ಮತದಾನ ಬಹಿಷ್ಕಾರಕ್ಕೆ ತಲ್ಲೂರು ಗ್ರಾಮಸ್ಥರ ನಿರ್ಧಾರ
Team Udayavani, Apr 20, 2019, 3:45 PM IST
ಯಲಬುರ್ಗಾ: ರೈತರ ಜಮೀನುಗಳ ಸರ್ವೇ ನಂಬರ್ಗಳು ವ್ಯತ್ಯಾಸವಾಗಿದ್ದು ಸರಿಪಡಿಸಿಕೊಡುವಲ್ಲಿ ಸರ್ವೇ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ತಲ್ಲೂರ ಗ್ರಾಮದ ರೈತರು ಶುಕ್ರವಾರ ಪ್ರತಿಭಟನೆ ಮಾಡುವ ಮೂಲಕ ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದ್ದಾರೆ.
ರೈತರ ಜಮೀನುಗಳ ಸರ್ವೇ ನಂಬರಗಳು ಹೊಂದಾಣಿಕೆಯಾಗದ ಹಿನ್ನೆಲೆಯಲ್ಲಿ ಭೂಮಿ ಖರೀದಿ, ಮಾರಾಟ, ಪರಭಾರೆ ಮಾಡುವುದಕ್ಕೆ ರೈತರಿಗೆ ಸಾಕಷ್ಟು ತೊಂದರೆಯಾಗಿದೆ. ಈ ಸಮಸ್ಯೆ ಹಲವು ದಿನಗಳಿಂದ ಉಂಟಾಗಿದ್ದರೂ ಸರ್ವೇ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ವೇ ನಂಬರ್ಗಳ ವ್ಯತ್ಯಾಸವನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿಕೊಂಡರು ಯಾವುದೇ ಪರಿಹಾರ ಕ್ರಮಗಳನ್ನು ಕೈಗೊಂಡಿಲ್ಲ. ಅಧಿಕಾರಿಗಳ ವಿಳಂಬ ಧೋರಣೆಯನ್ನು ಖಂಡಿಸುವ ಜೊತೆಗೆ ಕೆಲವೇ ದಿನಗಳಲ್ಲಿ ಜರುಗಲಿರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವುದಕ್ಕೆ ಗ್ರಾಮಸ್ಥರೆಲ್ಲರೂ ನಿರ್ಧಾರ ಮಾಡುವ ಜೊತೆಗೆ ತಹಶೀಲ್ದಾರ್ ಕಚೇರಿ ಮುಂದೆ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು. ಕೂಡಲೇ ಅಧಿಕಾರಿಗಳು ವಿಳಂಬ ನೀತಿ ಕೈ ಬಿಟ್ಟು ತ್ವರಿತಗತಿಯಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
ಓಬಳೆಪ್ಪ ಕುಲಕರ್ಣಿ, ಪರಶಪ್ಪ ಬತ್ತಿ, ಚನ್ನಬಸವ ಕುಲಕರ್ಣಿ, ಸುಧೇಂದ್ರರಾವ್ ದೇಸಾಯಿ, ಕಳಕನಗೌಡ ಅಡವಿಗೌಡರ, ಸಂಕ್ರಗೌಡ ಅಡವಿಗೌಡರ, ಹನಮಂತಪ್ಪ ಕುದರಿಕೋಟಗಿ, ಶರಣಗೌಡ ಗೌಡ್ರ, ಭೀಮಪ್ಪ ಬಿಸನಾಳ, ಹನಮಪ್ಪ ಹಳ್ಳಿಗುಡಿ, ಹನಮಂತಪ್ಪ ಬಂಡಿ, ಹನಮಗೌಡ ಗೌಡ್ರ ಲಕ್ಷ ್ಮಣ ವಿಲಾತಿ, ಸಂಗಪ್ಪ ಮಾಟರಂಗಿ ಹಾಗೂ ರೈತರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