ವಿದ್ಯಾರ್ಥಿಗಳ ಸಾವು: ಎಸಿ ನೇತೃತ್ವದ ತನಿಖೆ
Team Udayavani, Aug 23, 2019, 12:51 PM IST
ಕೊಪ್ಪಳ: ವಿದ್ಯುತ್ ಅವಘಡದಲ್ಲಿ ಮೃತಪಟ್ಟ ವಿದ್ಯಾರ್ಥಿ ಮನೆಗೆ ಪ್ರಗತಿಪರ ಒಕ್ಕೂಟದ ತಂಡ ಭೇಟಿ ನೀಡಿ ಸಾಂತ್ವನ ಹೇಳಿತು.
ಕೊಪ್ಪಳ: ಐವರು ವಿದ್ಯಾರ್ಥಿಗಳಿಗೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಪ್ರಕರಣವನ್ನು ಶೀಘ್ರ ತನಿಖೆ ನಡೆಸಿ ರಾಜ್ಯ ಸರ್ಕಾರಕ್ಕೆ ವರದಿ ನೀಡುವಂತೆ ಮುಖ್ಯಮಂತ್ರಿಗಳ ಕಚೇರಿಯಿಂದ ಆದೇಶ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸುನೀಲ್ ಕುಮಾರ ಅವರು ಎಸಿ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.
ಕೊಪ್ಪಳ ಡಿ. ದೇವರಾಜ ಅರಸು ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಇತ್ತೀಚೆಗೆ ಧ್ವಜಾರೋಹಣ ನೆರವೇರಿಸಿದ ಕಂಬವನ್ನು ತೆರವು ಮಾಡಲು ಐವರು ವಿದ್ಯಾರ್ಥಿಗಳು ಮುಂದಾಗಿ ದ್ದರು. ಧ್ವಜಸ್ತಂಬ ವಿದ್ಯುತ್ ತಂತಿಗೆ ಸ್ಪರ್ಶಿಸಿ ಐವರು ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿದ್ದರು. ವಿದ್ಯಾರ್ಥಿಗಳ ಸಾವು ರಾಜ್ಯ ಸೇರಿದಂತೆ ದೇಶದಲ್ಲಿ ಸದ್ದು ಮಾಡಿತ್ತು. ಹಾಸ್ಟೆಲ್ಗಳ ದುಸ್ಥಿತಿ, ವಿದ್ಯಾರ್ಥಿಗಳಿಗೆ ಭದ್ರತೆ ಇಲ್ಲದೇ ಇರುವ ಕುರಿತು ರಾಜ್ಯವ್ಯಾಪಿ ಚರ್ಚೆಯಾಗಿತ್ತು. ಇದರಿಂದ ರಾಜ್ಯ ಸರ್ಕಾರವು ಎಚ್ಚೆತ್ತು ಪ್ರಕರಣ ತನಿಖೆ ನಡೆಸುವ ಜೊತೆಗೆ ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಹಣವನ್ನು ಜಿಲ್ಲಾಧಿಕಾರಿ ಪಿಡಿ ಖಾತೆಯಿಂದ ಅಂದೇ ಹಸ್ತಾಂತರ ಮಾಡಲಾಯಿತು.
ಅಲ್ಲದೇ, ಮುಖ್ಯಮಂತ್ರಿಗಳ ಕಚೇರಿಯಿಂದ ಜಿಲ್ಲಾಧಿಕಾರಿ ಸುನೀಲ್ ಕುಮಾರ ಅವರಿಗೆ ಸೂಚನೆ ನೀಡಿ, ಕೇವಲ 10 ದಿನದಲ್ಲಿ ಮೃತ ವಿದ್ಯಾರ್ಥಿಗಳ ಸಾವಿನ ಪ್ರಕರಣದ ಸಮಗ್ರ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಆದೇಶ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರು ಎಸಿ ಸಿ.ಡಿ. ಗೀತಾ ನೇತೃತ್ವದ ಸಮಿತಿ ಮಾಡಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ. ಎಸಿ ವರದಿ ಹಾಗೂ ಜೆಸ್ಕಾಂನಿಂದ ಬಂದ ವರದಿ ಬಂದ ಬಳಿಕ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?