ಶಿಥಿಲಗೊಂಡಿದೆ ಸಿದ್ದಾಪುರ ಗ್ರಂಥಾಲಯ


Team Udayavani, Oct 22, 2019, 2:13 PM IST

kopala-tdy-1

ಸಿದ್ದಾಪುರ: ಶಿಕ್ಷಣದಲ್ಲಿ ಗ್ರಂಥಾಲಯ ತನ್ನದೇ ಆದ ಮಹತ್ವ ಪಡೆದಿದೆ. ಮನುಷ್ಯನ ಬದುಕನ್ನು ಉಜ್ವಲಗೊಳಿಸುವ ಶಕ್ತಿ ಗ್ರಂಥಾಲಯಕ್ಕಿದೆ. ಉತ್ತಮ ವ್ಯಕ್ತಿಯಾಗಿ, ಶಕ್ತಿಯಾಗಿ ಬೆಳೆಯಲು ಮತ್ತು ಜ್ಞಾನವನ್ನು ಕಟ್ಟಿಕೊಳ್ಳುವುದರ ಜೊತೆಗೆ ಬದುಕಿನ ದಾರಿಗಳನ್ನು ಹುಡುಕಲು ಗ್ರಂಥಾಲಯಗಳು ಅವಶ್ಯ.

ಆದರೆ ಇದಕ್ಕೆ ತದ್ವಿರುದ್ಧವಾಗಿದೆ ಸಿದ್ದಾಪುರ ಗ್ರಾಮ ಪಂಚಾಯತ್‌ ಆವರಣದಲ್ಲಿರುವ ಸಾರ್ವಜನಿಕ ಗ್ರಂಥಾಲಯ. ಇದು ಹೆಸರಿಗಷ್ಟೇ ಎನ್ನುವಂತಾಗಿದ್ದು, ಈ ಗ್ರಂಥಾಲಯದಲ್ಲಿ ಓದುಗರಿಗೆ ಕೆವಲ ಎರಡು ಪತ್ರಿಕೆ, ಕೆಲವೊಂದಿಷ್ಟು ಪುಸ್ತಕ ಬಿಟ್ಟರೆ, ಜ್ಞಾನಾರ್ಜನೆಗೆ ಯಾವುದೂ ಪುಸ್ತಕ ಸಿಗುವುದೇ ಇಲ್ಲ.

ಇದು ಸಿದ್ದಾಪುರ ಹೊಬಳಿ ಕೇಂದ್ರ ಸ್ಥಾನವಗಿರುವ ಸುಮಾರು 20 ಸಾವಿರ ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಚಿಕ್ಕ ಕೊಠಡಿಯಲ್ಲಿರುವ ಸಾರ್ವಜನಿಕ ಗ್ರಂಥಾಲಯದ ಸ್ಥಿತಿ ಗತಿ. ಕಳೆದ 30 ವರ್ಷಗಳ ಹಿಂದೆ 10*20 ಅಳತೆಯ ಚಿಕ್ಕ ಕೊಠಡಿಯಲ್ಲಿ ಗ್ರಂಥಾಲಯ ಆರಂಭವಾಗಿದ್ದು. ಮೂರು ದಶಕ ಕಳೆದರು ಇಲ್ಲಿಯವರೆಗೂ ಸುಣ್ಣಬಣ್ಣವನ್ನೇ ಕಂಡಿಲ್ಲ.

ಹಳೆಯ ಕಟ್ಟಡ: ಕಟ್ಟಡದ ಕೆಲ ಭಾಗದ ಗೊಡೆಗಳಲ್ಲಿಯ ಕಲ್ಲುಗಳು ಆಗಾಗ ಕಿತ್ತು ಬರುತ್ತಿದ್ದು, ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆ ತಲುಪಿದೆ. ಈಗೋ, ಆಗೋ ಬೀಳುವ ಹಂತದಲ್ಲಿದ್ದರೂ ಓದುಗರು ಜೀವ ಭಯದಲ್ಲೇ ಇಲ್ಲಿ ಕುಳಿತುಕೊಳ್ಳುವ ದುಸ್ಥಿತಿ ಬಂದಿದೆ. ಮಳೆಗೆ ಪುಸ್ತಕ ಹಾಳು: ಗ್ರಂಥಾಲಯದ ಮೇಲ್ಛಾವಣಿ ಸಿಮೆಂಟ್‌ ಶೀಟ್‌ ಹೊಂದಿದ್ದು, ಬಹುತೇಕ ಸಿಮೆಂಟ್‌ ಶೀಟ್‌ಗಳು ಒಡೆದು ಹೋಗಿರುವ ಪರಿಣಾಮ ಮಳೆ ಬಂದಾಗ ಗ್ರಂಥಾಲಯದೊಳಗೆ ನೀರು ತುಂಬುತ್ತದೆ. ಮಳೆ ನೀರಿನಿಂದಾಗಿ ಸಾವಿರಾರು ಪುಸ್ತಕಗಳು ನೀರ ನೆನೆದು ಹಾಳಾಗಿವೆ. ಜ್

