ಅಜ್ಜನ ಜಾತ್ರೆಗೆ ಭಕ್ತ ಮಹಾ ಸಾಗರ
Team Udayavani, Jan 6, 2018, 3:56 PM IST
ಕೊಪ್ಪಳ: ಬುಧವಾರ ಸಂಜೆ ಸೂರ್ಯನು ಇಳಿಜಾರಿನತ್ತ ಸಾಗುವ ಹೊತ್ತಿಗೆ ಹೊತ್ತಿಗೆ ಗವಿಸಿದ್ದೇಶ್ವರ ಮಹಾ ರಥೋತ್ಸವ ಲಕ್ಷ ಲಕ್ಷ ಭಕ್ತ ಸಾಗರದ ಮಧ್ಯೆ ಸಾಂಗವಾಗಿ ಸಾಗಿತು. ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ರಥೋತ್ಸವಕ್ಕೆ ಚಾಲನೆ ನೀಡಿ ಲಕ್ಷಾಂತರ ಭಕ್ತ ಸಾಗರ ನೋಡಿ ಮೂಕ ವಿಸ್ಮಿತರಾಗಿ ಜ್ಜನ ಮಹಾ ಮಹಿಮೆ ಬಗ್ಗೆ ಕೊಂಡಾಡಿದರು.
ಕಳೆದ ನಾಲ್ಕು ವರ್ಷಗಳಿಂದ ಗವಿಸಿದ್ದೇಶ್ವರ ಮಹಾ ಸ್ವಾಮೀಜಿ ಅವರು ನನ್ನನ್ನು ಗವಿಸಿದ್ದೇಶ್ವರ ಜಾತ್ರೆಗೆ ಆಹ್ವಾನ ನೀಡುತ್ತಿದ್ದರು. ಆದರೆ ಇಂದು ಆ ಘಳಿಗೆ ಕೂಡಿಬಂದಿದೆ. ಇದು ಸ್ವರ್ಗದಲ್ಲಿ ನಡೆಯುವಂತಹ ಮಹೋತ್ಸವ ಎಂದೆನಿಸುತ್ತದೆ. ನನ್ನ 80 ವರ್ಷದಲ್ಲಿಯೇ ಇಂತಹ ಲಕ್ಷಾಂತರ ಭಕ್ತ ಸಾಗರದ ಮಧ್ಯೆ ಸಾಗುವ ರಥೋತ್ಸವವನ್ನು ನಾನು ಜನ್ನ ಜೀವನದಲ್ಲಿಯೇ ನೋಡಿಲ್ಲ ಇದು ನನ್ನ ಪುಣ್ಯವೇ ಸರಿ ಎಂದರು.
ಸಂಸ್ಥಾನ ಗವಿಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಮಾತನಾಡಿ ಕತ್ತಲೆಯನ್ನು ಕೋಣೆಯಲ್ಲಿ ಕೂಡಿಟ್ಟರೆ ಹೋಗಲ್ಲ. ಕಟ್ಟಿಗೆಯಿಂದ ಹೊಡೆದೋಡಿಸಿದರೂ ಹೋಗಲ್ಲ. ಆದರೆ ಒಂದು ದೀಪ ಬೆಳಗುವ ಮೂಲಕ ಎಂತಹ ಕತ್ತಲೆಯನ್ನಾದರೂ ಓಡಿಸಬಹುದು. ಮನುಷ್ಯನ ಬದುಕಿನಲ್ಲಿ ಕತ್ತಲೆಯನ್ನೂ ದೂರವಾಗಿಸಿ, ಜೀವನ ಬೆಳಗಿಸುವ ಕೆಲಸ ಮಾಡಬೇಕು ಎಂದು ನುಡಿದರು.
ಜಗತ್ತಿನಲ್ಲಿ ಒಳ್ಳೆಯದು ಹಾಗೂ ಕೆಟ್ಟದ್ದು ಎರಡೂ ಇವೆ. ಕೆಟ್ಟದ್ದನ್ನೇ ದೂಷಿಸುತ್ತಾ ಕುಳಿತರೆ ಯಾವುದೇ ಬೆಳವಣಿಗೆ ಕಾಣಲ್ಲ. ಬದಲಿಗೆ ಒಳ್ಳೆಯ ಮಾತನ್ನಾಡುವ ಮೂಲಕ ಒಳ್ಳೆಯ ಕೆಲಸ ಮಾಡುವ ಮೂಲಕ ಜಗತ್ತನ್ನು ಉದ್ದಾರ ಮಾಡಬಹುದಾಗಿದೆ. ನಮ್ಮ ಜೀವನದಲ್ಲಿ ಉತ್ತಮ ವಿಚಾರ ಅಳವಡಿಸಿಕೊಳ್ಳಬೇಕು ಎಂದರು.
