ಶಿಕ್ಷಕ ಕರಿಯಪ್ಪನ ಯೋಗ ಸೇವೆ
•ಪ್ರತಿವರ್ಷ ಗ್ರಾಮಸ್ಥರಿಗೆ-ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ದೈಹಿಕ ಶಿಕ್ಷಕ
Team Udayavani, Jun 21, 2019, 8:59 AM IST
ಸಿದ್ದಾಪುರ: ಗುಂಡೂರು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಯೋಗಾಸನ ಹೇಳಿಕೊಡುತ್ತಿರುವ ದೈಹಿಕ ಶಿಕ್ಷಕ ಕರಿಯಪ್ಪ.
ಸಿದ್ದಾಪುರ: ಪ್ರತಿಷ್ಠಿತ ನಗರಗಳಲ್ಲಿ ಕೆಲವು ಸಂಘಸಂಸ್ಥೆಗಳು ಹಲವು ದಿನಗಳ ಕಾಲ ನಗರ ನಾಗರಿಕರಿಗಾಗಿ ಉಚಿತ ಯೋಗ ಶಿಬಿರ ಆಯೋಜಿಸಿರುವುದನ್ನು ನಾವು ನೋಡಿರುತ್ತೇವೆ. ಆದರೆ ಈ ಊರಿನಲ್ಲಿ ಮಾತ್ರ ಪ್ರೌಢಶಾಲೆಯ ದೈಹಿಕ ಶಿಕ್ಷಕ ಪ್ರತಿವರ್ಷ ತಾವೊಬ್ಬರೇ ತಮ್ಮ ಶಾಲೆಯ 160 ವಿದ್ಯಾರ್ಥಿಗಳು ಹಾಗೂ ಗ್ರಾಮದ ನಾಗರಿಕರಿಗಾಗಿ ಉಚಿತವಾಗಿ 11 ದಿನಗಳ ಕಾಲ ಯೋಗ ಶಿಬಿರ ಹಮ್ಮಿಕೊಳ್ಳುತ್ತಿದ್ದಾರೆ.
ಸಮೀಪದ ಗುಂಡೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಕರಿಯಪ್ಪ ಎನ್ನುವವರು ಹೀಗೆ ಸದ್ದಿಲ್ಲದೇ ಯೋಗ ಶಿಕ್ಷಣ ನೀಡುವ ಮೂಲಕ ಇತರ ಶಿಕ್ಷಕರಿಗೆ ಮಾದರಿಯಾಗಿದ್ದಾರೆ.
ಯೋಗದ ಆರಂಭ: ಈ ಶಿಕ್ಷಕರು ಶಾಲೆಗೆ ಬಂದಾಗ ಮಕ್ಕಳು ಕೆಲವು ಸಣ್ಣಪುಟ್ಟ ರೋಗಗಳಿಗೆ ಹಾಗೂ ಕಲಿಕೆಯಲ್ಲಿ ಆಸಕ್ತಿಯಿಲ್ಲದಿರುವುದು ಕಂಡುಬಂತು. ಇದನ್ನು ಸೂಕ್ಷ್ಮವಾಗಿ ಅವಲೋಕನ ಮಾಡಿ ಯೋಗ ಶಿಕ್ಷಣ ನೀಡಬೇಕು ಎಂದು ನಿರ್ಧರಿಸಿದರು. ಅದರಂತೆ ಪ್ರತಿವರ್ಷ ಯೋಗ ದಿನಾಚರಣೆಯ ಮುನ್ನ 11 ದಿನಗಳ ಕಾಲ ಉಚಿತ ಯೋಗ ಶಿಬಿರವನ್ನು ಹಮ್ಮಿಕೊಳ್ಳುತ್ತಿದ್ದಾರೆ.
ಶಿಬಿರಕ್ಕೆ 4 ವರ್ಷ: ಹೀಗೆ ಹಮ್ಮಿಕೊಳ್ಳುತ್ತಿದ್ದ ಇವರ ಶಿಬಿರ 4ನೇ ವರ್ಷಕ್ಕೆ ಕಾಲಿಟ್ಟಿದೆ. ಇದೇ ತಿಂಗಳ 10 ರಿಂದ 21ರವರೆಗೆ ಉಚಿತ ಯೋಗ ತರಗತಿಗಳನ್ನು ಆರಂಭಿಸಿದ್ದು ಬೆಳಗಿನ ಜಾವ 5 ಗಂಟೆಯಿಂದ 7ರವರೆಗೆ ಯೋಗ ತರಗತಿಗಳು ನಡೆಯುತ್ತವೆ. ಇಲ್ಲಿ ಸೂರ್ಯ ನಮಸ್ಕಾರ, ತಾಡಾಸಾನ, ನಟರಾಜಾಸನ, ಅರ್ಧಚಕ್ರಸಾನ, ಕೋನಸಾನ, ತ್ರಿಕೋನಸಾನ, ಪ್ರಾಣಾಯಾಮ ಸೇರಿದಂತೆ ಹಲವು ಯೋಗಾಸನಗಳನ್ನು ಹೇಳಿಕೊಟ್ಟಿದ್ದಾರೆ.
ಒಟ್ಟಿನಲ್ಲಿ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುತ್ತಿರುವ ಯೋಗವನ್ನು ಗ್ರಾಮದ ಜನರಿಗೆ ಹಾಗೂ ಮಕ್ಕಳಿಗೆ ತಲುಪಿಸುತ್ತಿರುವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು