ವಿರೋಧದ ಮಧ್ಯೆಯೂ ಪೈಪ್‌ ಹಾಕಿದ ಅಧಿಕಾರಿಗಳು; ‌ಯುವಶಕ್ತಿ ಸಂಘದ ಹೋರಾಟಕ್ಕೆ ಜಯ

ನಿಯಮದ ಪ್ರಕಾರ ಕೆಲಸ ಮಾಡುವುದು ಬಿಟ್ಟು ರಸ್ತೆ ಮಧ್ಯೆ ಪೈಪ್‌ ಹಾಕುವುದು ಯಾವ ನ್ಯಾಯ?

Team Udayavani, Apr 1, 2023, 5:09 PM IST

ವಿರೋಧದ ಮಧ್ಯೆಯೂ ಪೈಪ್‌ ಹಾಕಿದ ಅಧಿಕಾರಿಗಳು; ‌ಯುವಶಕ್ತಿ ಸಂಘದ ಹೋರಾಟಕ್ಕೆ ಜಯ

ದೋಟಿಹಾಳ: ಹೈದ್ರಾಬಾದ್‌-ಕರ್ನಾಟಕ ಯುವಶಕ್ತಿ ಸಂಘದವರು ಗ್ರಾಮದ ಮೂರು ಪ್ರಮುಖ ಬೇಡಿಕೆ ಈಡೇರಿಗಾಗಿ ಒತ್ತಾಯಿಸಿ ಧರಣಿ ಸತ್ಯಾಗ್ರಹ ಮಾಡಿದರು. ಈ ವೇಳೆ ತಾತ್ಕಾಲಿಕವಾಗಿ ರಸ್ತೆ ಮಧ್ಯ ಪೈಪ್‌ ಹಾಕಿ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತೇವೆ ಎಂದು ಹೋರಾಟಗಾರರಿಗೆ ಲಿಖೀತ ಭರವಸೆ ನೀಡಿದ ಕಾರಣ ಇಂದು ರಸ್ತೆಯ ಮಧ್ಯೆ ಪೈಪ್‌ ಹಾಕಿ ಸಂಚಾರಕ್ಕೆ ಅನುಕೂಲ ಮಾಡಿದರು.

ಕಳೆದ 5-6 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಕಾಮಗಾರಿ ಕೆಲಸ ಇಂದು ಒಂದು ಹಂತಕ್ಕೆ ಬಂದಿದೆ. ಆದರೆ ರಸ್ತೆ ಅಗಲೀಕರಣದ ನಿಮಯ ಪಾಲಿಸದೇ ಮತ್ತು ದೋಟಿಹಾಳ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿ ಯಾವುದೇ ಕಾರಣಕ್ಕೂ ಪೈಪ್‌ ಹಾಕಲು ನಮ್ಮ ಒಪ್ಪಿಗೆ ಇಲ್ಲ. ರಸ್ತೆ ಅಗಲೀಕರಣ ಮಾಡಿ ಎರಡು ಕಡೆ ಚರಂಡಿ ನಿರ್ಮಿಸಿ ಎಂದು ಜಿಲ್ಲಾಧಿಕಾರಿ, ಸಿಇಒ, ಲೋಕೋಪಯೋಗಿ ಇಲಾಖೆಗೆ 2018ರಲ್ಲಿ ಮನವಿ ಸಲ್ಲಿಸಲಾಗಿದೆ. ಆದರೂ ಇದುವರೆಗೂ ಯಾವುದೇ ಕ್ರಮ ಆಗಿರಲಿಲ್ಲ.

ಕಾಮಗಾರಿ ಸ್ಥಳಕ್ಕೆ ದೋಟಿಹಾಳ ಗ್ರಾಮದ ಮಹಿಳೆಯರು ಆಗಮಿಸಿ ಯಾವುದೇ ಕಾರಣಕ್ಕೂ ರಸ್ತೆ ಮಧ್ಯೆ ಪೈಪ್‌ ಹಾಕಲು ಬಿಡುವುದಿಲ್ಲ. ರಸ್ತೆ ಪಕ್ಕದಲ್ಲಿ ಚರಂಡಿ ಮಾಡಿ. ರಸ್ತೆ ಮಧ್ಯೆ ಪೈಪ್‌ ಹಾಕಿದರೆ ತೊಂದರೆಯಾಗುತ್ತದೆ. ಇದರ ಬಗ್ಗೆ ಈಗಾಗಲೇ ತಹಶೀಲ್ದಾರ್‌ ಅವರಿಗೆ ಮನವಿ ನೀಡಲಾಗಿದೆ. ಈ ವೇಳೆ ಪರಿಸ್ಥಿತಿ ಕೈಮೀರುವ ಲಕ್ಷಣಗಳು ತಿಳಿದ ಪಿಎಸ್‌ಐ ಮೌನೇಶ ರಾಠೊಡ್‌ ಅವರು ಇದು ಸರಕಾರದ ಕೆಲಸವಾಗಿದೆ.

ಸರಕಾರದ ಕೆಲಸಕ್ಕೆ ತೊಂದರೆ ಮಾಡಿದರೆ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಮಹಿಳೆಯರು ಜೆಸಿಬಿ ಹತ್ತಿರ ಹೋಗಿ ನಿಂತರು. ಪರಿಸ್ಥಿತಿ ಕೈಮೀರುವ ಲಕ್ಷಣ ತಿಳಿದು ಲಾಠಿ ಬೀಸಿ ಕೆಲವರನ್ನು ವಶಕ್ಕೆ ಪಡೆದುಕೊಂಡರು.

ಮಹಿಳೆಯರ ಆರೋಪ: ರಸ್ತೆ ಕಾಮಗಾರಿ ನಿಯಮ ಉಲ್ಲಂಘಿಸಿ ಹೋರಾಟಗಾರರ ಒತ್ತಡಕ್ಕೆ ಮಣಿದು ರಸ್ತೆ ಮಧ್ಯೆ ಪೈಪ್‌ ಹಾಕುತ್ತಿರುವುದನ್ನು ಪಶ್ನಿಸಿದರೆ ಪೊಲೀಸರು ಗ್ರಾಮಸ್ಥರನ್ನೇ ವಶಕ್ಕೆ ಪಡೆಯುತ್ತಿದ್ದಾರೆ. ಸರಕಾರದ ನಿಯಮದ ಪ್ರಕಾರ ಕೆಲಸ ಮಾಡುವುದು ಬಿಟ್ಟು ರಸ್ತೆ ಮಧ್ಯೆ ಪೈಪ್‌ ಹಾಕುವುದು ಯಾವ ನ್ಯಾಯ ? ಎಂದು ಅಧಿಕಾರಿಗಳಿಗೆ ಮಹಿಳೆಯರು ಪ್ರಶ್ನೆ ಮಾಡಿದರು.

ಇದಕ್ಕೆ ಬೆಲೆ ಕೊಡದ ಅಧಿಕಾರಿಗಳು ರಸ್ತೆಯ ಮಧ್ಯೆ ಪೈಪ್‌ ಹಾಕಿ ಹೊರಟು ಹೋದ ಅಧಿಕಾರಿಗಳು. ಇದರ ಬಗ್ಗೆ ವಿಚಾರಿಸಲು ತಹಶೀಲ್ದಾರ್‌ ರಾಘವೇಂದ್ರರಾವ್‌ ಕುಲಕರ್ಣಿ ಅವರನ್ನು ಸಂಪರ್ಕಿಸಿದರು ಅವರು ಕರೆ ಸ್ವೀಕರಿಸುತ್ತಿಲ್ಲ.ಸರಕಾರದ ನಿಯಮದ ಪ್ರಕಾರ ರಸ್ತೆ ಅಗಲೀಕರಣ ಮಾಡಿ. ಎರಡು ಕಡೇ ಚರಂಡಿ ನಿರ್ಮಿಸಬೇಕಾದ ಅಧಿಕಾರಿಗಳು ಹೋರಾಟಗಾರರ ಒತ್ತಡಕ್ಕೆ ಮಣಿದು ರಸ್ತೆ ಮಧ್ಯೆ ಪೈಪ್‌ ಹಾಕಿದ್ದಾರೆ. ನಮ್ಮ ಸಮಸ್ಯೆ ಕೇಳುವರು ಯಾರು ಎಂದು ದೋಟಿಹಾಳ ಗ್ರಾಮದ ಮಹಿಳೆಯರು ಅಳಲು ತೋಡಿಕೊಂಡರು.

ತಹಶೀಲ್ದಾರ್‌ ಅವರ ಆದೇಶದ ಮೇರೆಗೆ ಕೆಲಸ ನೀಡುವ ಸ್ಥಳಕ್ಕೆ ಬಂದೋಬಸ್ತ್ ನೀಡಿದ್ದೇವೆ. ಸರ್ಕಾರದ ಕೆಲಸಕ್ಕೆ ಅಡ್ಡಿಪಡಿಸಿದ ಕಾರಣ ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದೇವೆ.
ಮೌನೇಶ ರಾಠೊಡ, ಪಿಎಸ್‌ಐ ಕುಷ್ಟಗಿ

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.