ಇಡೀ ರಾಜ್ಯವೇ ನನ್ನ ಕ್ಷೇತ್ರ, ಪಕ್ಷ ಹೇಳಿದರೆ ಸ್ಪರ್ಧೆ ಮಾಡುತ್ತೇನೆ: ವಿಜಯೇಂದ್ರ
Team Udayavani, Jul 25, 2022, 12:44 PM IST
ಕೊಪ್ಪಳ: ಜನ ಬಯಸಿದರೆ ಪಕ್ಷ ನನಗೆ ಟಿಕೆಟ್ ಕೊಟ್ಟರೆ ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಅವರು ಹೇಳಿದರು.
ಕೊಪ್ಪಳ ದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಶಿಕಾರಿಪುರದೊಂದಿಗೆ ನಮ್ಮ ತಂದೆ ಅವಿನಾಭಾವ ಸಂಬಂಧ ಹೊಂದಿದ್ದಾರೆ. ಪಕ್ಷ ಸೂಕ್ತ ಸಮಯದಲ್ಲಿ ಸೂಕ್ತರಾದವರನ್ನು ಆಯ್ಕೆ ಮಾಡುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷ. ಬಿ ಎಸ್ ಯಡಿಯೂರಪ್ಪ ಅವರು ನಲವತ್ತು ವರ್ಷ ಪಕ್ಷಕ್ಕಾಗಿ ದುಡಿದಿದ್ದಾರೆ. ಪಕ್ಷವೂ ಅವರಿಗೆ ಎಲ್ಲ ಸ್ಥಾನಮಾನ ನೀಡಿದೆ. ನನ್ನ ಕ್ಷೇತ್ರದ ಜನರ ಅಭಿಪ್ರಾಯದಂತೆ ನನಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದಾಗಿ ಹೇಳಿದ್ದಾರೆ. ಹೈಕಮಾಂಡ್ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದರು.
ಜನರು ಬಯಸಿದಲ್ಲಿ ಹಾಗೂ ಪಕ್ಷ ಟಿಕೆಟ್ ನೀಡಿದಲ್ಲಿ ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವೆ. ಶಿಕಾರಿಪುರದಿಂದಲೇ ಸ್ಪರ್ಧಿಸಬೇಕೆಂದಿಲ್ಲ. ಇಡೀ ರಾಜ್ಯವೇ ನನ್ನ ಕ್ಷೇತ್ರ ಎಂದರು. ಚುನಾವಣೆ ಇನ್ನು ಎಂಟು ತಿಂಗಳಿದೆ. ಈಗಲೇ ಕೈ ನಾಯಕರು ಸಿಎಂ ಗಾದಿಗಾಗಿ ಕಿತ್ತಾಡುತ್ತಿರುವುದು ಹಾಸ್ಯಾಸ್ಪದ. ಅವರು ಕಿತ್ತಾಡಿಕೊಳ್ಳಲಿ. ಅದರಿಂದ ಬಿಜೆಪಿಗೆ ಲಾಭವಾಗುತ್ತದೆ ಎಂಬುದು ಸುಳ್ಳು. ನಮ್ಮ ಸಂಘಟನೆ ನಿರಂತರವಾಗಿದೆ ಎಂದರು.
ಇದನ್ನೂ ಓದಿ:ಶಿವಮೊಗ್ಗ ಕಾಲೇಜು ಮುಂದೆಯೇ ವಿದ್ಯಾರ್ಥಿಗಳ ತೂರಾಟ: ವೈರಲ್ ಆಯ್ತು ವಿಡಿಯೋ
ಅಭಿನವ ಬಸವಣ್ಣ ಎಂದು ಖ್ಯಾತರಾದ ಗವಿಶ್ರೀಗಳ ದರ್ಶನ ಪಡೆಯಲು ಕೊಪ್ಪಳಕ್ಕೆ ಬಂದಿರುವೆ. ಇಲ್ಲಿ ಬಂದರೆ ಒಂದು ಸ್ಪೂರ್ತಿ ಸಿಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