ಮೂಲ ಸೌಕರ್ಯ ವಂಚಿತ: ಗ್ರಂಥಾಲಯದಲ್ಲಿ ಕುಳಿತುಕೊಳ್ಳುವುದಕ್ಕೆ ಸರಿಯಾದ ಆಸನ ವ್ಯವಸ್ಥೆ ಇಲ್ಲ, ಫ್ಯಾನ್‌, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್‌ ಸಂಪರ್ಕ ಇಲ್ಲ. ಬರುವ ಎರಡು ಪತ್ರಿಕೆಗಳಿಗೆ ಜನರೂ ಸರತಿಯಲ್ಲಿ ನಿಂತು ಓದಿಕೊಳ್ಳಬೇಕು. ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಅನುಕೂಲವಾಗುವಂತಹ ಎಲ್ಲ ಕನ್ನಡ, ಆಂಗ್ಲ ಪತ್ರಿಕೆಗಳು ಮತ್ತು ಪುಸ್ತಕಗಳು ಇಲ್ಲಿ ಲಭ್ಯವಿಲ್ಲ. ಆದ ಕಾರಣ ವಿದ್ಯಾರ್ಥಿಗಳು ಈ ಗ್ರಂಥಾಲಯದತ್ತ ತಲೆಯೂ ಹಾಕಲ್ಲ. ಅಷ್ಟೇ ಅಲ್ಲದೇ ಈಗಿರುವ ಪುಸ್ತಕಗಳನ್ನು ಇಟ್ಟುಕೊಳ್ಳುವುದಕ್ಕೆ ಜಾಗವಿಲ್ಲ. ದೊಡ್ಡದಾದ ರಟ್ಟಿನ ಬಾಕ್ಸ್‌ನಲ್ಲಿ ಅಥವಾ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಡಲಾಗಿದೆ. ಓದುಗರು ಸಂತೆಯಲ್ಲಿ ಯಾವ ರೀತಿ ಕಾಯಿಗಡ್ಡೆ ಕೊಳ್ಳುತ್ತಾರೋ ಅದೆ ರೀತಿಯಲ್ಲಿ ರಟ್ಟಿನ ಬಾಕ್ಸ್‌ಗಳಲ್ಲಿರುವ ಮತ್ತು ಪ್ಲಾಸ್ಟಿಕ್‌ ಚೀಲದಲ್ಲಿರುವ ಪುಸ್ತಕಗಳನ್ನು ಆಯ್ದುಕೊಂಡು ಓದಬೇಕಾದ ಅನಿವಾರ್ಯತೆ ಇದೆ.

ನಮಗೆ ಪ್ರತಿಕೆಗೆ ಅಂತಾ ತಿಂಗಳಿಗೆ 400 ರೂ. ಬರುತ್ತೆ ಅಷ್ಟೇ, ಮೊದಲಿಗೆ 3 ಪತ್ರಿಕೆ ಬರುತ್ತಿದ್ದವು ಈಗ ಎರಡು ಪತ್ರಿಕೆ ಅಷ್ಟೇ

ಬರುತ್ತಿವೆ. ವರ್ಷಕ್ಕೊಮ್ಮೆ ನೂರಾರು ಜನರಲ್‌ ನಾಲೆಜ್ ಪುಸ್ತಗಳು ಬರುತ್ತವೆ. ಅಷ್ಟು ಬಿಟ್ರೆ ಮತ್ಯಾವುದೇ ಪುಸ್ತಕ ಬರುವುದಿಲ್ಲ. ಪುಸ್ತಗಳನ್ನು ಇಟ್ಟುಕೊಳ್ಳುವುಕ್ಕೆ ಜಾಗವಿಲ್ಲ. ಖಾಜಪ್ಪ, ಗ್ರಂಥಪಾಲಕ

 

-ಸಿದ್ದನಗೌಡ ಹೊಸಮನಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.