ವಿರೋಧದ ಮಧ್ಯೆಯೂ ಪೈಪ್‌ ಹಾಕಿದ ಅಧಿಕಾರಿಗಳು; ‌ಯುವಶಕ್ತಿ ಸಂಘದ ಹೋರಾಟಕ್ಕೆ ಜಯ

ನಿಯಮದ ಪ್ರಕಾರ ಕೆಲಸ ಮಾಡುವುದು ಬಿಟ್ಟು ರಸ್ತೆ ಮಧ್ಯೆ ಪೈಪ್‌ ಹಾಕುವುದು ಯಾವ ನ್ಯಾಯ?

Team Udayavani, Apr 1, 2023, 5:09 PM IST

ವಿರೋಧದ ಮಧ್ಯೆಯೂ ಪೈಪ್‌ ಹಾಕಿದ ಅಧಿಕಾರಿಗಳು; ‌ಯುವಶಕ್ತಿ ಸಂಘದ ಹೋರಾಟಕ್ಕೆ ಜಯ

ದೋಟಿಹಾಳ: ಹೈದ್ರಾಬಾದ್‌-ಕರ್ನಾಟಕ ಯುವಶಕ್ತಿ ಸಂಘದವರು ಗ್ರಾಮದ ಮೂರು ಪ್ರಮುಖ ಬೇಡಿಕೆ ಈಡೇರಿಗಾಗಿ ಒತ್ತಾಯಿಸಿ ಧರಣಿ ಸತ್ಯಾಗ್ರಹ ಮಾಡಿದರು. ಈ ವೇಳೆ ತಾತ್ಕಾಲಿಕವಾಗಿ ರಸ್ತೆ ಮಧ್ಯ ಪೈಪ್‌ ಹಾಕಿ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತೇವೆ ಎಂದು ಹೋರಾಟಗಾರರಿಗೆ ಲಿಖೀತ ಭರವಸೆ ನೀಡಿದ ಕಾರಣ ಇಂದು ರಸ್ತೆಯ ಮಧ್ಯೆ ಪೈಪ್‌ ಹಾಕಿ ಸಂಚಾರಕ್ಕೆ ಅನುಕೂಲ ಮಾಡಿದರು.

ಕಳೆದ 5-6 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಕಾಮಗಾರಿ ಕೆಲಸ ಇಂದು ಒಂದು ಹಂತಕ್ಕೆ ಬಂದಿದೆ. ಆದರೆ ರಸ್ತೆ ಅಗಲೀಕರಣದ ನಿಮಯ ಪಾಲಿಸದೇ ಮತ್ತು ದೋಟಿಹಾಳ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿ ಯಾವುದೇ ಕಾರಣಕ್ಕೂ ಪೈಪ್‌ ಹಾಕಲು ನಮ್ಮ ಒಪ್ಪಿಗೆ ಇಲ್ಲ. ರಸ್ತೆ ಅಗಲೀಕರಣ ಮಾಡಿ ಎರಡು ಕಡೆ ಚರಂಡಿ ನಿರ್ಮಿಸಿ ಎಂದು ಜಿಲ್ಲಾಧಿಕಾರಿ, ಸಿಇಒ, ಲೋಕೋಪಯೋಗಿ ಇಲಾಖೆಗೆ 2018ರಲ್ಲಿ ಮನವಿ ಸಲ್ಲಿಸಲಾಗಿದೆ. ಆದರೂ ಇದುವರೆಗೂ ಯಾವುದೇ ಕ್ರಮ ಆಗಿರಲಿಲ್ಲ.

