ಅಂಜನಾದ್ರಿ ಮೇಲೆ ಪಕ್ಕದ ರಾಜ್ಯಗಳ ವಕ್ರದೃಷ್ಟಿ

ಟಿಟಿಡಿ ನಂತರ ಮಹಾರಾಷ್ಟ್ರದಿಂದ ವಿವಾದ ಸೃಷ್ಟಿ ; ಹಂಪಿಯಷ್ಟೇ ಪ್ರಸಿದ್ಧಿ ಪಡೆದ ಕಿಷ್ಕಿಂದೆ ಪರ್ವತ

Team Udayavani, Jun 2, 2022, 1:07 PM IST

11

ಕೊಪ್ಪಳ: ಆಂಜನೇಯ ಜನಿಸಿದ ಸ್ಥಳದ ಬಗ್ಗೆ ದಿನಕ್ಕೊಂದು ವಾದ-ವಿವಾದ ಸೃಷ್ಟಿಯಾಗುತ್ತಿವೆ. ಕೊಪ್ಪಳ ಜಿಲ್ಲೆಯ ಕಿಷ್ಕಿಂದೆಯೇ ಹನುಮನು ಜನಿಸಿದ ಸ್ಥಳ ಎನ್ನುವುದು ಹಲವು ಇತಿಹಾಸ ತಜ್ಞರು, ಸಂಶೋಧಕರು, ಧಾರ್ಮಿಕ ಪಂಡಿತರ ಪ್ರಬಲ ವಾದವಾಗಿದ್ದು, ಇದಕ್ಕೆ ಪೂರಕ ದಾಖಲೆಗಳೂ ಇವೆ. ಆದರೆ ಟಿಟಿಡಿಯ ವಾದದ ನಂತರ ಮಹಾರಾಷ್ಟ್ರವೂ ಖ್ಯಾತೆ ಶುರು ಮಾಡಿದೆ. ಇಲ್ಲಿನ ಪ್ರವಾಸೋದ್ಯಮ, ವ್ಯಾಪಾರೋದ್ಯಮದ ಮೇಲೆಯೇ ಎಲ್ಲರ ಕಣ್ಣು ಬಿದ್ದಿದ್ದರಿಂದ ಇಂಥ ವಿತಂಡ ವಾದ ಸೃಷ್ಟಿಸಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ.

ಕಿಷ್ಕಿಂದೆಯ ಪರ್ವತವು ಭಾರತೀಯರಿಗೆ ಅತ್ಯಂತ ಪವಿತ್ರ, ಶ್ರದ್ಧಾ ಭಕ್ತಿಯ ತಾಣವಾಗಿದೆ. ಪ್ರತಿವರ್ಷ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸಿ ಬೆಟ್ಟ ಹತ್ತಿ ಮಾರುತನ ದರ್ಶನ ಪಡೆದು ಪುನೀತರಾಗುತ್ತಾರೆ. ಅದರಲ್ಲೂ ಉತ್ತರ ಭಾರತದಿಂದಲೇ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸುತ್ತಾರೆ. ಇನ್ನು ವಿಶ್ವದ ನಾನಾ ದೇಶಗಳ ಇತಿಹಾಸ ತಜ್ಞರು, ಸಂಶೋಧಕರು, ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು ಸೇರಿದಂತೆ ಹಲವಾರು ಜನ ಅಂಜನಾದ್ರಿಗೆ ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ. ಅಂಜನಾದ್ರಿ ದೇಶ, ವಿದೇಶಿಗರ ಅಚ್ಚುಮೆಚ್ಚಿನ ತಾಣವಾಗಿದೆ. ಇದು ಕೆಲವರಿಗೆ ಕಣ್ಣು ಕುಕ್ಕಿಸಿದೆ. ಹೀಗಾಗಿ ಅಂಜನಾದ್ರಿಯ ಬಗ್ಗೆ ಇಲ್ಲದ ಸಲ್ಲದ ವಾದ ಮಾಡಿ ಗೊಂದಲ ಸೃಷ್ಟಿಸಲಾಗುತ್ತಿದೆ ಎನ್ನುತ್ತಾರೆ ಸ್ಥಳೀಯ ಇತಿಹಾಸ ತಜ್ಞರು.

ವ್ಯಾಪಾರೋದ್ಯಮ, ವ್ಯವಹಾರದ ದೃಷ್ಟಿ: ವಿಜಯನಗರ ಸಾಮ್ರಾಜ್ಯದ ಹಂಪಿಗೆ ಬರುವಷ್ಟು ಜನ ಅಂಜನಾದ್ರಿಗೆ ಪ್ರತಿವರ್ಷ ಆಗಮಿಸುತ್ತಿದ್ದಾರೆ. ದಕ್ಷಿಣ ಭಾರತದ ಅಂಜನಾದ್ರಿಯು ಆಂಜನೇಯನ ಜನ್ಮ ಸ್ಥಳ ಎನ್ನುವ ಕುರಿತು ಇತಿಹಾಸ, ಪುರಾವೆಗಳಲ್ಲಿ ಹಲವು ಸಾಕ್ಷ್ಯಗಳಿವೆ. ಕೆಲ ವರ್ಷಗಳಿಂದೀಚೆಗೆ ಕರ್ನಾಟಕ ಸರ್ಕಾರವೇ ಈ ದೇವಸ್ಥಾನವನ್ನು ಮುಜರಾಯಿ ವ್ಯಾಪ್ತಿಗೆ ತಂದಿದ್ದು, ಪ್ರತಿವರ್ಷವೂ ಕೋಟಿಗೂ ಮೀರಿ ಆದಾಯ ಬಂದಿದೆ. ಹೀಗಾಗಿ ಎಲ್ಲರ ಕಣ್ಣು ಕರ್ನಾಟಕದತ್ತ ನೆಟ್ಟಿದೆ. ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆಯನ್ನು ನೋಡಿ, ಸುಮ್ಮನೆ ಗೊಂದಲ ಸೃಷ್ಟಿಸಿ ಇಲ್ಲಿನ ಪ್ರವಾಸೋದ್ಯಮಕ್ಕೆ ಪೆಟ್ಟು ನೀಡಬೇಕು ಎನ್ನುವ ಹುನ್ನಾರ ನಡೆಯುತ್ತಿದೆ.

ಟಿಟಿಡಿ, ಮಹಾರಾಷ್ಟ್ರದಿಂದ ಗೊಂದಲ ಸೃಷ್ಟಿ: ತಿರುಪತಿಯೇ ಹನುಮನ ಜನ್ಮ ಸ್ಥಳ ಎನ್ನುವ ವಾದ ಮಾಡಿದ್ದ ಟಿಟಿಡಿಯು ಇಲ್ಲಿನ ದಾಖಲೆಗಳನ್ನು ನೋಡಿಯೂ ಸುಮ್ಮನೆ ವಾದಕ್ಕೆ ಇಳಿದಿತ್ತು. ಈಗ ಮಹಾರಾಷ್ಟ್ರದಲ್ಲಿ ಹನುಮಂತನ ಜನ್ಮ ಸ್ಥಳ ಯಾವುದು ಎನ್ನುವ ಧರ್ಮ ಸಂಸದ್‌ನಲ್ಲಿ ಚರ್ಚೆ ಶುರು ಮಾಡಲಾಗಿದೆ. ಆರಂಭದಿಂದಲೂ ದೇಶ, ವಿದೇಶಿಗರು ಅಂಜಿನಾದ್ರಿಯೇ ಹನುಮನ ಜನ್ಮ ಸ್ಥಳ ಎನ್ನುವುದು ಗೊತ್ತಿದೆ. ಅವರಲ್ಲಿ ಇಂತಹ ವಿಷಯಗಳ ಮೂಲಕ ಗೊಂದಲ ಮೂಡಿಸಲು ಹುನ್ನಾರ ನಡೆಸಿದೆ ಎನ್ನಲಾಗುತ್ತಿದೆ.

