ಆತ್ಮಹತ್ಯೆ ಮಾಡಿಕೊಂಡ ರೈತನ ಹೆಸರಲ್ಲಿ ಇನ್ನೂ ಬರುತ್ತಿದೆ ಬ್ಯಾಂಕ್‌ ನೋಟಿಸ್‌


Team Udayavani, Jun 3, 2019, 3:10 PM IST

kopala-tdy-3..

ಕಾರಟಗಿ: ಮೃತ ಅಮರೇಶ ಸಿದ್ದಾಪುರ ಕುಟುಂಬ.

ಕಾರಟಗಿ: ಬ್ಯಾಂಕ್‌ ಸಾಲ ತೀರಿಸಲಾಗದೇ ರೈತ ಆತ್ಮಹತ್ಯೆ ಮಾಡಿಕೊಂಡು 4 ವರ್ಷಗಳಾದರೂ ಬ್ಯಾಂಕಿನವರಿಂದ ಮೃತನ ಹೆಸರಲ್ಲಿ ಹಾಗೂ ಆತನ ಕುಟುಂಬದವರಿಗೆ ಇನ್ನೂ ನೋಟಿಸ್‌ ಬರುತ್ತಿವೆ.

ಹುಳ್ಕಿಹಾಳ ಗ್ರಾಮದ ರೈತ ಅಮರೇಶ ಸಿದ್ದಾಪುರ 2008ರಲ್ಲಿ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕಿನಲ್ಲಿ ಸುಮಾರು 30 ಸಾವಿರ ರೂ. ಸಾಲ ಮಾಡಿದ್ದ. ಅದರ ಅಸಲು ಹಾಗೂ ಬಡ್ಡಿ ಸೇರಿ 2015ರಲ್ಲಿ 62,325 ರೂ.ಗಳಾಗಿತ್ತು. ಸತತ ಬರ ಹಾಗೂ ಬೆಳೆ ಹಾನಿಯಿಂದ ನೊಂದ ರೈತ ಅಮರೇಶ ಸಾಲದ ಹೊರೆ ತಾಳಲಾರದೇ 2015 ಡಿಸೆಂಬರ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಆದರೆ ರೈತ ಅಮರೇಶನನ್ನೇ ಅವಲಂಬಿಸಿದ ಕುಟುಂಬ ಜೀವನ ಸಾಗಿಸುವುದೇ ದುಸ್ತರವಾಗಿದೆ.

ಮಕ್ಕಳು, ಅತ್ತೆಯನ್ನು ನೋಡಿಕೊಳ್ಳಲು ಕಷ್ಟಪಡುತ್ತಿರುವ ನಾನು ಇದೀಗ ಬ್ಯಾಂಕಿನಿಂದ ನೋಟಿಸ್‌ಗೆ ಕಂಗಾಲಾಗಿದ್ದೇನೆ. ಬ್ಯಾಂಕಿನವರ ಕಿರುಕುಳವನ್ನು ತಾಳಲಾರದೇ ತವರು ಮನೆ ಹಾದಿ ಹಿಡಿದಿದ್ದೆ. ಆದರೆ ಬ್ಯಾಂಕಿನವರು ತವರು ಮನೆಯನ್ನೂ ಪತ್ತೆ ಹಚ್ಚಿ ನನ್ನ ಹೆಸರಿನಲ್ಲಿ ನೋಟಿಸ್‌ ನೀಡಿದ್ದು, ಏನು ಮಾಡಬೇಕೆಂಬುದು ತಿಳಿಯದಾಗಿದೆ ಎಂಬುದು ಮೃತರ ಪತ್ನಿ ಶರಣಮ್ಮ ಅಳಲು.

ಆತ್ಮಹತ್ಯೆಗೆ ಶರಣಾದ ರೈತನ ಹೆಸರಲ್ಲೇ ಬ್ಯಾಂಕ್‌ನವರು ಇದುವರೆಗೂ ನೋಟಿಸ್‌ ನೀಡುತ್ತಿದ್ದಾರೆ. ಸರ್ಕಾರ ರೈತರ ಸಾಲ ಮನ್ನಾ ಮಾಡಿ ಯಾವುದೇ ನೋಟಿಸ್‌ ನೀಡಿ ಕಿರುಕುಳ ನೀಡದಂತೆ ಆದೇಶ ಮಾಡಿದ್ದರೂ ಸಾಲ ಮರುಪಾವತಿಸಲು ನೋಟಿಸ್‌ ಜಾರಿಗೊಳಿಸಿ ಕಿರುಕುಳ ನೀಡುತ್ತಿದ್ದಾರೆಂದು ಎಂದು ಶರಣಮ್ಮರ ಸಹೋದರ ಮಹಾಂತೇಶ ಅಸಹಾಯಕತೆ ವ್ಯಕ್ತಪಡಿಸಿದರು.

ರೈತ ಸಂಘಟನೆಗಳ ಆಗ್ರಹ: ಸರ್ಕಾರ ಶೀಘ್ರವೇ ಇತ್ತ ಕಡೆ ಗಮನ ಹರಿಸಿ ಬ್ಯಾಂಕ್‌ಗಳ ಇಂತಹ ಕ್ರಮಕ್ಕೆ ಕಡಿವಾಣ ಹಾಕಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರೈತ ಸಂಘಟನೆಗಳು ಆಗ್ರಹಿಸಿವೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.