ನಮ್ಮ ಜೀವನ ಪವಿತ್ರವಾಗಲು ಕಾಶಿಗೆ ಹೋಗಿ ಗಂಗೆಯಲ್ಲಿ ಸ್ನಾನ ಮಾಡಿದರೆ ನಮ್ಮ ದೇಹದ ಮೈಲಿಗೆ ಹೋಗುವುದೇ ವಿನಃ ನಮ್ಮ ಮನಸ್ಸಿನ ಮೈಲಿಗೆ ಹೋಗುವುದಿಲ್ಲ. ನಮ್ಮ ಜೀವನ ಪವಿತ್ರವಾಗಲು ಇನ್ನೊಬ್ಬರ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಬೇಕು ಹಾಗೂ ಇನ್ನೊಬ್ಬರ ಮನೆ ಮುರಿದು ಮೋಸ ಮಾಡುವ ಕೆಲಸವನ್ನು ಕೈ ಬಿಟ್ಟರೆ ನಮ್ಮ ಜೀವನ ಸಾರ್ಥಕವಾಗಲಿದೆ.
ಮನುಷ್ಯ ಈ ಎರಡು ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ವರ್ಷದಿಂದ ವರ್ಷಕ್ಕೆ ಗವಿಸಿದ್ದೇಶ್ವರನ ಜಾತ್ರೋತ್ಸವಕ್ಕೆ ಭಕ್ತರು ಬರುವ ಸಂಖ್ಯೆ ಹೆಚ್ಚಾಗುತ್ತಿದೆ.
ಮಠದ ಭಕ್ತರಿಗೆ ಇದು ನಮ್ಮ ಮಠ ಎಂಬ ಭಾವನೆ ಇರುತ್ತದೆಯೋ ಅಲ್ಲಿಯವರೆಗೂ ಮಠ ಬೆಳೆಯುತ್ತದೆ. ಮಠದ ಬಗೆಗಿನ ಯಾವುದೇ ಸುಳ್ಳು ವದಂತಿಗಳಿಗೆ ಕಿವಿಕೊಡಬಾರದು ಎಂದು ಭಕ್ತರಿಗೆ ಮನವಿ ಮಾಡಿದ್ದಲ್ಲದೇ 2019ರ ಜಾತ್ರೆಗೆ ಭಕ್ತ ಸಮೂಹಕ್ಕೆ ಮತ್ತೆ ಆಹ್ವಾನ ನೀಡಿದರು.
ಲಕ್ಷಾಂತರ ಭಕ್ತರ ಉದ್ಘೋಷ: ಪ್ರತಿ ವರ್ಷದಂತೆ ಈ ವರ್ಷವೂ ಸಹ ಲಕ್ಷಾಂತರ ಭಕ್ತರು ಅಜ್ಜನ ಜಾತ್ರೆಯ ಮಹಾರಥೋತ್ಸವ ಕಣ್ತುಂಬಿಕೊಳ್ಳಲು ಆಗಮಿಸಿದ್ದರು. ಸಂಜೆಯಾಗುತ್ತಿದ್ದಂತೆ ಶ್ರೀ ಗವಿಸಿದ್ಧೇಶ್ವರ ಮಹಾರಾಜ್ ಕೀ ಜೈ ಎನ್ನುವ ಉದ್ಘೋಷದೊಂದಿಗೆ ತೇರನ್ನು ಪಾದಗಟ್ಟೆಯವರೆಗೆ ಭಕ್ತಿ ಭಾವದಿಂದ ಎಳೆದರು.
ಗವಿಸಿದ್ಧೇಶ್ವರ ಪ್ರೌಢಶಾಲೆ, ವಸತಿ ಗೃಹ, ಕಾಲೇಜಿನ ಆವರಣದಲ್ಲಿ ಮಹಿಳೆಯರು, ಮಕ್ಕಳು ಜಮಾಯಿಸಿದ್ದರು. ಸುತ್ತಮುತ್ತಲಿನ ಕಟ್ಟಡಗಳ ಮೇಲೂ ಜನಜಂಗುಳಿ ಇತ್ತು. ತೇರು ಪಾದಗಟ್ಟೆಯವರೆಗೆ ಹೊರಡುತ್ತಿದ್ದಂತೆ ಉತ್ತತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ಮುಂಜಾಗ್ರತಾ ಕ್ರಮವಾಗಿ ಮಠದ ಸುತ್ತಮುತ್ತ ಸುಮಾರು 1 ಕಿ.ಮೀ.ವರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