ಸರ್ಕಾರದ ಘೋಷಣೆ ಬಾಕಿ: ರಾಜ್ಯ ಸರ್ಕಾರವೇ ಕೆಲವು ತಿಂಗಳ ಹಿಂದಷ್ಟೇ ಕಿಷ್ಕಿಂದೆಯ ಹನುಮನ ಜನ್ಮ ಸ್ಥಳದ ದಾಖಲೆಗಳ ಸಂಗ್ರಹಕ್ಕೆ ಸಿದ್ಧತೆ ನಡೆಸಿ ಸಭೆಯನ್ನೂ ಕರೆಯಲಾಗಿತ್ತು. ಆದರೆ ನಾನಾ ಕಾರಣಕ್ಕೆ ಮುಂದೂಡಲಾಯಿತು. ಆದರೆ ಅಂಜನಾದ್ರಿ ಅಭಿವೃದ್ಧಿಗೆ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಆಸಕ್ತಿ ತೋರಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 100 ಕೋಟಿ ಘೋಷಣೆ ಮಾಡಿದ್ದಾರೆ. ಈ ಹಿಂದೆ ಮೂಲಭೂತ ಸೌಕರ್ಯಕ್ಕೆ ಸರ್ಕಾರವೇ 20 ಕೋಟಿ ರೂ. ಅನುದಾನ ಮಂಜೂರು ಮಾಡಿತ್ತು. ಕರ್ನಾಟಕದ ಅಂಜನಾದ್ರಿಯೇ ಹನುಮನ ಜನ್ಮ ಸ್ಥಳ ಎಂದು ಘೋಷಣೆ ಮಾಡೋದೊಂದೇ ಬಾಕಿಯಿದೆ.

ಅಂಜನಾದ್ರಿ ಅಭಿವೃದ್ಧಿಗೂ ಮಾಸ್ಟರ್‌ ಪ್ಲಾನ್‌: ಅಂಜನಾದ್ರಿಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿರುವ ಸರ್ಕಾರವು ಕಿಷ್ಕಿಂದೆಗೆ ವಿಶೇಷ ಮಾಸ್ಟರ್‌ ಪ್ಲಾನ್‌ ಮಾಡುವ ಸಿದ್ಧತೆಯಲ್ಲಿದೆ. ಬೆಟ್ಟದ ಸುತ್ತಲೂ ಹನುಮ ಪಥ ನಿರ್ಮಾಣ, ರಾಮಾಯಣ ಪಾರ್ಕ್‌, ಇತಿಹಾಸದ ನಾಮಫಲಕಗಳ ಅಳವಡಿಕೆ ಮಾಡುವುದು ಸೇರಿದಂತೆ ರೋಪ್‌ವೇ, ರಸ್ತೆಗಳ ಅಗಲೀಕರಣ, ಪ್ರವಾಸಿ ಮಂದಿರ, ಶೌಚಾಲಯ, ಕುಡಿಯುವ ನೀರು ಸೇರಿದಂತೆ ವಿವಿಧ ಅಭಿವೃದ್ಧಿಗೆ ಜಿಲ್ಲಾಡಳಿತ ಮಾಸ್ಟರ್‌ ಪ್ಲ್ರಾನ್‌ ತಯಾರಿಸಿದ್ದು, ಸರ್ಕಾರದ ಮಟ್ಟದಲ್ಲಿ ಸಮ್ಮತಿ ದೊರೆಯಬೇಕಿದೆ.

