ಇನ್ನೂ ಶುರುವಾಗದ ಪ್ರಥಮ ಪಿಯು ತರಗತಿ


Team Udayavani, Jan 23, 2021, 6:41 PM IST

The first PU class that has not yet started

ಗಂಗಾವತಿ: ಕೋವಿಡ್ ಮಹಾಮಾರಿಯಿಂದಾಗಿ ಕಳೆದ 9 ತಿಂಗಳಿಂದ ಮುಚ್ಚಲ್ಪಟ್ಟಿದ್ದ ಶಾಲಾ-ಕಾಲೇಜುಗಳು ಇದೀಗ ಆರಂಭವಾಗಿವೆ. 10ನೇ ತರಗತಿ ಮತ್ತು ಪಿಯು ದ್ವಿತೀಯ ತರಗತಿಗಳು ಸಾಮಾಜಿಕ ಅಂತರ ಹಾಗೂ ಮಾರ್ಗಸೂಚಿಯಂತೆ ಆರಂಭವಾಗಿವೆ. ಪ್ರಥಮ ಪಿಯು ತರಗತಿ ಆರಂಭ ಮಾಡಲು ಪಿಯು ಬೋರ್ಡ್‌ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಇದರಿಂದ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳು ಗೊಂದಲದಲ್ಲಿದ್ದು, ಸರ್ಕಾರ ಕೂಡಲೇ ತರಗತಿ ಆರಂಭಿಸಬೇಕು ಎಂಬ ಕೂಗು ಕೇಳಿ ಬರುತ್ತಿದೆ.

ಈಗಾಗಲೇ 10 ಮತ್ತು ದ್ವಿತೀಯ ಪಿಯು ತರಗತಿ ಹಾಗೂ 6-9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮನ ಯೋಜನೆಯಂತೆ ತರಗತಿಗಳನ್ನು ಶಿಕ್ಷಣ ಇಲಾಖೆ ಆರಂಭ ಮಾಡಿದ್ದು, ತರಗತಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಅಲ್ಲೊಂದು

ಇಲ್ಲೊಂದು ಕೋವಿಡ್ ಪ್ರಕರಣಗಳು ಕಂಡು ಬರುತ್ತಿದ್ದರೂ ಪ್ರಥಮ ಪಿಯು ತರಗತಿ ಆರಂಭಿಸಲು ಪಿಯು ಬೋರ್ಡ್‌ ಆಸಕ್ತಿ ತೋರುತ್ತಿಲ್ಲ. ಇತ್ತೀಚೆಗೆ ಬೆಂಗಳೂರಿನಲ್ಲಿ ಪಿಯು ಬೋರ್ಡ್‌ ಕಚೇರಿಯಲ್ಲಿ ರಾಜ್ಯದ ಪಿಯು ಕಾಲೇಜುಗಳ ಪ್ರಾಚಾರ್ಯ ಸಭೆಯನ್ನು ಕರೆದು ಪ್ರಥಮ ಪಿಯು ತರಗತಿ ಆರಂಭ ಮಾಡುವ ಕುರಿತು ಅಭಿಪ್ರಾಯವನ್ನು ಇಲಾಖೆ ಕೇಳಿದ್ದು, ಸಭೆಯಲ್ಲಿ ಶೇ.80ರಷ್ಟು ಪ್ರಾಚಾರ್ಯರು ತರಗತಿ ಆರಂಭ ಮಾಡುವಂತೆ ಸಲಹೆ ನೀಡಿದ್ದಾರೆ.

