ಕುಷ್ಟಗಿ: ಶಿಕ್ಷಕರ ದಿನಾಚರಣೆ
Team Udayavani, Sep 5, 2022, 10:47 AM IST
ಕುಷ್ಟಗಿ: ಶಿಕ್ಷಕರ ದಿನಾಚರಣೆ ಪ್ರಯುಕ್ತ ಸೋಮವಾರ ಡಾ.ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರ ಮೆರವಣಿಗೆಯಲ್ಲಿ ಶಿಕ್ಷಕರು ಭರ್ಜರಿ ಸ್ಟೆಪ್ ಹಾಕಿ ಸಂಭ್ರಮಿಸಿದರು.
ಇಲ್ಲಿನ ಕಾರ್ಗಿಲ್ ಮಲ್ಲಯ್ಯ ವೃತ್ತದಲ್ಲಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರು ಅವರು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ, ಮೆರವಣಿಗೆಗೆ ವಿಧ್ಯುಕ್ತ ಚಾಲನೆ ನೀಡಿದರು.
ಈ ಮೆರವಣಿಗೆಯಲ್ಲಿ ಹಿರೇಮನ್ನಾಪೂರ ಹೆಜ್ಜೆ ಮೇಳ, ಡೊಳ್ಳು ವಾದ್ಯ ಸಂಭ್ರಮದ ಕಳೆ ಕಟ್ಟಿತ್ತು. ಮೆರವಣಿಗೆ ಮಾರುತಿ ವೃತ್ತ, ಕನಕದಾಸ ವೃತ್ತದ ಮೂಲಕ ಕ್ರೈಸ್ತ ದಿ ಕಿಂಗ್ ಸ್ಕೂಲ್ ಸಭಾಂಗಣದವರೆಗೂ ಸಾಗಿತು. ಮಾರುತಿ ವೃತ್ತ ಮೂಲಕ ಸಾಗುವಾಗ ಡೊಳ್ಳು ವಾದನಕ್ಕೆ ಶಿಕ್ಷಕರು ಕುಣಿದು ಕುಪ್ಪಳಿಸಿದರಲ್ಲದೇ ತಾವೇ ಡೊಳ್ಳು, ತಾಳ ವಾದ್ಯ ನುಡಿಸಿ ಸಂಭ್ರಮಿಸಿದರು. ಶಿಕ್ಷಕರ ಕುಣಿತಕ್ಕೆ ಸುತ್ತುವರಿದ ಇತರೇ ಶಿಕ್ಷಕರು ಚಪ್ಪಾಳೆ, ಹರ್ಷೋದ್ಘಾರದ ಮೂಲಕ ಪ್ರೋತ್ಸಾಹಿಸಿದರು. ಇದೇ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬ್ಳೆ ಸಹ ಹೆಜ್ಜೆ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