ಆಂಜನೇಯನ ಹೆಸರಲ್ಲಿ ಟಿಟಿಡಿ ಹಾಗೂ ಮಹಾರಾಷ್ಟ್ರ ಬಿಜಿನೆಸ್‌ ಮಾಡಲು ಹೊರಟಿವೆ. ಕಿಷ್ಕಿಂದೆಯೇ ಹನುಮನು ಜನಿಸಿದ ಸ್ಥಳವಾಗಿದೆ. ನಮ್ಮ ಇತಿಹಾಸ ತಜ್ಞರ ಬಳಿ ಹಲವು ದಾಖಲೆಗಳಿವೆ. ನಾವೆಲ್ಲ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಅ ಧಿಕೃತ ಘೋಷಣೆಗೆ ಒತ್ತಾಯಿಸುತ್ತೇವೆ. ನಮ್ಮಲ್ಲಿನ ದಾಖಲೆಗಳನ್ನು ಸರ್ಕಾರಕ್ಕೆ ಕೊಡುತ್ತೇವೆ. ಕೇಂದ್ರ ಸರ್ಕಾರವು ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯೂ ಇದೆ. ಟಿಟಿಡಿ ಹಾಗೂ ಮಹಾರಾಷ್ಟ್ರ ಹನುಮಂತನ ಹೆಸರಲ್ಲಿ ವ್ಯವಹಾರ ಮಾಡಿ, ಇಲ್ಲಿನ ಪ್ರವಾಸೋದ್ಯಮ ಹಾಗೂ ವ್ಯಾಪಾರೋದ್ಯಮಕ್ಕೆ ಪೆಟ್ಟು ನೀಡಲು ಇಂತಹ ವಿವಾದ ಸೃಷ್ಟಿ ಮಾಡುತ್ತಿವೆ. ಇದನ್ನು ನಾವು ಖಂಡಿಸುತ್ತೇವೆ. -ಸಂಗಣ್ಣ ಕರಡಿ, ಸಂಸದ

ಈಚೆಗೆ ಅಂಜನಾದ್ರಿಗೆ ಬರುವ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಉತ್ತರ ಭಾರತದಲ್ಲಿ ಅಯೋಧ್ಯೆ ದರ್ಶನದ ನಂತರ ದಕ್ಷಿಣ ಭಾರತದಲ್ಲಿ ಅಂಜನಾದ್ರಿ ದರ್ಶನ ಮಾಡಬೇಕು ಎನ್ನುವ ನಂಬಿಕೆಯಿದೆ. ಹಾಗಾಗಿ ಮುಂದಿನ ದಿನದಲ್ಲಿ ಅಂಜನಾದ್ರಿ ಅಭಿವೃದ್ಧಿಯಾಗಲಿದೆ. ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಅವರನ್ನು ತಮ್ಮತ್ತ ಸೆಳೆಯಬೇಕು ಎನ್ನುವ ತಂತ್ರದಿಂದ ಮಹಾರಾಷ್ಟ್ರ ಹಾಗೂ ಟಿಟಿಡಿ ಇಂತಹ ಗೊಂದಲ ಸೃಷ್ಟಿ ಮಾಡುತ್ತಿವೆ. ಅವರಲ್ಲಿ ಚಾರಿತ್ರಿಕ ಪುರಾವೆಗಳಿಲ್ಲ. ಯಾವ ಹಿನ್ನೆಲೆಯೂ ಇಲ್ಲ. ಕಿಷ್ಕಿಂದೆಯ ಕುರುಹುಗಳೂ ಇಲ್ಲ. ಕೇವಲ ಐತಿಹ್ಯ ಆಧಾರದಲ್ಲಿ ಮಾತನಾಡುತ್ತಿದ್ದಾರೆ. ನಿಜವಾದ ಅಂಜನಾದ್ರಿ ಕರ್ನಾಟಕದ ಕೊಪ್ಪಳ ಜಿಲ್ಲೆಯಲ್ಲಿದೆ. ಪ್ರವಾಸಿಗರನ್ನು ತಮ್ಮತ್ತ ಸೆಳೆಯುವ ಹುನ್ನಾರ ನಡೆದಿದೆ. ಸರ್ಕಾರ ಬೇಗನೇ ಇಲ್ಲಿನ ಅಂಜನಾದ್ರಿಯೇ ಹನುಮನ ಜನ್ಮ ಸ್ಥಳ ಎನ್ನುವುದನ್ನು ಘೋಷಣೆ ಮಾಡಿದರೆ ಇಂತಹ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ. –ಡಾ| ಶರಣಬಸಪ್ಪ ಕೋಲ್ಕಾರ, ಇತಿಹಾಸ ಸಂಶೋಧಕ                  

-ದತ್ತು ಕಮ್ಮಾರ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.