ಕತ್ತಲಿನಲ್ಲಿ ಶೈಕ್ಷಣಿಕ ಬದುಕು: ಕೊರೊನಾ ಮಹಾಮಾರಿಯಿಂದ ಕಾಲೇಜುಗಳು ಬಂದ್‌ ಆಗಿದ್ದರಿಂದ ಶೈಕ್ಷಣಿಕ ವರ್ಷ ತಡವಾಗಿದೆ. ಪಠ್ಯ ಕ್ರಮವನ್ನು ಕಡಿತಗೊಳಿಸಲು ಪಿಯು ಬೋರ್ಡ್‌ ನಿರ್ಧರಿಸಿದ್ದು, ಜನವರಿ ತಿಂಗಳು ಮುಗಿಯುತ್ತಾ ಬಂದರೂ ಸೂಕ್ತ ನಿರ್ಧಾರ ಕೈಗೊಳ್ಳದಿರುವುದು ಪ್ರಥಮ ಪಿಯು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಕತ್ತಲಿನಲ್ಲಿ ಕಳೆಯುವಂತಾಗಿದೆ. ಪಿಯು ನಂತರ ವಿದ್ಯಾಭ್ಯಾಸಕ್ಕೆ ಪ್ರಥಮ ವರ್ಷದ ಪಿಯು ಪಠ್ಯಕ್ರಮ ಅಗತ್ಯವಾಗಿದ್ದು, ಸರ್ಕಾರ ಇದುವರೆಗೂ ಯಾವುದೇ ನಿರ್ಧಾರಕ್ಕೆ ಬಾರದಿರುವುದು ವಿದ್ಯಾರ್ಥಿಗಳು ಮತ್ತು ಪಾಲಕರ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ರಸ್ತೆ ಸುರಕ್ಷತಾ ಸಪ್ತಾಹ-ಜಾಥಾ

ಸರ್ಕಾರದಿಂದ ತಾರತಮ್ಯ ನೀತಿ: 10ನೇ ತರಗತಿ ನಡೆಸಲು ಆದೇಶ ಮಾಡಿದ ಶಿಕ್ಷಣ ಇಲಾಖೆ ವಯಸ್ಸಿನಲ್ಲಿ ಹಿರಿಯರಾದ ಪ್ರಥಮ ಪಿಯು ವಿದ್ಯಾರ್ಥಿಗಳ ತರಗತಿ ಆರಂಭಿಸಲು ಹಿಂದೇಟು ಹಾಕುತ್ತಿದೆ. ರಾಜ್ಯದಲ್ಲಿ ಈಗಾಗಲೇ ಖಾಸಗಿ ಕಾಲೇಜುಗಳು ಪ್ರಥಮ ಪಿಯು ತರಗತಿಗಳನ್ನು ಕಳೆದ ಮೂರು ವಾರಗಳಹಿಂದೆ ಆರಂಭ ಮಾಡಿವೆ. ಸರ್ಕಾರ ಪಪೂ ಕಾಲೇಜುಗಳಲ್ಲಿ ಸರಕಾರ ದ್ವಿತೀಯ ಪಿಯು ತರಗತಿ ಮಾತ್ರ ಆರಂಭಿಸಿ ಪ್ರಥಮ ಪಿಯು ತರಗತಿ ಪ್ರಾರಂಭಿಸದೇ ಇರುವುದು ತಾರತಮ್ಯ ನೀತಿಗೆ ಸಾಕ್ಷಿಯಾಗಿದೆ.

ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಅನ್ಯಾಯ: ಖಾಸಗಿ ಕಾಲೇಜಿನವರು ದ್ವಿತೀಯ ಪಿಯು ಜತೆ ಪ್ರಥಮ ಪಿಯು ತರಗತಿಗಳನ್ನು ಈಗಾಗಲೇ ಆರಂಭಿಸಿದ್ದು, ಸರಕಾರಿ ಜೂನಿಯರ್‌ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಭಾರೀ ಅನ್ಯಾಯವಾಗುತ್ತಿದೆ. ಈಗಾಗಲೇ ರಾಜ್ಯದಲ್ಲಿ ಪದವಿ ಸ್ನಾತಕೋತ್ತರ ತರಗತಿಗಳನ್ನು ವಿಶ್ವವಿದ್ಯಾಲಯಗಳು ಕೋವಿಡ್‌-19 ಮಾರ್ಗಸೂಚಿ ಅನ್ವಯ ಆರಂಭ ಮಾಡಿವೆ.ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಕಡಿಮೆಯಾಗುತ್ತಿವೆ. ಸಿನೆಮಾ ಮಂದಿರಗಳು, ಸಂತೆ, ಜಾತ್ರೆ, ಕೆಎಸ್‌ಆರ್‌ ಟಿಸಿ ಬಸ್‌ಗಳ ಸಂಚಾರ ಎಲ್ಲವೂ ನಡೆದಿದ್ದರೂ ಪ್ರಥಮ ಪಿಯು ತರಗತಿ ಆರಂಭಕ್ಕೆ ಸರಕಾರ ಎಸ್‌ಒಪಿ ಮಾರ್ಗಸೂಚಿಯಂತೆ ಅನುಮತಿ ನೀಡಬೇಕಿದೆ

ಕೆ.ನಿಂಗಜ್ಜ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.