ಕಾಮಗಾರಿ ಸ್ಥಳಕ್ಕೆ ದೋಟಿಹಾಳ ಗ್ರಾಮದ ಮಹಿಳೆಯರು ಆಗಮಿಸಿ ಯಾವುದೇ ಕಾರಣಕ್ಕೂ ರಸ್ತೆ ಮಧ್ಯೆ ಪೈಪ್‌ ಹಾಕಲು ಬಿಡುವುದಿಲ್ಲ. ರಸ್ತೆ ಪಕ್ಕದಲ್ಲಿ ಚರಂಡಿ ಮಾಡಿ. ರಸ್ತೆ ಮಧ್ಯೆ ಪೈಪ್‌ ಹಾಕಿದರೆ ತೊಂದರೆಯಾಗುತ್ತದೆ. ಇದರ ಬಗ್ಗೆ ಈಗಾಗಲೇ ತಹಶೀಲ್ದಾರ್‌ ಅವರಿಗೆ ಮನವಿ ನೀಡಲಾಗಿದೆ. ಈ ವೇಳೆ ಪರಿಸ್ಥಿತಿ ಕೈಮೀರುವ ಲಕ್ಷಣಗಳು ತಿಳಿದ ಪಿಎಸ್‌ಐ ಮೌನೇಶ ರಾಠೊಡ್‌ ಅವರು ಇದು ಸರಕಾರದ ಕೆಲಸವಾಗಿದೆ.

ಸರಕಾರದ ಕೆಲಸಕ್ಕೆ ತೊಂದರೆ ಮಾಡಿದರೆ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಮಹಿಳೆಯರು ಜೆಸಿಬಿ ಹತ್ತಿರ ಹೋಗಿ ನಿಂತರು. ಪರಿಸ್ಥಿತಿ ಕೈಮೀರುವ ಲಕ್ಷಣ ತಿಳಿದು ಲಾಠಿ ಬೀಸಿ ಕೆಲವರನ್ನು ವಶಕ್ಕೆ ಪಡೆದುಕೊಂಡರು.

ಮಹಿಳೆಯರ ಆರೋಪ: ರಸ್ತೆ ಕಾಮಗಾರಿ ನಿಯಮ ಉಲ್ಲಂಘಿಸಿ ಹೋರಾಟಗಾರರ ಒತ್ತಡಕ್ಕೆ ಮಣಿದು ರಸ್ತೆ ಮಧ್ಯೆ ಪೈಪ್‌ ಹಾಕುತ್ತಿರುವುದನ್ನು ಪಶ್ನಿಸಿದರೆ ಪೊಲೀಸರು ಗ್ರಾಮಸ್ಥರನ್ನೇ ವಶಕ್ಕೆ ಪಡೆಯುತ್ತಿದ್ದಾರೆ. ಸರಕಾರದ ನಿಯಮದ ಪ್ರಕಾರ ಕೆಲಸ ಮಾಡುವುದು ಬಿಟ್ಟು ರಸ್ತೆ ಮಧ್ಯೆ ಪೈಪ್‌ ಹಾಕುವುದು ಯಾವ ನ್ಯಾಯ ? ಎಂದು ಅಧಿಕಾರಿಗಳಿಗೆ ಮಹಿಳೆಯರು ಪ್ರಶ್ನೆ ಮಾಡಿದರು.

ಇದಕ್ಕೆ ಬೆಲೆ ಕೊಡದ ಅಧಿಕಾರಿಗಳು ರಸ್ತೆಯ ಮಧ್ಯೆ ಪೈಪ್‌ ಹಾಕಿ ಹೊರಟು ಹೋದ ಅಧಿಕಾರಿಗಳು. ಇದರ ಬಗ್ಗೆ ವಿಚಾರಿಸಲು ತಹಶೀಲ್ದಾರ್‌ ರಾಘವೇಂದ್ರರಾವ್‌ ಕುಲಕರ್ಣಿ ಅವರನ್ನು ಸಂಪರ್ಕಿಸಿದರು ಅವರು ಕರೆ ಸ್ವೀಕರಿಸುತ್ತಿಲ್ಲ.ಸರಕಾರದ ನಿಯಮದ ಪ್ರಕಾರ ರಸ್ತೆ ಅಗಲೀಕರಣ ಮಾಡಿ. ಎರಡು ಕಡೇ ಚರಂಡಿ ನಿರ್ಮಿಸಬೇಕಾದ ಅಧಿಕಾರಿಗಳು ಹೋರಾಟಗಾರರ ಒತ್ತಡಕ್ಕೆ ಮಣಿದು ರಸ್ತೆ ಮಧ್ಯೆ ಪೈಪ್‌ ಹಾಕಿದ್ದಾರೆ. ನಮ್ಮ ಸಮಸ್ಯೆ ಕೇಳುವರು ಯಾರು ಎಂದು ದೋಟಿಹಾಳ ಗ್ರಾಮದ ಮಹಿಳೆಯರು ಅಳಲು ತೋಡಿಕೊಂಡರು.

ತಹಶೀಲ್ದಾರ್‌ ಅವರ ಆದೇಶದ ಮೇರೆಗೆ ಕೆಲಸ ನೀಡುವ ಸ್ಥಳಕ್ಕೆ ಬಂದೋಬಸ್ತ್ ನೀಡಿದ್ದೇವೆ. ಸರ್ಕಾರದ ಕೆಲಸಕ್ಕೆ ಅಡ್ಡಿಪಡಿಸಿದ ಕಾರಣ ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದೇವೆ.
ಮೌನೇಶ ರಾಠೊಡ, ಪಿಎಸ್‌ಐ ಕುಷ್ಟಗಿ

ಟಾಪ್ ನ್ಯೂಸ್

Terror 2

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

Actor Rahul Bose:ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

1-sdsad

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala

ಕೊಪ್ಪಳ: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ- ರಾಘವೇಂದ್ರ ಹಿಟ್ನಾಳ

KRIDL ಇಂಜಿನೀಯರ್ ಮನೆ ಮೇಲೆ ದಾಳಿ ಲೋಕಾಯುಕ್ತ ದಾಳಿ

KRIDL ಇಂಜಿನೀಯರ್ ಮನೆ ಮೇಲೆ ದಾಳಿ ಲೋಕಾಯುಕ್ತ ದಾಳಿ

Kushtagi; ಅಕ್ರಮ ಸಂಬಂಧ; ಮನನೊಂದ ಪಾಗಲ್ ಪ್ರೇಮಿಗಳು ಆತ್ಮಹತ್ಯೆ

Kushtagi; ಅಕ್ರಮ ಸಂಬಂಧ; ಮನನೊಂದು ಪ್ರೇಮಿಗಳು ಆತ್ಮಹತ್ಯೆ

6-dotihala

Dotihala: ವಿದ್ಯುತ್‌ ಅವಗಡ, 10 ಕ್ಕೂ ಹೆಚ್ಚು ಜಾನುವಾರು ಬಲಿ

ಕೊಪ್ಪಳ: ನೆರೆಪೀಡಿತ ಹಳ್ಳಿಗಳ ಮೇಲೆ ನಿಗಾ ಇಡಿ

ಕೊಪ್ಪಳ: ನೆರೆಪೀಡಿತ ಹಳ್ಳಿಗಳ ಮೇಲೆ ನಿಗಾ ಇಡಿ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಯಲ್ಲಾಪುರ:ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ನೆಲೆಸಬೇಡಿ- ಡಾ| ವಿಜಯ ಸಂಕೇಶ್ವರ

ಯಲ್ಲಾಪುರ:ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ನೆಲೆಸಬೇಡಿ- ಡಾ| ವಿಜಯ ಸಂಕೇಶ್ವರ

Terror 2

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

ಅಧಿಕಾರಿಗಳಿಂದ ಮತ ಎಣಿಕೆಯಲ್ಲಿ ಪಕ್ಷಪಾತ ಆರೋಪ

ಅಧಿಕಾರಿಗಳಿಂದ ಮತ ಎಣಿಕೆಯಲ್ಲಿ ಪಕ್ಷಪಾತ ಆರೋಪ

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