆ ಯಾವುದೇ ಕಾರಣಕ್ಕೂ ತೊಂದರೆ ಕೊಡಬೇಡಿ ಎಂದು ಹೇಳಿಕೊಂಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